5:26 PM Tuesday12 - May 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ… ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿಭತ್ಯೆ ಶೇ. 1.50ರಷ್ಟು ಹೆಚ್ಚಳ: ಸರ್ಕಾರದ… ಸುವೇಂದು ಪಿಎ ಚಂದ್ರನಾಥ್ ರಾಥ್ ಹತ್ಯೆ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್: ಸಿಐಡಿ ತನಿಖೆ ತೈಲ ಬಳಕೆಯಲ್ಲಿ ಮಿತಿಯಿರಲಿ, ವರ್ಷದ ಮಟ್ಟಿಗೆ ಚಿನ್ನ ಖರೀದಿಸಬೇಡಿ::ಪ್ರಧಾನಿ ಮೋದಿ ಮಹತ್ವದ ಕರೆ ತಿರುಚಿ ಪೂರ್ವ ಕ್ಷೇತ್ರಕ್ಕೆ ತಮಿಳುನಾಡು ಸಿಎಂ ವಿಜಯ್ ರಾಜೀನಾಮೆ

ಇತ್ತೀಚಿನ ಸುದ್ದಿ

ಮಣಿನಾಲ್ಕೂರು: ‘ಯಕ್ಷ ಧ್ರುವ- ಯಕ್ಷ ಶಿಕ್ಷಣ’ ಯಕ್ಷಗಾನ ನಾಟ್ಯ ತರಗತಿ ಉದ್ಘಾಟನೆ

28/06/2024, 11:49

ಬಂಟ್ವಾಳ(reporterkarnataka.com): ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ( ರಿ) ಮಂಗಳೂರು ಇದರ ಯಕ್ಷ ಶಿಕ್ಷಣ ಯಕ್ಷಗಾನ ತರಬೇತಿ ಅಭಿಯಾನದಡಿ ನಡೆಯುತ್ತಿರುವ ಯಕ್ಷ ಶಿಕ್ಷಣ ತರಗತಿಯನ್ನು ಮಣಿನಾಲ್ಕೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪಟ್ಲ ಫೌಂಡೇಶನ್ ಸರಪಾಡಿ ಘಟಕದ ಅಧ್ಯಕ್ಷ ಶಶಿಕಾಂತ್ ಶೆಟ್ಟಿ ಆರುಮುಡಿ ಉದ್ಘಾಟಿಸಿದರು.
ಎಸ್ ಡಿ ಎಂ ಸಿ ಅಧ್ಯಕ್ಷೆ ಸುಧಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪಟ್ಲ ಫೌಂಡೇಶನ್ ಸರಪಾಡಿ ಘಟಕದ ಸಂಚಾಲಕ
ಅಶೋಕ್ ಶೆಟ್ಟಿ ಸರಪಾಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಯಕ್ಷಗಾನ ಕಲಾವಿದರಾದ ದಿನೇಶ್ ಶೆಟ್ಟಿ ಕಾವಳಕಟ್ಟೆ, ಪಟ್ಲ ಫೌಂಡೇಶನ್ ಸರಪಾಡಿ ಘಟಕದ ಕಾರ್ಯದರ್ಶಿ ಧನಂಜಯ ಶೆಟ್ಟಿ ಸರಪಾಡಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ದಯಾನಂದ ಶೆಟ್ಟಿ ಅಮೈ, ಪಟ್ಲ ಫೌಂಡೆಶನ್ ಪುಂಜಾಲಕಟ್ಟೆ ಘಟಕದ ಅಧ್ಯಕ್ಷ ಯಶೋಧರ್ ಶೆಟ್ಟಿ ದಂಡೆ, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಅಶೋಕ್ ಶೆಟ್ಟಿ ಕೋಡಿಮಾರು, ಎಸ್ ಡಿ ಎಂ ಸಿ ಯ ನಿಕಟಪೂರ್ವ ಅಧ್ಯಕ್ಷ ರಾಜೇಶ್ ಶೆಟ್ಟಿ, ಹಾಗೂ ಬಾಲಕೃಷ್ಣ ಶೆಟ್ಟಿ ಬಾರತ್ತ್ಯಾರು ಅವರು ಉಪಸ್ಥಿತರಿದ್ದರು. ಶಿಕ್ಷಕ ಉದಯ ಕುಮಾರ್ ಸ್ವಾಗತಿಸಿದರು.
ಶಾಲಾ ಶಿಕ್ಷಕಿ ರಾಜೇಶ್ವರಿ .ಜಿ ಕಾರ್ಯಕ್ರಮ ನಿರೂಪಿಸಿದರು.
ಶಿಕ್ಷಕಿ ಸೌಮ್ಯ ವಂದಿಸಿದರು. ಯಕ್ಷಶಿಕ್ಷಣದ ಯಕ್ಷ ಗುರುಗಳಾದ ಸಾಯಿ ಸುಮ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿ , ನಾಟ್ಯ ತರಬೇತಿಗೆ ಚಾಲನೆ ನೀಡಿದರು. ಸಂಸ್ಥೆಯ ದೈಹಿಕ ಶಿಕ್ಷಕ ಪ್ರಕಾಶ್ ಟಿ , ಶಿಕ್ಷಕಿ ನೇಹಾ ಹಾಗೂ ಬೋಧಕೇತರ ವೃಂದದವರು ಸಹಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು