7:28 AM Sunday18 - January 2026
ಬ್ರೇಕಿಂಗ್ ನ್ಯೂಸ್
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ…

ಇತ್ತೀಚಿನ ಸುದ್ದಿ

ಮಂಜೇಶ್ವರ ಸ್ನೇಹಾಲಯ ಸೈಕೊ ಸೋಶಿಯಲ್ ಪುನರ್ವಸತಿ ಕೇಂದ್ರದಲ್ಲಿ “ಸ್ನೇಹ ಮಿಲನ-2024 “

23/12/2024, 12:43

ಮಂಗಳೂರು(reporterkarnataka.com): ಮಂಜೇಶ್ವರ ಸ್ನೇಹಾಲಯ ಸೈಕೊ ಸೋಶಿಯಲ್ ಪುನರ್ವಸತಿ ಕೇಂದ್ರದಲ್ಲಿ “ಸ್ನೇಹ ಮಿಲನ-2024 ” ಎಂಬ ಕ್ರಿಸ್‌ಮಸ್ ಕಾರ್ಯಕ್ರಮವನ್ನು ಡಿಸೆಂಬರ್ 21ರಂದು ಆಚರಿಸಲಾಯಿತು. ಸ್ನೇಹಾಲಯದ ವಾರ್ಷಿಕ ಕ್ರಿಸ್‌ಮಸ್ ಆಚರಣೆಯು ನಿವಾಸಿಗಳಲ್ಲಿ ಹೊಸ ಉತ್ಸಾಹವನ್ನು ಜೀವಂತವಾಗಿರಿಸಿತು. ಕಾರ್ಯಕ್ರಮದಲ್ಲಿ ಕಾಸರಗೋಡು ಜಿಲ್ಲಾ ಪೊಲೀಸ್ ಮುಖ್ಯಸ್ಥರಾದ ಶಿಲ್ಪಾ ದ್ಯಾವಯ್ಯ, ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರು ಹಾಗೂ ಅಧೀಕ್ಷಕರಾದ ಡಾ.ಶಿವಪ್ರಕಾಶ್ ಡಿ.ಎಸ್. ಸೇರಿದಂತೆ ಗೌರವಾನ್ವಿತ ಅತಿಥಿಗಳು ಉಪಸ್ಥಿತರಿದ್ದರು.


ಹೊಸಂಗಡಿಯ ಇನ್‌ಫೆಂಟ್ ಜೀಸಸ್ ಚರ್ಚ್‌ನ ಧರ್ಮಗುರು ಫಾ. ಲೋಯಸ್ ಮರಿಯದಾಸ್, ಸ್ನೇಹಾಲಯದ ನಿವಾಸಿ ಗುರುಗಳಾದ ಫಾ. ಸಿರಿಲ್ ಡಿ ಸೋಜಾ, ಫಾರ್ಚೂನ್ ಲೈಫ್ ವೆಲ್ತ್ ಪ್ರೈವೇಟ್ ಲಿಮಿಟೆಡ್ ದೆಹಲಿ, ನಿರ್ದೇಶಕರಾದ ಮತ್ತು PTI ಕನ್ಸಲ್ಟೆನ್ಸಿ ಬಾಂಬೆಯ ಮಾಲೀಕರಾದ ಶ್ರೀ ಜೋಸೆಫ್ ಇಲಿಯಾಸ್ ಮಿನೇಜಸ್ ಮತ್ತು ಮಂಗಳೂರಿನ ಪ್ರೇರಕ ಭಾಷಣಕಾರರಾದ ರಫೀಕ್ ಮಾಸ್ಟರ್ ಸಂಭ್ರಮದ ಗೌರವ ಅತಿಥಿಗಳಾಗಿದ್ದರು. ಮಂಗಳೂರಿನ ಜಿಜಿ100 ಕೋರಸ್ ತಂಡ ಸುಂದರ ಕ್ರಿಸ್ಮಸ್ ಸಂಗೀತದೊಂದಿಗೆ ಸಭಿಕರನ್ನು ರಂಜಿಸಿತು.
ಕಾರ್ಯಕ್ರಮವನ್ನು ಜಿಯೋ ಡಿಸಿಲ್ವಾ ನಿರೂಪಿಸಿದರು. ಸ್ನೇಹಾಲಯದ ಕಾರ್ಯನಿರ್ವಾಹಕ ನಿರ್ದೇಶಕರಾದ ಜೋಸೆಫ್ ಕ್ರಾಸ್ತಾ ಕಾರ್ಯಕ್ರಮಕ್ಕೆ ಎಲ್ಲರನ್ನು ಆತ್ಮೀಯವಾಗಿ ಸ್ವಾಗತಿಸಿ, ಪ್ರಸ್ತಾವಿಕ ನುಡಿಗಳ ಜೊತೆ ಸಂಭ್ರಮಕ್ಕೆ ಚಾಲನೆ ನೀಡಿದರು.
ಅತಿಥಿಗಳು ಕ್ರಿಸ್ಮಸ್ ಕೇಕ್ ಕತ್ತರಿಸಿ ಸಾಂತಕ್ಲೋಸ್ ಸಮ್ಮುಖದಲ್ಲಿ ಎಲ್ಲರಿಗೂ ಸಿಹಿ ಹಂಚಿದರು. ಕಾರ್ಯದರ್ಶಿ ಕಮ್ ಟ್ರಸ್ಟಿ ಒಲಿವಿಯಾ ಕ್ರಾಸ್ತಾ ವಂದಿಸಿದರು. ಇದು ಹೃದಯಸ್ಪರ್ಶಿ ಮತ್ತು ಸಂತೋಷದಾಯಕ ಆಚರಣೆಯಾಗಿದ್ದು, ಹಾಜರಿದ್ದ ಎಲ್ಲರ ಮುಖದಲ್ಲಿ ನಗುವನ್ನು ತಂದಿತು. ಪ್ರತಿಯೋರ್ವ ಅತಿಥಿಯರ ಅಮೋಘ ಸಂದೇಶ ಮಾನಾವಿಯತೆ, ದಾನ, ಪ್ರೀತಿ, ಸಮಾಜಿಕ ನ್ಯಾಯ ಹಾಗೂ ಹಂಚುವಿಕೆ ಬಗ್ಗೆ ಇದ್ದು ಸ್ನೇಹಾಲಯದ ಕೆಲಸವನ್ನು ಶ್ಲಾಫೀಸಿ ಹೊಗಳಿದರು. ಕ್ರಿಸ್ಮಸ್ ಹೊಸ ಅಲೆಯನ್ನು ಪರಿಸರದಲ್ಲಿ ಸೃಷ್ಠಿಸಿತು.

ಇತ್ತೀಚಿನ ಸುದ್ದಿ

ಜಾಹೀರಾತು