4:45 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ಮಣಿನಾಲ್ಕೂರು: ‘ಯಕ್ಷ ಧ್ರುವ- ಯಕ್ಷ ಶಿಕ್ಷಣ’ ಯಕ್ಷಗಾನ ನಾಟ್ಯ ತರಗತಿ ಉದ್ಘಾಟನೆ

28/06/2024, 11:49

ಬಂಟ್ವಾಳ(reporterkarnataka.com): ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ( ರಿ) ಮಂಗಳೂರು ಇದರ ಯಕ್ಷ ಶಿಕ್ಷಣ ಯಕ್ಷಗಾನ ತರಬೇತಿ ಅಭಿಯಾನದಡಿ ನಡೆಯುತ್ತಿರುವ ಯಕ್ಷ ಶಿಕ್ಷಣ ತರಗತಿಯನ್ನು ಮಣಿನಾಲ್ಕೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪಟ್ಲ ಫೌಂಡೇಶನ್ ಸರಪಾಡಿ ಘಟಕದ ಅಧ್ಯಕ್ಷ ಶಶಿಕಾಂತ್ ಶೆಟ್ಟಿ ಆರುಮುಡಿ ಉದ್ಘಾಟಿಸಿದರು.
ಎಸ್ ಡಿ ಎಂ ಸಿ ಅಧ್ಯಕ್ಷೆ ಸುಧಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪಟ್ಲ ಫೌಂಡೇಶನ್ ಸರಪಾಡಿ ಘಟಕದ ಸಂಚಾಲಕ
ಅಶೋಕ್ ಶೆಟ್ಟಿ ಸರಪಾಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಯಕ್ಷಗಾನ ಕಲಾವಿದರಾದ ದಿನೇಶ್ ಶೆಟ್ಟಿ ಕಾವಳಕಟ್ಟೆ, ಪಟ್ಲ ಫೌಂಡೇಶನ್ ಸರಪಾಡಿ ಘಟಕದ ಕಾರ್ಯದರ್ಶಿ ಧನಂಜಯ ಶೆಟ್ಟಿ ಸರಪಾಡಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ದಯಾನಂದ ಶೆಟ್ಟಿ ಅಮೈ, ಪಟ್ಲ ಫೌಂಡೆಶನ್ ಪುಂಜಾಲಕಟ್ಟೆ ಘಟಕದ ಅಧ್ಯಕ್ಷ ಯಶೋಧರ್ ಶೆಟ್ಟಿ ದಂಡೆ, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಅಶೋಕ್ ಶೆಟ್ಟಿ ಕೋಡಿಮಾರು, ಎಸ್ ಡಿ ಎಂ ಸಿ ಯ ನಿಕಟಪೂರ್ವ ಅಧ್ಯಕ್ಷ ರಾಜೇಶ್ ಶೆಟ್ಟಿ, ಹಾಗೂ ಬಾಲಕೃಷ್ಣ ಶೆಟ್ಟಿ ಬಾರತ್ತ್ಯಾರು ಅವರು ಉಪಸ್ಥಿತರಿದ್ದರು. ಶಿಕ್ಷಕ ಉದಯ ಕುಮಾರ್ ಸ್ವಾಗತಿಸಿದರು.
ಶಾಲಾ ಶಿಕ್ಷಕಿ ರಾಜೇಶ್ವರಿ .ಜಿ ಕಾರ್ಯಕ್ರಮ ನಿರೂಪಿಸಿದರು.
ಶಿಕ್ಷಕಿ ಸೌಮ್ಯ ವಂದಿಸಿದರು. ಯಕ್ಷಶಿಕ್ಷಣದ ಯಕ್ಷ ಗುರುಗಳಾದ ಸಾಯಿ ಸುಮ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿ , ನಾಟ್ಯ ತರಬೇತಿಗೆ ಚಾಲನೆ ನೀಡಿದರು. ಸಂಸ್ಥೆಯ ದೈಹಿಕ ಶಿಕ್ಷಕ ಪ್ರಕಾಶ್ ಟಿ , ಶಿಕ್ಷಕಿ ನೇಹಾ ಹಾಗೂ ಬೋಧಕೇತರ ವೃಂದದವರು ಸಹಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು