10:49 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಮಂಜನಾಡಿ ಗ್ಯಾಸ್ ದುರಂತ; ಸರಕಾರದಿಂದ 15 ಲಕ್ಷ, ಗ್ಯಾಸ್ ಕಂಪೆನಿಯಿಂದ 20 ಲಕ್ಷ ಪರಿಹಾರ: ಸ್ಪೀಕರ್ ಖಾದರ್

30/12/2024, 22:50

ಮಂಗಳೂರು(reporterkarnataka.com): ಮಂಜನಾಡಿ ಗ್ಯಾಸ್ ಸಿಲಿಂಡರ್ ದುರಂತದಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 4 ಜನರನ್ನು ಬದುಕಿಸಲು ಸಕಲ ಪ್ರಯತ್ನಗಳನ್ನು ನಡೆಸಿಯೂ ನಿನ್ನೆ 3ನೇ ಗಾಯಾಳುವೂ ಮೃತಪಟ್ಟಿದ್ದು ಈ ಹಿನ್ನಲೆಯಲ್ಲಿ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಮುಖ್ಯಮಂತ್ರಿ ಜೊತೆ ಮಾತನಾಡಿ ಮೃತ ಮೂವರಿಗೆ ಒಟ್ಟು 15 ಲಕ್ಷ ಪರಿಹಾರದ ವ್ಯವಸ್ಥೆ ಮಾಡಿದ್ದಾರೆ.


ಯು. ಟಿ ಖಾದರ್ ನಿನ್ನೆಯೇ ಮಂಜನಾಡಿ ಕಲ್ಕಟ್ಟದಲ್ಲಿರುವ ಘಟನೆ ನಡೆದ ಮನೆಯಲ್ಲಿಯೇ ವಿವಿಧ ಇಲಾಖೆಯ ಹಾಗೂ ಗ್ಯಾಸ್ ಕಂಪೆನಿಯ ಅಧಿಕಾರಿಗಳ ಸಭೆಯನ್ನು ನಡೆಸಿ ನಿಯಮಗಳ ಜೊತೆಗೆ ಮಾನವೀಯತೆ ಆಧಾರದ ಮೇಲೆ ವರದಿ ಕಳುಹಿಸಬೇಕೆಂದು ಗ್ಯಾಸ್ ಕಂಪೆನಿಯ ಅಧಿಕಾರಿಗಳಿಗೆ ಸೂಚಿಸಿದ್ದರು. ಲಭ್ಯ ಮಾಹಿತಿಯ ಪ್ರಕಾರ ಗ್ಯಾಸ್ ಕಂಪೆನಿ 20 ಲಕ್ಷ ಪರಿಹಾರ ಕೊಡುವ ವ್ಯವಸ್ಥೆಯನ್ನು ಮಾಡಿದ್ದು ಹೀಗಾಗಿ ಒಟ್ಟು 35 ಲಕ್ಷ ರೂಪಾಯಿ ಮೃತರ ಕುಟುಂಬಕ್ಕೆ ಸಿಗಲಿದೆ ಎನ್ನಲಾಗಿದೆ.
ಸ್ಥಳೀಯ
ಶಾಸಕರೂ ಆಗಿರುವ ಸ್ಪೀಕರ್ ಅವರ ಸೂಚನೆ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳು, ಉಳ್ಳಾಲ ಉಪ ವಿಭಾಗಾಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳು, ಅಗ್ನಿಶಾಮಕ, ಪೊಲೀಸ್, ಆರೋಗ್ಯ ಇಲಾಖೆಯ ಅಧಿಕಾರಿಗಳು ಈ ಕುರಿತ ಕಡತಗಳನ್ನು ಅಂತಿಮ ಗೊಳಿಸುತ್ತಿದ್ದು ಜಿಲ್ಲಾಧಿಕಾರಿಗಳು ಅಂತಿಮ ವರದಿ ಸಲ್ಲಿಸುತ್ತಿದ್ದಂತೆಯೇ ಪರಿಹಾರದ ಹಣ ಕುಟುಂಬಕ್ಕೆ ಸಿಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು