5:31 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಮಂಜೇಶ್ವರ ಸ್ನೇಹಾಲಯ ಸೈಕೊ ಸೋಶಿಯಲ್ ಪುನರ್ವಸತಿ ಕೇಂದ್ರದಲ್ಲಿ “ಸ್ನೇಹ ಮಿಲನ-2024 “

23/12/2024, 12:43

ಮಂಗಳೂರು(reporterkarnataka.com): ಮಂಜೇಶ್ವರ ಸ್ನೇಹಾಲಯ ಸೈಕೊ ಸೋಶಿಯಲ್ ಪುನರ್ವಸತಿ ಕೇಂದ್ರದಲ್ಲಿ “ಸ್ನೇಹ ಮಿಲನ-2024 ” ಎಂಬ ಕ್ರಿಸ್‌ಮಸ್ ಕಾರ್ಯಕ್ರಮವನ್ನು ಡಿಸೆಂಬರ್ 21ರಂದು ಆಚರಿಸಲಾಯಿತು. ಸ್ನೇಹಾಲಯದ ವಾರ್ಷಿಕ ಕ್ರಿಸ್‌ಮಸ್ ಆಚರಣೆಯು ನಿವಾಸಿಗಳಲ್ಲಿ ಹೊಸ ಉತ್ಸಾಹವನ್ನು ಜೀವಂತವಾಗಿರಿಸಿತು. ಕಾರ್ಯಕ್ರಮದಲ್ಲಿ ಕಾಸರಗೋಡು ಜಿಲ್ಲಾ ಪೊಲೀಸ್ ಮುಖ್ಯಸ್ಥರಾದ ಶಿಲ್ಪಾ ದ್ಯಾವಯ್ಯ, ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರು ಹಾಗೂ ಅಧೀಕ್ಷಕರಾದ ಡಾ.ಶಿವಪ್ರಕಾಶ್ ಡಿ.ಎಸ್. ಸೇರಿದಂತೆ ಗೌರವಾನ್ವಿತ ಅತಿಥಿಗಳು ಉಪಸ್ಥಿತರಿದ್ದರು.


ಹೊಸಂಗಡಿಯ ಇನ್‌ಫೆಂಟ್ ಜೀಸಸ್ ಚರ್ಚ್‌ನ ಧರ್ಮಗುರು ಫಾ. ಲೋಯಸ್ ಮರಿಯದಾಸ್, ಸ್ನೇಹಾಲಯದ ನಿವಾಸಿ ಗುರುಗಳಾದ ಫಾ. ಸಿರಿಲ್ ಡಿ ಸೋಜಾ, ಫಾರ್ಚೂನ್ ಲೈಫ್ ವೆಲ್ತ್ ಪ್ರೈವೇಟ್ ಲಿಮಿಟೆಡ್ ದೆಹಲಿ, ನಿರ್ದೇಶಕರಾದ ಮತ್ತು PTI ಕನ್ಸಲ್ಟೆನ್ಸಿ ಬಾಂಬೆಯ ಮಾಲೀಕರಾದ ಶ್ರೀ ಜೋಸೆಫ್ ಇಲಿಯಾಸ್ ಮಿನೇಜಸ್ ಮತ್ತು ಮಂಗಳೂರಿನ ಪ್ರೇರಕ ಭಾಷಣಕಾರರಾದ ರಫೀಕ್ ಮಾಸ್ಟರ್ ಸಂಭ್ರಮದ ಗೌರವ ಅತಿಥಿಗಳಾಗಿದ್ದರು. ಮಂಗಳೂರಿನ ಜಿಜಿ100 ಕೋರಸ್ ತಂಡ ಸುಂದರ ಕ್ರಿಸ್ಮಸ್ ಸಂಗೀತದೊಂದಿಗೆ ಸಭಿಕರನ್ನು ರಂಜಿಸಿತು.
ಕಾರ್ಯಕ್ರಮವನ್ನು ಜಿಯೋ ಡಿಸಿಲ್ವಾ ನಿರೂಪಿಸಿದರು. ಸ್ನೇಹಾಲಯದ ಕಾರ್ಯನಿರ್ವಾಹಕ ನಿರ್ದೇಶಕರಾದ ಜೋಸೆಫ್ ಕ್ರಾಸ್ತಾ ಕಾರ್ಯಕ್ರಮಕ್ಕೆ ಎಲ್ಲರನ್ನು ಆತ್ಮೀಯವಾಗಿ ಸ್ವಾಗತಿಸಿ, ಪ್ರಸ್ತಾವಿಕ ನುಡಿಗಳ ಜೊತೆ ಸಂಭ್ರಮಕ್ಕೆ ಚಾಲನೆ ನೀಡಿದರು.
ಅತಿಥಿಗಳು ಕ್ರಿಸ್ಮಸ್ ಕೇಕ್ ಕತ್ತರಿಸಿ ಸಾಂತಕ್ಲೋಸ್ ಸಮ್ಮುಖದಲ್ಲಿ ಎಲ್ಲರಿಗೂ ಸಿಹಿ ಹಂಚಿದರು. ಕಾರ್ಯದರ್ಶಿ ಕಮ್ ಟ್ರಸ್ಟಿ ಒಲಿವಿಯಾ ಕ್ರಾಸ್ತಾ ವಂದಿಸಿದರು. ಇದು ಹೃದಯಸ್ಪರ್ಶಿ ಮತ್ತು ಸಂತೋಷದಾಯಕ ಆಚರಣೆಯಾಗಿದ್ದು, ಹಾಜರಿದ್ದ ಎಲ್ಲರ ಮುಖದಲ್ಲಿ ನಗುವನ್ನು ತಂದಿತು. ಪ್ರತಿಯೋರ್ವ ಅತಿಥಿಯರ ಅಮೋಘ ಸಂದೇಶ ಮಾನಾವಿಯತೆ, ದಾನ, ಪ್ರೀತಿ, ಸಮಾಜಿಕ ನ್ಯಾಯ ಹಾಗೂ ಹಂಚುವಿಕೆ ಬಗ್ಗೆ ಇದ್ದು ಸ್ನೇಹಾಲಯದ ಕೆಲಸವನ್ನು ಶ್ಲಾಫೀಸಿ ಹೊಗಳಿದರು. ಕ್ರಿಸ್ಮಸ್ ಹೊಸ ಅಲೆಯನ್ನು ಪರಿಸರದಲ್ಲಿ ಸೃಷ್ಠಿಸಿತು.

ಇತ್ತೀಚಿನ ಸುದ್ದಿ

ಜಾಹೀರಾತು