9:59 PM Sunday28 - June 2026
ಬ್ರೇಕಿಂಗ್ ನ್ಯೂಸ್
ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ…

ಇತ್ತೀಚಿನ ಸುದ್ದಿ

ಮಾವು ಮಾರುಕಟ್ಟೆ ಮಧ್ಯಪ್ರವೇಶ; ಬೆಲೆ ವ್ಯತ್ಯಾಸ ಪಾವತಿಗೆ ಸರ್ಕಾರದ ಒಪ್ಪಿಗೆ: ಸಚಿವ ಚಲುವರಾಯಸ್ವಾಮಿ

22/06/2025, 00:15

ಬೆಂಗಳೂರು(reporterkarnataka.com):ನಿರಂತರ ಬೆಲೆ ಕುಸಿತದಿಂದ ಕಂಗೆಟ್ಟಿದ್ದ ಮಾವು ಬೆಳೆಗಾರರ ನೆರವಿಗೆ ಸರ್ಕಾರ ಧಾವಿಸಿದೆ.
ರಾಜ್ಯದಲ್ಲಿ ಮಾವಿನ‌ ಬೆಲೆ ಕುಸಿತದ ಹಿನ್ನಲೆ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ನೆರವಾಗುವಂತೆ ರಾಜ್ಯ ಸರ್ಕಾರದ ಮನವಿಗೆ ಕೇಂದ್ರವೂ ಸಕಾರಾತ್ಮಕ ಸಮ್ಮತಿ ನೀಡಿದೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರೆಡೂ ಪ್ರತಿ ಕೆ.ಜಿ.ಗೆ ಎರೆಡೆರೆಡು ರೂ ಗಳಂತೆ ಒಟ್ಟು‌ 4 ರೂ ವೆತ್ಯಾಸ ಪಾವತಿಸಿ ಮಾರುಕಟ್ಟೆ ಚೈತನ್ಯಕ್ಕೆ ಕ್ರಮಕೈಗೊಳ್ಳಲು ಸಿದ್ದತೆ ನಡೆಸಿವೆ.
ಇಂದು ರಾಜ್ಯ ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರು ವಿಡಿಯೋ‌ ಸಂವಾದದ ಮೂಲಕ ಕೇಂದ್ರ ಕೃಷಿ ಸಚಿವರಾ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಮಾವು ಬೆಳೆಗಾರರ ಪರಿಸ್ಥಿತಿ ಮನವರಿಕೆ ಮಾಡಿಕೊಟ್ಟರು.
2025-26ನೇ ಸಾಲಿನ ಮಾರುಕಟ್ಟೆ ಋತುವಿನಲ್ಲಿ ಮಾವಿಗೆ PDPS ಯೋಜನೆಯ ಅನುಷ್ಠಾನಕ್ಕೆ ಸಚಿವ ಚಲುವರಾಯಸ್ವಾಮಿ ಅವರು ಮಾಡಿದ ಮನವಿಗೆ ಕೇಂದ್ರ ಕೃಷಿ ಸಚಿವರೂ ಸಹ ಸಮ್ಮತಿ ನೀಡಿದರು.
2.5 ಲಕ್ಷ ಮೆಟ್ರಿಕ್ ಟನ್ ಮಾವು ಖರೀದಿಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.
ಸೋಮವಾರ ಈ‌ ಬಗ್ಗೆ ಅಧಿಕೃತ ಆದೇಶ ಹೊರಬೀಳುವ ನಿರೀಕ್ಷೆ ‌ಇದೆ.
ಈ‌ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ,ಕೃಷಿ ,ತೋಟಗಾರಿಕೆ ಇಲಾಖೆ‌ ಅಧಿಕಾರಿಗಳು ಹಾಜರಿದ್ದರು.ಮಾವು ಕರ್ನಾಟಕದ ಪ್ರಮುಖ ತೋಟಗಾರಿಕಾ ಬೆಳೆಗಳಲ್ಲೊಂದಾಗಿದೆ.2025-26ನೇ ಋತುವಿನಲ್ಲಿ 1.39 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗಿದೆ.
ಈ ಬಾರಿ ಅಂದಾಜು 08 ರಿಂದ 10 ಲಕ್ಷ ಟನ್ ಮಾವು ಉತ್ಪಾದನೆಯಾಗಿದೆ.ರಾಜ್ಯದಲ್ಲಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ರಾಮನಗರ ಪ್ರಮುಖ ಮಾವು ಬೆಳೆ ಪ್ರದೇಶಗಳಾಗಿವೆ.
ಕರ್ನಾಟಕದಲ್ಲಿ, ಮಾವಿನ ಕೊಯ್ಲು ಮೇ ನಿಂದ ಜುಲೈ ವರೆಗೆ ನಡೆಯುತ್ತದೆ. ಈ ಅವಧಿಯಲ್ಲಿ, ಮಾರುಕಟ್ಟೆ ಬೆಲೆಗಳಲ್ಲಿ ಗಮನಾರ್ಹ ಏರಿಳಿತಗಳನ್ನು ಗಮನಿಸಲಾಗಿದೆ.
ಮೇ 2025 ರಲ್ಲಿ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ರಾಮನಗರದ ಪ್ರಮುಖ ಮಾರುಕಟ್ಟೆಗಳಲ್ಲಿ ಮಾವಿನ ಹಣ್ಣಿನ ಮಾದರಿ ಬೆಲೆಗಳು ಕ್ವಿಂಟಾಲ್‌ಗೆ ರೂ.1,200 ರಿಂದ ರೂ.2,500 ರವರೆಗೆ ಇತ್ತು.
ಶ್ರೀನಿವಾಸಪುರ ಮಾರುಕಟ್ಟೆಯಲ್ಲಿ ತೋತಾಪುರಿ ವರಿಟೆಯ ಚಾಲ್ತಿಯಲ್ಲಿರುವ ಮಾರುಕಟ್ಟೆ ಬೆಲೆಗಳು ಪ್ರತಿ ಕ್ವಿಂಟಾಲ್‌ಗೆ 450-550 ರೂಗೆ ಕುಸಿದಿದೆ.
ಕರ್ನಾಟಕ ಕೃಷಿ ಬೆಲೆ ಆಯೋಗವು ಮಾವಿನ A1 + FL ಕೃಷಿ ವೆಚ್ಚವನ್ನು ಕ್ವಿಂಟಲ್‌ಗೆ 3,460 ರೂ. ಮತ್ತು C-3 ವೆಚ್ಚಕ್ಕೆ 5,466 ರೂ. ಎಂದು ಶಿಫಾರಸು ಮಾಡಿದೆ.
ಈ ನಿಟ್ಟಿನಲ್ಲಿ 11.06.2025 ರಂದು ಭಾರತ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಯಿತು ಮತ್ತು 13.06.2025 ರಂದು ಸ್ಪಷ್ಟೀಕರಣಗಳಿಗೆ ಉತ್ತರವನ್ನು ನೀಡಲಾಯಿತು.
ತೋಟಗಾರಿಕೆ ಇಲಾಖೆಯ ಅಡಿಯಲ್ಲಿ ಬರುವ ಕರ್ನಾಟಕ ಮಾವು ಅಭಿವೃದ್ಧಿ ಮಂಡಳಿಯನ್ನು PDPS ಅನುಷ್ಠಾನಕ್ಕಾಗಿ ರಾಜ್ಯ ಮಟ್ಟದ ಸಂಸ್ಥೆಯಾಗಿ ಗೊತ್ತುಪಡಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು