ಇತ್ತೀಚಿನ ಸುದ್ದಿ
ಮಂಜೇಶ್ವರ: 9ರ ಹರೆಯದ ಪುಟ್ಟ ಬಾಲಕಿಯ ನೆಲಕ್ಕಪ್ಪಳಿದ ದುಷ್ಟ: ಸಿಸಿ ಕ್ಯಾಮೆರಾ ದೃಶ್ಯ ವೈರಲ್
18/11/2022, 12:55

ಮಂಜೇಶ್ವರ(reporterkarnataka.com): ಒಂಟಿಯಾಗಿ ಮದ್ರಸಕ್ಕೆ ತೆರಳುತ್ತಿದ್ದ ಬಾಲಕಿಯನ್ನು ಯುವಕನೋರ್ವ ಅನಾಮತ್ತಾಗಿ ಎತ್ತಿ ನೆಲಕ್ಕೆ ಅಪ್ಪಳಿಸಿದ ಅಮಾನವೀಯ ಘಟನೆ ಕಾಸರಗೋಡಿನ ಮಂಜೇಶ್ವರದಲ್ಲಿ ನಡೆದಿದೆ.
ಸಿಸಿ ಟಿವಿ ಫೋಟೇಜ್ ಆಧಾರದಲ್ಲಿ ಈ ಘಟನೆ ಗುರುವಾರ ಬೆಳಗ್ಗೆ 7 ಗಂಟೆಯ ಸುಮಾರಿಗೆ ನಡೆದಿದೆ ಎಂದು ತಿಳಿದು ಬಂದಿದೆ.
ನೆಲಕ್ಕಪ್ಪಳಿಸಿದ ರಭಸದಲ್ಲಿ 9ರ ಹರೆಯದ ಬಾಲಕಿಯ ಸೊಂಟ ಹಾಗೂ ಬೆನ್ನಿನ ಮೂಳೆಗಳಿಗೆ ಘಾಸಿಯಾಗಿದೆ ಎನ್ನಲಾಗಿದೆ. ಬಾಲಕಿಯನ್ನು
ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಮಂಜೇಶ್ವರ ಕುಂಜತ್ತೂರಿನ ಅಬೂಬಕ್ಕರ್ ಸಿದ್ದೀಕ್ (30) ಎಂದು ಗುರುತಿಸಲಾಗಿದ್ದು ಆತನನ್ನು ಪೊಲೀಸರು ಬಂಧಿಸಿದ್ದಾರೆ.
ಮದ್ರಸಕ್ಕೆ ನಡೆದುಕೊಂಡು ಹೋಗುತ್ತಿದ್ದ ಬಾಲಕಿಯ ಹತ್ತಿರ ಬಂದ ಈತ ಬಾಲಕಿಯನ್ನು ಮೇಲಕ್ಕೆತ್ತಿ ಎಸೆದಿದ್ದು, ಕೃತ್ಯದ ಬಳಿಕ ಆರೋಪಿ ಅಲ್ಲಿಂದ ಪರಾರಿಯಾಗಿದ್ದ.
ಬಾಲಕಿಯ ಪೋಷಕರು ನೀಡಿದ ದೂರಿನಂತೆ ಮಂಜೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಘಟನೆಯನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಿರುವುದಾಗಿ ಶಿಕ್ಷಣ ಸಚಿವ ವಿ. ಶಿವನ್ ಕುಟ್ಟಿ ತಿಳಿಸಿದ್ದಾರೆ.