2:07 AM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಮಂಜೇಶ್ವರ ಸ್ನೇಹಾಲಯ ಸೈಕೊ ಸೋಶಿಯಲ್ ಪುನರ್ವಸತಿ ಕೇಂದ್ರದಲ್ಲಿ “ಸ್ನೇಹ ಮಿಲನ-2024 “

23/12/2024, 12:43

ಮಂಗಳೂರು(reporterkarnataka.com): ಮಂಜೇಶ್ವರ ಸ್ನೇಹಾಲಯ ಸೈಕೊ ಸೋಶಿಯಲ್ ಪುನರ್ವಸತಿ ಕೇಂದ್ರದಲ್ಲಿ “ಸ್ನೇಹ ಮಿಲನ-2024 ” ಎಂಬ ಕ್ರಿಸ್‌ಮಸ್ ಕಾರ್ಯಕ್ರಮವನ್ನು ಡಿಸೆಂಬರ್ 21ರಂದು ಆಚರಿಸಲಾಯಿತು. ಸ್ನೇಹಾಲಯದ ವಾರ್ಷಿಕ ಕ್ರಿಸ್‌ಮಸ್ ಆಚರಣೆಯು ನಿವಾಸಿಗಳಲ್ಲಿ ಹೊಸ ಉತ್ಸಾಹವನ್ನು ಜೀವಂತವಾಗಿರಿಸಿತು. ಕಾರ್ಯಕ್ರಮದಲ್ಲಿ ಕಾಸರಗೋಡು ಜಿಲ್ಲಾ ಪೊಲೀಸ್ ಮುಖ್ಯಸ್ಥರಾದ ಶಿಲ್ಪಾ ದ್ಯಾವಯ್ಯ, ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರು ಹಾಗೂ ಅಧೀಕ್ಷಕರಾದ ಡಾ.ಶಿವಪ್ರಕಾಶ್ ಡಿ.ಎಸ್. ಸೇರಿದಂತೆ ಗೌರವಾನ್ವಿತ ಅತಿಥಿಗಳು ಉಪಸ್ಥಿತರಿದ್ದರು.


ಹೊಸಂಗಡಿಯ ಇನ್‌ಫೆಂಟ್ ಜೀಸಸ್ ಚರ್ಚ್‌ನ ಧರ್ಮಗುರು ಫಾ. ಲೋಯಸ್ ಮರಿಯದಾಸ್, ಸ್ನೇಹಾಲಯದ ನಿವಾಸಿ ಗುರುಗಳಾದ ಫಾ. ಸಿರಿಲ್ ಡಿ ಸೋಜಾ, ಫಾರ್ಚೂನ್ ಲೈಫ್ ವೆಲ್ತ್ ಪ್ರೈವೇಟ್ ಲಿಮಿಟೆಡ್ ದೆಹಲಿ, ನಿರ್ದೇಶಕರಾದ ಮತ್ತು PTI ಕನ್ಸಲ್ಟೆನ್ಸಿ ಬಾಂಬೆಯ ಮಾಲೀಕರಾದ ಶ್ರೀ ಜೋಸೆಫ್ ಇಲಿಯಾಸ್ ಮಿನೇಜಸ್ ಮತ್ತು ಮಂಗಳೂರಿನ ಪ್ರೇರಕ ಭಾಷಣಕಾರರಾದ ರಫೀಕ್ ಮಾಸ್ಟರ್ ಸಂಭ್ರಮದ ಗೌರವ ಅತಿಥಿಗಳಾಗಿದ್ದರು. ಮಂಗಳೂರಿನ ಜಿಜಿ100 ಕೋರಸ್ ತಂಡ ಸುಂದರ ಕ್ರಿಸ್ಮಸ್ ಸಂಗೀತದೊಂದಿಗೆ ಸಭಿಕರನ್ನು ರಂಜಿಸಿತು.
ಕಾರ್ಯಕ್ರಮವನ್ನು ಜಿಯೋ ಡಿಸಿಲ್ವಾ ನಿರೂಪಿಸಿದರು. ಸ್ನೇಹಾಲಯದ ಕಾರ್ಯನಿರ್ವಾಹಕ ನಿರ್ದೇಶಕರಾದ ಜೋಸೆಫ್ ಕ್ರಾಸ್ತಾ ಕಾರ್ಯಕ್ರಮಕ್ಕೆ ಎಲ್ಲರನ್ನು ಆತ್ಮೀಯವಾಗಿ ಸ್ವಾಗತಿಸಿ, ಪ್ರಸ್ತಾವಿಕ ನುಡಿಗಳ ಜೊತೆ ಸಂಭ್ರಮಕ್ಕೆ ಚಾಲನೆ ನೀಡಿದರು.
ಅತಿಥಿಗಳು ಕ್ರಿಸ್ಮಸ್ ಕೇಕ್ ಕತ್ತರಿಸಿ ಸಾಂತಕ್ಲೋಸ್ ಸಮ್ಮುಖದಲ್ಲಿ ಎಲ್ಲರಿಗೂ ಸಿಹಿ ಹಂಚಿದರು. ಕಾರ್ಯದರ್ಶಿ ಕಮ್ ಟ್ರಸ್ಟಿ ಒಲಿವಿಯಾ ಕ್ರಾಸ್ತಾ ವಂದಿಸಿದರು. ಇದು ಹೃದಯಸ್ಪರ್ಶಿ ಮತ್ತು ಸಂತೋಷದಾಯಕ ಆಚರಣೆಯಾಗಿದ್ದು, ಹಾಜರಿದ್ದ ಎಲ್ಲರ ಮುಖದಲ್ಲಿ ನಗುವನ್ನು ತಂದಿತು. ಪ್ರತಿಯೋರ್ವ ಅತಿಥಿಯರ ಅಮೋಘ ಸಂದೇಶ ಮಾನಾವಿಯತೆ, ದಾನ, ಪ್ರೀತಿ, ಸಮಾಜಿಕ ನ್ಯಾಯ ಹಾಗೂ ಹಂಚುವಿಕೆ ಬಗ್ಗೆ ಇದ್ದು ಸ್ನೇಹಾಲಯದ ಕೆಲಸವನ್ನು ಶ್ಲಾಫೀಸಿ ಹೊಗಳಿದರು. ಕ್ರಿಸ್ಮಸ್ ಹೊಸ ಅಲೆಯನ್ನು ಪರಿಸರದಲ್ಲಿ ಸೃಷ್ಠಿಸಿತು.

ಇತ್ತೀಚಿನ ಸುದ್ದಿ

ಜಾಹೀರಾತು