1:50 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಮಣಿನಾಲ್ಕೂರು: ‘ಯಕ್ಷ ಧ್ರುವ- ಯಕ್ಷ ಶಿಕ್ಷಣ’ ಯಕ್ಷಗಾನ ನಾಟ್ಯ ತರಗತಿ ಉದ್ಘಾಟನೆ

28/06/2024, 11:49

ಬಂಟ್ವಾಳ(reporterkarnataka.com): ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ( ರಿ) ಮಂಗಳೂರು ಇದರ ಯಕ್ಷ ಶಿಕ್ಷಣ ಯಕ್ಷಗಾನ ತರಬೇತಿ ಅಭಿಯಾನದಡಿ ನಡೆಯುತ್ತಿರುವ ಯಕ್ಷ ಶಿಕ್ಷಣ ತರಗತಿಯನ್ನು ಮಣಿನಾಲ್ಕೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪಟ್ಲ ಫೌಂಡೇಶನ್ ಸರಪಾಡಿ ಘಟಕದ ಅಧ್ಯಕ್ಷ ಶಶಿಕಾಂತ್ ಶೆಟ್ಟಿ ಆರುಮುಡಿ ಉದ್ಘಾಟಿಸಿದರು.
ಎಸ್ ಡಿ ಎಂ ಸಿ ಅಧ್ಯಕ್ಷೆ ಸುಧಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪಟ್ಲ ಫೌಂಡೇಶನ್ ಸರಪಾಡಿ ಘಟಕದ ಸಂಚಾಲಕ
ಅಶೋಕ್ ಶೆಟ್ಟಿ ಸರಪಾಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಯಕ್ಷಗಾನ ಕಲಾವಿದರಾದ ದಿನೇಶ್ ಶೆಟ್ಟಿ ಕಾವಳಕಟ್ಟೆ, ಪಟ್ಲ ಫೌಂಡೇಶನ್ ಸರಪಾಡಿ ಘಟಕದ ಕಾರ್ಯದರ್ಶಿ ಧನಂಜಯ ಶೆಟ್ಟಿ ಸರಪಾಡಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ದಯಾನಂದ ಶೆಟ್ಟಿ ಅಮೈ, ಪಟ್ಲ ಫೌಂಡೆಶನ್ ಪುಂಜಾಲಕಟ್ಟೆ ಘಟಕದ ಅಧ್ಯಕ್ಷ ಯಶೋಧರ್ ಶೆಟ್ಟಿ ದಂಡೆ, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಅಶೋಕ್ ಶೆಟ್ಟಿ ಕೋಡಿಮಾರು, ಎಸ್ ಡಿ ಎಂ ಸಿ ಯ ನಿಕಟಪೂರ್ವ ಅಧ್ಯಕ್ಷ ರಾಜೇಶ್ ಶೆಟ್ಟಿ, ಹಾಗೂ ಬಾಲಕೃಷ್ಣ ಶೆಟ್ಟಿ ಬಾರತ್ತ್ಯಾರು ಅವರು ಉಪಸ್ಥಿತರಿದ್ದರು. ಶಿಕ್ಷಕ ಉದಯ ಕುಮಾರ್ ಸ್ವಾಗತಿಸಿದರು.
ಶಾಲಾ ಶಿಕ್ಷಕಿ ರಾಜೇಶ್ವರಿ .ಜಿ ಕಾರ್ಯಕ್ರಮ ನಿರೂಪಿಸಿದರು.
ಶಿಕ್ಷಕಿ ಸೌಮ್ಯ ವಂದಿಸಿದರು. ಯಕ್ಷಶಿಕ್ಷಣದ ಯಕ್ಷ ಗುರುಗಳಾದ ಸಾಯಿ ಸುಮ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿ , ನಾಟ್ಯ ತರಬೇತಿಗೆ ಚಾಲನೆ ನೀಡಿದರು. ಸಂಸ್ಥೆಯ ದೈಹಿಕ ಶಿಕ್ಷಕ ಪ್ರಕಾಶ್ ಟಿ , ಶಿಕ್ಷಕಿ ನೇಹಾ ಹಾಗೂ ಬೋಧಕೇತರ ವೃಂದದವರು ಸಹಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು