5:22 AM Saturday4 - October 2025
ಬ್ರೇಕಿಂಗ್ ನ್ಯೂಸ್
ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್

ಇತ್ತೀಚಿನ ಸುದ್ದಿ

ಮಂಜೇಶ್ವರ ಸ್ನೇಹಾಲಯ ಸೈಕೊ ಸೋಶಿಯಲ್ ಪುನರ್ವಸತಿ ಕೇಂದ್ರದಲ್ಲಿ “ಸ್ನೇಹ ಮಿಲನ-2024 “

23/12/2024, 12:43

ಮಂಗಳೂರು(reporterkarnataka.com): ಮಂಜೇಶ್ವರ ಸ್ನೇಹಾಲಯ ಸೈಕೊ ಸೋಶಿಯಲ್ ಪುನರ್ವಸತಿ ಕೇಂದ್ರದಲ್ಲಿ “ಸ್ನೇಹ ಮಿಲನ-2024 ” ಎಂಬ ಕ್ರಿಸ್‌ಮಸ್ ಕಾರ್ಯಕ್ರಮವನ್ನು ಡಿಸೆಂಬರ್ 21ರಂದು ಆಚರಿಸಲಾಯಿತು. ಸ್ನೇಹಾಲಯದ ವಾರ್ಷಿಕ ಕ್ರಿಸ್‌ಮಸ್ ಆಚರಣೆಯು ನಿವಾಸಿಗಳಲ್ಲಿ ಹೊಸ ಉತ್ಸಾಹವನ್ನು ಜೀವಂತವಾಗಿರಿಸಿತು. ಕಾರ್ಯಕ್ರಮದಲ್ಲಿ ಕಾಸರಗೋಡು ಜಿಲ್ಲಾ ಪೊಲೀಸ್ ಮುಖ್ಯಸ್ಥರಾದ ಶಿಲ್ಪಾ ದ್ಯಾವಯ್ಯ, ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರು ಹಾಗೂ ಅಧೀಕ್ಷಕರಾದ ಡಾ.ಶಿವಪ್ರಕಾಶ್ ಡಿ.ಎಸ್. ಸೇರಿದಂತೆ ಗೌರವಾನ್ವಿತ ಅತಿಥಿಗಳು ಉಪಸ್ಥಿತರಿದ್ದರು.


ಹೊಸಂಗಡಿಯ ಇನ್‌ಫೆಂಟ್ ಜೀಸಸ್ ಚರ್ಚ್‌ನ ಧರ್ಮಗುರು ಫಾ. ಲೋಯಸ್ ಮರಿಯದಾಸ್, ಸ್ನೇಹಾಲಯದ ನಿವಾಸಿ ಗುರುಗಳಾದ ಫಾ. ಸಿರಿಲ್ ಡಿ ಸೋಜಾ, ಫಾರ್ಚೂನ್ ಲೈಫ್ ವೆಲ್ತ್ ಪ್ರೈವೇಟ್ ಲಿಮಿಟೆಡ್ ದೆಹಲಿ, ನಿರ್ದೇಶಕರಾದ ಮತ್ತು PTI ಕನ್ಸಲ್ಟೆನ್ಸಿ ಬಾಂಬೆಯ ಮಾಲೀಕರಾದ ಶ್ರೀ ಜೋಸೆಫ್ ಇಲಿಯಾಸ್ ಮಿನೇಜಸ್ ಮತ್ತು ಮಂಗಳೂರಿನ ಪ್ರೇರಕ ಭಾಷಣಕಾರರಾದ ರಫೀಕ್ ಮಾಸ್ಟರ್ ಸಂಭ್ರಮದ ಗೌರವ ಅತಿಥಿಗಳಾಗಿದ್ದರು. ಮಂಗಳೂರಿನ ಜಿಜಿ100 ಕೋರಸ್ ತಂಡ ಸುಂದರ ಕ್ರಿಸ್ಮಸ್ ಸಂಗೀತದೊಂದಿಗೆ ಸಭಿಕರನ್ನು ರಂಜಿಸಿತು.
ಕಾರ್ಯಕ್ರಮವನ್ನು ಜಿಯೋ ಡಿಸಿಲ್ವಾ ನಿರೂಪಿಸಿದರು. ಸ್ನೇಹಾಲಯದ ಕಾರ್ಯನಿರ್ವಾಹಕ ನಿರ್ದೇಶಕರಾದ ಜೋಸೆಫ್ ಕ್ರಾಸ್ತಾ ಕಾರ್ಯಕ್ರಮಕ್ಕೆ ಎಲ್ಲರನ್ನು ಆತ್ಮೀಯವಾಗಿ ಸ್ವಾಗತಿಸಿ, ಪ್ರಸ್ತಾವಿಕ ನುಡಿಗಳ ಜೊತೆ ಸಂಭ್ರಮಕ್ಕೆ ಚಾಲನೆ ನೀಡಿದರು.
ಅತಿಥಿಗಳು ಕ್ರಿಸ್ಮಸ್ ಕೇಕ್ ಕತ್ತರಿಸಿ ಸಾಂತಕ್ಲೋಸ್ ಸಮ್ಮುಖದಲ್ಲಿ ಎಲ್ಲರಿಗೂ ಸಿಹಿ ಹಂಚಿದರು. ಕಾರ್ಯದರ್ಶಿ ಕಮ್ ಟ್ರಸ್ಟಿ ಒಲಿವಿಯಾ ಕ್ರಾಸ್ತಾ ವಂದಿಸಿದರು. ಇದು ಹೃದಯಸ್ಪರ್ಶಿ ಮತ್ತು ಸಂತೋಷದಾಯಕ ಆಚರಣೆಯಾಗಿದ್ದು, ಹಾಜರಿದ್ದ ಎಲ್ಲರ ಮುಖದಲ್ಲಿ ನಗುವನ್ನು ತಂದಿತು. ಪ್ರತಿಯೋರ್ವ ಅತಿಥಿಯರ ಅಮೋಘ ಸಂದೇಶ ಮಾನಾವಿಯತೆ, ದಾನ, ಪ್ರೀತಿ, ಸಮಾಜಿಕ ನ್ಯಾಯ ಹಾಗೂ ಹಂಚುವಿಕೆ ಬಗ್ಗೆ ಇದ್ದು ಸ್ನೇಹಾಲಯದ ಕೆಲಸವನ್ನು ಶ್ಲಾಫೀಸಿ ಹೊಗಳಿದರು. ಕ್ರಿಸ್ಮಸ್ ಹೊಸ ಅಲೆಯನ್ನು ಪರಿಸರದಲ್ಲಿ ಸೃಷ್ಠಿಸಿತು.

ಇತ್ತೀಚಿನ ಸುದ್ದಿ

ಜಾಹೀರಾತು