5:03 AM Thursday30 - April 2026
ಬ್ರೇಕಿಂಗ್ ನ್ಯೂಸ್
ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು…

ಇತ್ತೀಚಿನ ಸುದ್ದಿ

ಮಣಿನಾಲ್ಕೂರು: ‘ಯಕ್ಷ ಧ್ರುವ- ಯಕ್ಷ ಶಿಕ್ಷಣ’ ಯಕ್ಷಗಾನ ನಾಟ್ಯ ತರಗತಿ ಉದ್ಘಾಟನೆ

28/06/2024, 11:49

ಬಂಟ್ವಾಳ(reporterkarnataka.com): ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ( ರಿ) ಮಂಗಳೂರು ಇದರ ಯಕ್ಷ ಶಿಕ್ಷಣ ಯಕ್ಷಗಾನ ತರಬೇತಿ ಅಭಿಯಾನದಡಿ ನಡೆಯುತ್ತಿರುವ ಯಕ್ಷ ಶಿಕ್ಷಣ ತರಗತಿಯನ್ನು ಮಣಿನಾಲ್ಕೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪಟ್ಲ ಫೌಂಡೇಶನ್ ಸರಪಾಡಿ ಘಟಕದ ಅಧ್ಯಕ್ಷ ಶಶಿಕಾಂತ್ ಶೆಟ್ಟಿ ಆರುಮುಡಿ ಉದ್ಘಾಟಿಸಿದರು.
ಎಸ್ ಡಿ ಎಂ ಸಿ ಅಧ್ಯಕ್ಷೆ ಸುಧಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪಟ್ಲ ಫೌಂಡೇಶನ್ ಸರಪಾಡಿ ಘಟಕದ ಸಂಚಾಲಕ
ಅಶೋಕ್ ಶೆಟ್ಟಿ ಸರಪಾಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಯಕ್ಷಗಾನ ಕಲಾವಿದರಾದ ದಿನೇಶ್ ಶೆಟ್ಟಿ ಕಾವಳಕಟ್ಟೆ, ಪಟ್ಲ ಫೌಂಡೇಶನ್ ಸರಪಾಡಿ ಘಟಕದ ಕಾರ್ಯದರ್ಶಿ ಧನಂಜಯ ಶೆಟ್ಟಿ ಸರಪಾಡಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ದಯಾನಂದ ಶೆಟ್ಟಿ ಅಮೈ, ಪಟ್ಲ ಫೌಂಡೆಶನ್ ಪುಂಜಾಲಕಟ್ಟೆ ಘಟಕದ ಅಧ್ಯಕ್ಷ ಯಶೋಧರ್ ಶೆಟ್ಟಿ ದಂಡೆ, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಅಶೋಕ್ ಶೆಟ್ಟಿ ಕೋಡಿಮಾರು, ಎಸ್ ಡಿ ಎಂ ಸಿ ಯ ನಿಕಟಪೂರ್ವ ಅಧ್ಯಕ್ಷ ರಾಜೇಶ್ ಶೆಟ್ಟಿ, ಹಾಗೂ ಬಾಲಕೃಷ್ಣ ಶೆಟ್ಟಿ ಬಾರತ್ತ್ಯಾರು ಅವರು ಉಪಸ್ಥಿತರಿದ್ದರು. ಶಿಕ್ಷಕ ಉದಯ ಕುಮಾರ್ ಸ್ವಾಗತಿಸಿದರು.
ಶಾಲಾ ಶಿಕ್ಷಕಿ ರಾಜೇಶ್ವರಿ .ಜಿ ಕಾರ್ಯಕ್ರಮ ನಿರೂಪಿಸಿದರು.
ಶಿಕ್ಷಕಿ ಸೌಮ್ಯ ವಂದಿಸಿದರು. ಯಕ್ಷಶಿಕ್ಷಣದ ಯಕ್ಷ ಗುರುಗಳಾದ ಸಾಯಿ ಸುಮ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿ , ನಾಟ್ಯ ತರಬೇತಿಗೆ ಚಾಲನೆ ನೀಡಿದರು. ಸಂಸ್ಥೆಯ ದೈಹಿಕ ಶಿಕ್ಷಕ ಪ್ರಕಾಶ್ ಟಿ , ಶಿಕ್ಷಕಿ ನೇಹಾ ಹಾಗೂ ಬೋಧಕೇತರ ವೃಂದದವರು ಸಹಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು