2:21 AM Sunday10 - August 2025
ಬ್ರೇಕಿಂಗ್ ನ್ಯೂಸ್
ಮೈಸೂರು -ಕೊಡಗು ಲೋಕಸಭೆ ಕ್ಷೇತ್ರದಲ್ಲೂ ಮತಗಳ್ಳತನ: ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆರೋಪ Bangalore | ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರಕ್ಕೆ: ಬೆಂಗಳೂರು ಮೆಟ್ರೋ 2ರ ಹಳದಿ ಮಾರ್ಗ… ಧರ್ಮಸ್ಥಳ: ಯೂಟ್ಯೂಬರ್ ಗಳ ಮೇಲೆ ಹಲ್ಲೆ ಪ್ರಕರಣ; 6 ಮಂದಿಯ ಬಂಧನ Bangalore | ಪ್ರಧಾನಿ ಮೋದಿಯವರ ಬೆಂಗಳೂರು ಕಾರ್ಯಕ್ರಮ; ಪ್ರತಿಪಕ್ಷದ ನಾಯಕ ಆರ್. ಅಶೋಕ್… ಅತ್ತೂರುಕೊಲ್ಲಿ ಅದಿವಾಸಿಗಳ ಪರ ಹೋರಾಟ: ನಟ ಚೇತನ್ ಅಹಿಂಸಾ ಸೇರಿ ಐವರ ವಿರುದ್ಧ… Bangalore | ಪ್ರಧಾನಿ ಮೋದಿ ನಾಳೆ ಬೆಂಗಳೂರಿಗೆ: ವಂದೇ ಭಾರತ್ ಎಕ್ಸ್ ಪ್ರೆಸ್… ರಾಹುಲ್‌ ಗಾಂಧಿಯದ್ದು ಠುಸ್‌ ಪಟಾಕಿ, ಮತದಾರರ ಪಟ್ಟಿ ತಯಾರಿಯಲ್ಲಿ ಪ್ರಧಾನಿ ಅಥವಾ ಬಿಜೆಪಿಯ… ಧರ್ಮಸ್ಥಳದಲ್ಲಿ ಯೂಟ್ಯೂಬರ್ ಗಳ ಮೇಲೆ ಹಲ್ಲೆ ಪ್ರಕರಣ: ಓರ್ವ ಆರೋಪಿಯ ಕೊಕ್ಕಡದಲ್ಲಿ ಬಂಧನ ಆಲಮಟ್ಟಿ ಡ್ಯಾಮ್ ಎತ್ತರ 524 ಮೀಟರ್‌ಗೆ ಹೆಚ್ಚಿಸುವುದು ಕರ್ನಾಟಕದ ಹಕ್ಕು: ಕೇಂದ್ರ ಜಲಶಕ್ತಿ… Chikkamagaluru | ಕಾಫಿನಾಡಲ್ಲಿ ನಿಲ್ಲದ ಕಾಡಾನೆ ಉಪಟಳ: ಹೆದ್ದಾರಿ, ಕಾಫಿ ತೋಟದಲ್ಲಿಯೂ ದಾಂಧಲೆ

ಇತ್ತೀಚಿನ ಸುದ್ದಿ

ಮಂಜನಾಡಿ ಗ್ಯಾಸ್ ದುರಂತ; ಸರಕಾರದಿಂದ 15 ಲಕ್ಷ, ಗ್ಯಾಸ್ ಕಂಪೆನಿಯಿಂದ 20 ಲಕ್ಷ ಪರಿಹಾರ: ಸ್ಪೀಕರ್ ಖಾದರ್

30/12/2024, 22:50

ಮಂಗಳೂರು(reporterkarnataka.com): ಮಂಜನಾಡಿ ಗ್ಯಾಸ್ ಸಿಲಿಂಡರ್ ದುರಂತದಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 4 ಜನರನ್ನು ಬದುಕಿಸಲು ಸಕಲ ಪ್ರಯತ್ನಗಳನ್ನು ನಡೆಸಿಯೂ ನಿನ್ನೆ 3ನೇ ಗಾಯಾಳುವೂ ಮೃತಪಟ್ಟಿದ್ದು ಈ ಹಿನ್ನಲೆಯಲ್ಲಿ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಮುಖ್ಯಮಂತ್ರಿ ಜೊತೆ ಮಾತನಾಡಿ ಮೃತ ಮೂವರಿಗೆ ಒಟ್ಟು 15 ಲಕ್ಷ ಪರಿಹಾರದ ವ್ಯವಸ್ಥೆ ಮಾಡಿದ್ದಾರೆ.


ಯು. ಟಿ ಖಾದರ್ ನಿನ್ನೆಯೇ ಮಂಜನಾಡಿ ಕಲ್ಕಟ್ಟದಲ್ಲಿರುವ ಘಟನೆ ನಡೆದ ಮನೆಯಲ್ಲಿಯೇ ವಿವಿಧ ಇಲಾಖೆಯ ಹಾಗೂ ಗ್ಯಾಸ್ ಕಂಪೆನಿಯ ಅಧಿಕಾರಿಗಳ ಸಭೆಯನ್ನು ನಡೆಸಿ ನಿಯಮಗಳ ಜೊತೆಗೆ ಮಾನವೀಯತೆ ಆಧಾರದ ಮೇಲೆ ವರದಿ ಕಳುಹಿಸಬೇಕೆಂದು ಗ್ಯಾಸ್ ಕಂಪೆನಿಯ ಅಧಿಕಾರಿಗಳಿಗೆ ಸೂಚಿಸಿದ್ದರು. ಲಭ್ಯ ಮಾಹಿತಿಯ ಪ್ರಕಾರ ಗ್ಯಾಸ್ ಕಂಪೆನಿ 20 ಲಕ್ಷ ಪರಿಹಾರ ಕೊಡುವ ವ್ಯವಸ್ಥೆಯನ್ನು ಮಾಡಿದ್ದು ಹೀಗಾಗಿ ಒಟ್ಟು 35 ಲಕ್ಷ ರೂಪಾಯಿ ಮೃತರ ಕುಟುಂಬಕ್ಕೆ ಸಿಗಲಿದೆ ಎನ್ನಲಾಗಿದೆ.
ಸ್ಥಳೀಯ
ಶಾಸಕರೂ ಆಗಿರುವ ಸ್ಪೀಕರ್ ಅವರ ಸೂಚನೆ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳು, ಉಳ್ಳಾಲ ಉಪ ವಿಭಾಗಾಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳು, ಅಗ್ನಿಶಾಮಕ, ಪೊಲೀಸ್, ಆರೋಗ್ಯ ಇಲಾಖೆಯ ಅಧಿಕಾರಿಗಳು ಈ ಕುರಿತ ಕಡತಗಳನ್ನು ಅಂತಿಮ ಗೊಳಿಸುತ್ತಿದ್ದು ಜಿಲ್ಲಾಧಿಕಾರಿಗಳು ಅಂತಿಮ ವರದಿ ಸಲ್ಲಿಸುತ್ತಿದ್ದಂತೆಯೇ ಪರಿಹಾರದ ಹಣ ಕುಟುಂಬಕ್ಕೆ ಸಿಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು