9:27 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,…

ಇತ್ತೀಚಿನ ಸುದ್ದಿ

ಮಾವು ಮಾರುಕಟ್ಟೆ ಮಧ್ಯಪ್ರವೇಶ; ಬೆಲೆ ವ್ಯತ್ಯಾಸ ಪಾವತಿಗೆ ಸರ್ಕಾರದ ಒಪ್ಪಿಗೆ: ಸಚಿವ ಚಲುವರಾಯಸ್ವಾಮಿ

22/06/2025, 00:15

ಬೆಂಗಳೂರು(reporterkarnataka.com):ನಿರಂತರ ಬೆಲೆ ಕುಸಿತದಿಂದ ಕಂಗೆಟ್ಟಿದ್ದ ಮಾವು ಬೆಳೆಗಾರರ ನೆರವಿಗೆ ಸರ್ಕಾರ ಧಾವಿಸಿದೆ.
ರಾಜ್ಯದಲ್ಲಿ ಮಾವಿನ‌ ಬೆಲೆ ಕುಸಿತದ ಹಿನ್ನಲೆ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ನೆರವಾಗುವಂತೆ ರಾಜ್ಯ ಸರ್ಕಾರದ ಮನವಿಗೆ ಕೇಂದ್ರವೂ ಸಕಾರಾತ್ಮಕ ಸಮ್ಮತಿ ನೀಡಿದೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರೆಡೂ ಪ್ರತಿ ಕೆ.ಜಿ.ಗೆ ಎರೆಡೆರೆಡು ರೂ ಗಳಂತೆ ಒಟ್ಟು‌ 4 ರೂ ವೆತ್ಯಾಸ ಪಾವತಿಸಿ ಮಾರುಕಟ್ಟೆ ಚೈತನ್ಯಕ್ಕೆ ಕ್ರಮಕೈಗೊಳ್ಳಲು ಸಿದ್ದತೆ ನಡೆಸಿವೆ.
ಇಂದು ರಾಜ್ಯ ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರು ವಿಡಿಯೋ‌ ಸಂವಾದದ ಮೂಲಕ ಕೇಂದ್ರ ಕೃಷಿ ಸಚಿವರಾ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಮಾವು ಬೆಳೆಗಾರರ ಪರಿಸ್ಥಿತಿ ಮನವರಿಕೆ ಮಾಡಿಕೊಟ್ಟರು.
2025-26ನೇ ಸಾಲಿನ ಮಾರುಕಟ್ಟೆ ಋತುವಿನಲ್ಲಿ ಮಾವಿಗೆ PDPS ಯೋಜನೆಯ ಅನುಷ್ಠಾನಕ್ಕೆ ಸಚಿವ ಚಲುವರಾಯಸ್ವಾಮಿ ಅವರು ಮಾಡಿದ ಮನವಿಗೆ ಕೇಂದ್ರ ಕೃಷಿ ಸಚಿವರೂ ಸಹ ಸಮ್ಮತಿ ನೀಡಿದರು.
2.5 ಲಕ್ಷ ಮೆಟ್ರಿಕ್ ಟನ್ ಮಾವು ಖರೀದಿಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.
ಸೋಮವಾರ ಈ‌ ಬಗ್ಗೆ ಅಧಿಕೃತ ಆದೇಶ ಹೊರಬೀಳುವ ನಿರೀಕ್ಷೆ ‌ಇದೆ.
ಈ‌ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ,ಕೃಷಿ ,ತೋಟಗಾರಿಕೆ ಇಲಾಖೆ‌ ಅಧಿಕಾರಿಗಳು ಹಾಜರಿದ್ದರು.ಮಾವು ಕರ್ನಾಟಕದ ಪ್ರಮುಖ ತೋಟಗಾರಿಕಾ ಬೆಳೆಗಳಲ್ಲೊಂದಾಗಿದೆ.2025-26ನೇ ಋತುವಿನಲ್ಲಿ 1.39 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗಿದೆ.
ಈ ಬಾರಿ ಅಂದಾಜು 08 ರಿಂದ 10 ಲಕ್ಷ ಟನ್ ಮಾವು ಉತ್ಪಾದನೆಯಾಗಿದೆ.ರಾಜ್ಯದಲ್ಲಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ರಾಮನಗರ ಪ್ರಮುಖ ಮಾವು ಬೆಳೆ ಪ್ರದೇಶಗಳಾಗಿವೆ.
ಕರ್ನಾಟಕದಲ್ಲಿ, ಮಾವಿನ ಕೊಯ್ಲು ಮೇ ನಿಂದ ಜುಲೈ ವರೆಗೆ ನಡೆಯುತ್ತದೆ. ಈ ಅವಧಿಯಲ್ಲಿ, ಮಾರುಕಟ್ಟೆ ಬೆಲೆಗಳಲ್ಲಿ ಗಮನಾರ್ಹ ಏರಿಳಿತಗಳನ್ನು ಗಮನಿಸಲಾಗಿದೆ.
ಮೇ 2025 ರಲ್ಲಿ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ರಾಮನಗರದ ಪ್ರಮುಖ ಮಾರುಕಟ್ಟೆಗಳಲ್ಲಿ ಮಾವಿನ ಹಣ್ಣಿನ ಮಾದರಿ ಬೆಲೆಗಳು ಕ್ವಿಂಟಾಲ್‌ಗೆ ರೂ.1,200 ರಿಂದ ರೂ.2,500 ರವರೆಗೆ ಇತ್ತು.
ಶ್ರೀನಿವಾಸಪುರ ಮಾರುಕಟ್ಟೆಯಲ್ಲಿ ತೋತಾಪುರಿ ವರಿಟೆಯ ಚಾಲ್ತಿಯಲ್ಲಿರುವ ಮಾರುಕಟ್ಟೆ ಬೆಲೆಗಳು ಪ್ರತಿ ಕ್ವಿಂಟಾಲ್‌ಗೆ 450-550 ರೂಗೆ ಕುಸಿದಿದೆ.
ಕರ್ನಾಟಕ ಕೃಷಿ ಬೆಲೆ ಆಯೋಗವು ಮಾವಿನ A1 + FL ಕೃಷಿ ವೆಚ್ಚವನ್ನು ಕ್ವಿಂಟಲ್‌ಗೆ 3,460 ರೂ. ಮತ್ತು C-3 ವೆಚ್ಚಕ್ಕೆ 5,466 ರೂ. ಎಂದು ಶಿಫಾರಸು ಮಾಡಿದೆ.
ಈ ನಿಟ್ಟಿನಲ್ಲಿ 11.06.2025 ರಂದು ಭಾರತ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಯಿತು ಮತ್ತು 13.06.2025 ರಂದು ಸ್ಪಷ್ಟೀಕರಣಗಳಿಗೆ ಉತ್ತರವನ್ನು ನೀಡಲಾಯಿತು.
ತೋಟಗಾರಿಕೆ ಇಲಾಖೆಯ ಅಡಿಯಲ್ಲಿ ಬರುವ ಕರ್ನಾಟಕ ಮಾವು ಅಭಿವೃದ್ಧಿ ಮಂಡಳಿಯನ್ನು PDPS ಅನುಷ್ಠಾನಕ್ಕಾಗಿ ರಾಜ್ಯ ಮಟ್ಟದ ಸಂಸ್ಥೆಯಾಗಿ ಗೊತ್ತುಪಡಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು