6:22 PM Saturday21 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ಮಣಿಪಾಲ: ವಸತಿ ಯೋಜನೆಗೆ ಕಟ್ಟಡ ಕಾರ್ಮಿಕ‌ರ ಕಲ್ಯಾಣ ಮಂಡಳಿ ನಿಧಿ ಬಳಸಲು ವಿರೋಧಿಸಿ ಕಟ್ಟಡ ಕಾರ್ಮಿಕರಿಂದ ಪ್ರತಿಭಟನೆ

22/09/2022, 21:38

ಉಡುಪಿ(reporterkarnataka.com):
ವಸತಿ ಯೋಜನೆಗೆ ಕಟ್ಟಡ ಕಾರ್ಮಿಕ‌ರ ಕಲ್ಯಾಣ ಮಂಡಳಿ ನಿಧಿ ಬಳಸಲು ಮುಂದಾಗಿರುವುದನ್ನು ಖಂಡಿಸಿ ಹಾಗೂ ಕಡಿಮೆ ದರದಲ್ಲಿ ಮರಳು ಪೊರೈಕೆಗೆ ಆಗ್ರಹಿಸಿ ಉಡುಪಿ ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಕಟ್ಟಡ ಕಾರ್ಮಿಕರು ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಎದುರು ಇಂದು ಪ್ರತಿಭಟನೆ ನಡೆಸಿದರು. 

ಕೊಳಚೆ ನಿರ್ಮೂಲನೆ ಮಂಡಳಿ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಸತಿ ಯೋಜನೆಯಡಿಯಲ್ಲಿ ಫಲಾನುಭವಿಗಳಾಗಿ ಆಯ್ಕೆಯಾದ ಎಲ್ಲರಿಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ನಕಲಿ ಕಾರ್ಮಿಕರನ್ನು ನೋಂದಾಯಿಸಿ ಇದರ ಲಾಭ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಇದರ ಬಗ್ಗೆ ಸೂಕ್ತ ತನಿಖೆ ನಡೆಸಿ ಕ್ರಮಕೈಗೊಳ್ಳಬೇಕು. ನೈಜ ಕಾರ್ಮಿಕರಿಗೆ ಸೌಲಭ್ಯ ಸಿಗುವಂತಾಗಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಕಟ್ಟಡ ಕಾರ್ಮಿಕರಲ್ಲದವರು ನಕಲಿ ದಾಖಲೆ ಮೂಲಕ ನೋಂದಣಿಯಾಗಿರುವವರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಬೇಕು. ಉಡುಪಿ ಜಿಲ್ಲೆಯಲ್ಲಿ ಸರ್ಕಾರಿ ಬಸ್ ಗಳ ಸಂಖ್ಯೆ ಕಡಿಮೆ ಇರುವುದರಿಂದ ಕಾರ್ಮಿಕರಿಗೆ  ಬಸ್ ಪಾಸ್ ಬದಲು ನಗದು ನೀಡುವ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು.

ಸಂಘದ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ, ಅಧ್ಯಕ್ಷ ಶೇಖರ್ ಬಂಗೇರ, ಶಶಿಧರ್ ಗೊಲ್ಲ ಹಾಗೂ ಕಟ್ಟಡ ಕಾರ್ಮಿಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು