7:42 AM Monday13 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ಮಂಜನಾಡಿ ಗ್ಯಾಸ್ ದುರಂತ; ಸರಕಾರದಿಂದ 15 ಲಕ್ಷ, ಗ್ಯಾಸ್ ಕಂಪೆನಿಯಿಂದ 20 ಲಕ್ಷ ಪರಿಹಾರ: ಸ್ಪೀಕರ್ ಖಾದರ್

30/12/2024, 22:50

ಮಂಗಳೂರು(reporterkarnataka.com): ಮಂಜನಾಡಿ ಗ್ಯಾಸ್ ಸಿಲಿಂಡರ್ ದುರಂತದಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 4 ಜನರನ್ನು ಬದುಕಿಸಲು ಸಕಲ ಪ್ರಯತ್ನಗಳನ್ನು ನಡೆಸಿಯೂ ನಿನ್ನೆ 3ನೇ ಗಾಯಾಳುವೂ ಮೃತಪಟ್ಟಿದ್ದು ಈ ಹಿನ್ನಲೆಯಲ್ಲಿ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಮುಖ್ಯಮಂತ್ರಿ ಜೊತೆ ಮಾತನಾಡಿ ಮೃತ ಮೂವರಿಗೆ ಒಟ್ಟು 15 ಲಕ್ಷ ಪರಿಹಾರದ ವ್ಯವಸ್ಥೆ ಮಾಡಿದ್ದಾರೆ.


ಯು. ಟಿ ಖಾದರ್ ನಿನ್ನೆಯೇ ಮಂಜನಾಡಿ ಕಲ್ಕಟ್ಟದಲ್ಲಿರುವ ಘಟನೆ ನಡೆದ ಮನೆಯಲ್ಲಿಯೇ ವಿವಿಧ ಇಲಾಖೆಯ ಹಾಗೂ ಗ್ಯಾಸ್ ಕಂಪೆನಿಯ ಅಧಿಕಾರಿಗಳ ಸಭೆಯನ್ನು ನಡೆಸಿ ನಿಯಮಗಳ ಜೊತೆಗೆ ಮಾನವೀಯತೆ ಆಧಾರದ ಮೇಲೆ ವರದಿ ಕಳುಹಿಸಬೇಕೆಂದು ಗ್ಯಾಸ್ ಕಂಪೆನಿಯ ಅಧಿಕಾರಿಗಳಿಗೆ ಸೂಚಿಸಿದ್ದರು. ಲಭ್ಯ ಮಾಹಿತಿಯ ಪ್ರಕಾರ ಗ್ಯಾಸ್ ಕಂಪೆನಿ 20 ಲಕ್ಷ ಪರಿಹಾರ ಕೊಡುವ ವ್ಯವಸ್ಥೆಯನ್ನು ಮಾಡಿದ್ದು ಹೀಗಾಗಿ ಒಟ್ಟು 35 ಲಕ್ಷ ರೂಪಾಯಿ ಮೃತರ ಕುಟುಂಬಕ್ಕೆ ಸಿಗಲಿದೆ ಎನ್ನಲಾಗಿದೆ.
ಸ್ಥಳೀಯ
ಶಾಸಕರೂ ಆಗಿರುವ ಸ್ಪೀಕರ್ ಅವರ ಸೂಚನೆ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳು, ಉಳ್ಳಾಲ ಉಪ ವಿಭಾಗಾಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳು, ಅಗ್ನಿಶಾಮಕ, ಪೊಲೀಸ್, ಆರೋಗ್ಯ ಇಲಾಖೆಯ ಅಧಿಕಾರಿಗಳು ಈ ಕುರಿತ ಕಡತಗಳನ್ನು ಅಂತಿಮ ಗೊಳಿಸುತ್ತಿದ್ದು ಜಿಲ್ಲಾಧಿಕಾರಿಗಳು ಅಂತಿಮ ವರದಿ ಸಲ್ಲಿಸುತ್ತಿದ್ದಂತೆಯೇ ಪರಿಹಾರದ ಹಣ ಕುಟುಂಬಕ್ಕೆ ಸಿಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು