1:53 PM Tuesday16 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ಮಣಿನಾಲ್ಕೂರು: ‘ಯಕ್ಷ ಧ್ರುವ- ಯಕ್ಷ ಶಿಕ್ಷಣ’ ಯಕ್ಷಗಾನ ನಾಟ್ಯ ತರಗತಿ ಉದ್ಘಾಟನೆ

28/06/2024, 11:49

ಬಂಟ್ವಾಳ(reporterkarnataka.com): ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ( ರಿ) ಮಂಗಳೂರು ಇದರ ಯಕ್ಷ ಶಿಕ್ಷಣ ಯಕ್ಷಗಾನ ತರಬೇತಿ ಅಭಿಯಾನದಡಿ ನಡೆಯುತ್ತಿರುವ ಯಕ್ಷ ಶಿಕ್ಷಣ ತರಗತಿಯನ್ನು ಮಣಿನಾಲ್ಕೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪಟ್ಲ ಫೌಂಡೇಶನ್ ಸರಪಾಡಿ ಘಟಕದ ಅಧ್ಯಕ್ಷ ಶಶಿಕಾಂತ್ ಶೆಟ್ಟಿ ಆರುಮುಡಿ ಉದ್ಘಾಟಿಸಿದರು.
ಎಸ್ ಡಿ ಎಂ ಸಿ ಅಧ್ಯಕ್ಷೆ ಸುಧಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪಟ್ಲ ಫೌಂಡೇಶನ್ ಸರಪಾಡಿ ಘಟಕದ ಸಂಚಾಲಕ
ಅಶೋಕ್ ಶೆಟ್ಟಿ ಸರಪಾಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಯಕ್ಷಗಾನ ಕಲಾವಿದರಾದ ದಿನೇಶ್ ಶೆಟ್ಟಿ ಕಾವಳಕಟ್ಟೆ, ಪಟ್ಲ ಫೌಂಡೇಶನ್ ಸರಪಾಡಿ ಘಟಕದ ಕಾರ್ಯದರ್ಶಿ ಧನಂಜಯ ಶೆಟ್ಟಿ ಸರಪಾಡಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ದಯಾನಂದ ಶೆಟ್ಟಿ ಅಮೈ, ಪಟ್ಲ ಫೌಂಡೆಶನ್ ಪುಂಜಾಲಕಟ್ಟೆ ಘಟಕದ ಅಧ್ಯಕ್ಷ ಯಶೋಧರ್ ಶೆಟ್ಟಿ ದಂಡೆ, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಅಶೋಕ್ ಶೆಟ್ಟಿ ಕೋಡಿಮಾರು, ಎಸ್ ಡಿ ಎಂ ಸಿ ಯ ನಿಕಟಪೂರ್ವ ಅಧ್ಯಕ್ಷ ರಾಜೇಶ್ ಶೆಟ್ಟಿ, ಹಾಗೂ ಬಾಲಕೃಷ್ಣ ಶೆಟ್ಟಿ ಬಾರತ್ತ್ಯಾರು ಅವರು ಉಪಸ್ಥಿತರಿದ್ದರು. ಶಿಕ್ಷಕ ಉದಯ ಕುಮಾರ್ ಸ್ವಾಗತಿಸಿದರು.
ಶಾಲಾ ಶಿಕ್ಷಕಿ ರಾಜೇಶ್ವರಿ .ಜಿ ಕಾರ್ಯಕ್ರಮ ನಿರೂಪಿಸಿದರು.
ಶಿಕ್ಷಕಿ ಸೌಮ್ಯ ವಂದಿಸಿದರು. ಯಕ್ಷಶಿಕ್ಷಣದ ಯಕ್ಷ ಗುರುಗಳಾದ ಸಾಯಿ ಸುಮ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿ , ನಾಟ್ಯ ತರಬೇತಿಗೆ ಚಾಲನೆ ನೀಡಿದರು. ಸಂಸ್ಥೆಯ ದೈಹಿಕ ಶಿಕ್ಷಕ ಪ್ರಕಾಶ್ ಟಿ , ಶಿಕ್ಷಕಿ ನೇಹಾ ಹಾಗೂ ಬೋಧಕೇತರ ವೃಂದದವರು ಸಹಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು