3:10 PM Thursday4 - June 2026
ಬ್ರೇಕಿಂಗ್ ನ್ಯೂಸ್
ಕೊಡಗು ಜಿಲ್ಲೆಯಲ್ಲಿ ಜುಲೈ 30ರವರೆಗೆ ಮೀನುಗಾರಿಕೆ ನಿಷೇಧ ಯು.ಟಿ. ಖಾದರ್: ಸ್ಪೀಕರ್ ಸ್ಥಾನದಿಂದ ಮತ್ತೆ ಸಕ್ರೀಯ ರಾಜಕೀಯಕ್ಕೆ; ಡಿಕೆಶಿ ಸಂಪುಟದಲ್ಲಿ ಸಚಿವ… ಡಿ.ಕೆ. ಶಿವಕುಮಾರ್ ರಾಜ್ಯಭಾರ ಶುರು: ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ತಮಿಳುನಾಡು ಬಿಜೆಪಿ ನಾಯಕ ಅಣ್ಣಾಮಲೈ ರಾಜೀನಾಮೆ: ನೂತನ ಪಕ್ಷ ಸ್ಥಾಪನೆ? ತಮಿಳುನಾಡಿನಲ್ಲಿ ಸಂಚಲನ ಸೃಷ್ಟಿಸಿದ ಅಣ್ಣಾಮಲೈ ನಡೆ; ಬಿಜೆಪಿಗೆ ಶುರುವಾಯ್ತು ಢವ ಢವ ನಾವು ಪಕ್ಷನಿಷ್ಠರು, ಜಮೀರ್‌ ವಿರುದ್ದ ಬೃಹತ್‌ ಷಡ್ಯಂತ್ರ: ವೈರಲ್‌ ಆಡಿಯೋ ಬಗ್ಗೆ ಸಿರಾಜ್‌… ಪಕ್ಷ ವಿರೋಧಿ ಕೃತ್ಯಕ್ಕೆ ಸಿಕ್ತು ಸಾಕ್ಷ್ಯ: ಜಮೀರ್ ಅಹ್ಮದ್ ಸ್ಫೋಟಕ ಆಡಿಯೋ ವೈರಲ್ ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಳಿಸಿ ಅಪಮಾನ: ಮಂಗಳೂರಿನಲ್ಲಿ ಕೇಂದ್ರ… Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ…

ಇತ್ತೀಚಿನ ಸುದ್ದಿ

ಮಣಿನಾಲ್ಕೂರು: ‘ಯಕ್ಷ ಧ್ರುವ- ಯಕ್ಷ ಶಿಕ್ಷಣ’ ಯಕ್ಷಗಾನ ನಾಟ್ಯ ತರಗತಿ ಉದ್ಘಾಟನೆ

28/06/2024, 11:49

ಬಂಟ್ವಾಳ(reporterkarnataka.com): ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ( ರಿ) ಮಂಗಳೂರು ಇದರ ಯಕ್ಷ ಶಿಕ್ಷಣ ಯಕ್ಷಗಾನ ತರಬೇತಿ ಅಭಿಯಾನದಡಿ ನಡೆಯುತ್ತಿರುವ ಯಕ್ಷ ಶಿಕ್ಷಣ ತರಗತಿಯನ್ನು ಮಣಿನಾಲ್ಕೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪಟ್ಲ ಫೌಂಡೇಶನ್ ಸರಪಾಡಿ ಘಟಕದ ಅಧ್ಯಕ್ಷ ಶಶಿಕಾಂತ್ ಶೆಟ್ಟಿ ಆರುಮುಡಿ ಉದ್ಘಾಟಿಸಿದರು.
ಎಸ್ ಡಿ ಎಂ ಸಿ ಅಧ್ಯಕ್ಷೆ ಸುಧಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪಟ್ಲ ಫೌಂಡೇಶನ್ ಸರಪಾಡಿ ಘಟಕದ ಸಂಚಾಲಕ
ಅಶೋಕ್ ಶೆಟ್ಟಿ ಸರಪಾಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಯಕ್ಷಗಾನ ಕಲಾವಿದರಾದ ದಿನೇಶ್ ಶೆಟ್ಟಿ ಕಾವಳಕಟ್ಟೆ, ಪಟ್ಲ ಫೌಂಡೇಶನ್ ಸರಪಾಡಿ ಘಟಕದ ಕಾರ್ಯದರ್ಶಿ ಧನಂಜಯ ಶೆಟ್ಟಿ ಸರಪಾಡಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ದಯಾನಂದ ಶೆಟ್ಟಿ ಅಮೈ, ಪಟ್ಲ ಫೌಂಡೆಶನ್ ಪುಂಜಾಲಕಟ್ಟೆ ಘಟಕದ ಅಧ್ಯಕ್ಷ ಯಶೋಧರ್ ಶೆಟ್ಟಿ ದಂಡೆ, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಅಶೋಕ್ ಶೆಟ್ಟಿ ಕೋಡಿಮಾರು, ಎಸ್ ಡಿ ಎಂ ಸಿ ಯ ನಿಕಟಪೂರ್ವ ಅಧ್ಯಕ್ಷ ರಾಜೇಶ್ ಶೆಟ್ಟಿ, ಹಾಗೂ ಬಾಲಕೃಷ್ಣ ಶೆಟ್ಟಿ ಬಾರತ್ತ್ಯಾರು ಅವರು ಉಪಸ್ಥಿತರಿದ್ದರು. ಶಿಕ್ಷಕ ಉದಯ ಕುಮಾರ್ ಸ್ವಾಗತಿಸಿದರು.
ಶಾಲಾ ಶಿಕ್ಷಕಿ ರಾಜೇಶ್ವರಿ .ಜಿ ಕಾರ್ಯಕ್ರಮ ನಿರೂಪಿಸಿದರು.
ಶಿಕ್ಷಕಿ ಸೌಮ್ಯ ವಂದಿಸಿದರು. ಯಕ್ಷಶಿಕ್ಷಣದ ಯಕ್ಷ ಗುರುಗಳಾದ ಸಾಯಿ ಸುಮ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿ , ನಾಟ್ಯ ತರಬೇತಿಗೆ ಚಾಲನೆ ನೀಡಿದರು. ಸಂಸ್ಥೆಯ ದೈಹಿಕ ಶಿಕ್ಷಕ ಪ್ರಕಾಶ್ ಟಿ , ಶಿಕ್ಷಕಿ ನೇಹಾ ಹಾಗೂ ಬೋಧಕೇತರ ವೃಂದದವರು ಸಹಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು