6:56 PM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಮಂಜೇಶ್ವರ: 9ರ ಹರೆಯದ ಪುಟ್ಟ ಬಾಲಕಿಯ ನೆಲಕ್ಕಪ್ಪಳಿದ ದುಷ್ಟ: ಸಿಸಿ ಕ್ಯಾಮೆರಾ ದೃಶ್ಯ ವೈರಲ್

18/11/2022, 12:55

ಮಂಜೇಶ್ವರ(reporterkarnataka.com): ಒಂಟಿಯಾಗಿ ಮದ್ರಸಕ್ಕೆ ತೆರಳುತ್ತಿದ್ದ ಬಾಲಕಿಯನ್ನು ಯುವಕನೋರ್ವ ಅನಾಮತ್ತಾಗಿ ಎತ್ತಿ ನೆಲಕ್ಕೆ ಅಪ್ಪಳಿಸಿದ ಅಮಾನವೀಯ ಘಟನೆ ಕಾಸರಗೋಡಿನ ಮಂಜೇಶ್ವರದಲ್ಲಿ ನಡೆದಿದೆ.
ಸಿಸಿ ಟಿವಿ ಫೋಟೇಜ್ ಆಧಾರದಲ್ಲಿ ಈ ಘಟನೆ ಗುರುವಾರ ಬೆಳಗ್ಗೆ 7 ಗಂಟೆಯ ಸುಮಾರಿಗೆ ನಡೆದಿದೆ ಎಂದು ತಿಳಿದು ಬಂದಿದೆ.

ನೆಲಕ್ಕಪ್ಪಳಿಸಿದ ರಭಸದಲ್ಲಿ 9ರ ಹರೆಯದ ಬಾಲಕಿಯ ಸೊಂಟ ಹಾಗೂ ಬೆನ್ನಿನ ಮೂಳೆಗಳಿಗೆ ಘಾಸಿಯಾಗಿದೆ ಎನ್ನಲಾಗಿದೆ. ಬಾಲಕಿಯನ್ನು
ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಮಂಜೇಶ್ವರ ಕುಂಜತ್ತೂರಿನ ಅಬೂಬಕ್ಕರ್ ಸಿದ್ದೀಕ್ (30) ಎಂದು ಗುರುತಿಸಲಾಗಿದ್ದು ಆತನನ್ನು ಪೊಲೀಸರು ಬಂಧಿಸಿದ್ದಾರೆ.

ಮದ್ರಸಕ್ಕೆ ನಡೆದುಕೊಂಡು ಹೋಗುತ್ತಿದ್ದ ಬಾಲಕಿಯ ಹತ್ತಿರ ಬಂದ ಈತ ಬಾಲಕಿಯನ್ನು ಮೇಲಕ್ಕೆತ್ತಿ ಎಸೆದಿದ್ದು, ಕೃತ್ಯದ ಬಳಿಕ ಆರೋಪಿ ಅಲ್ಲಿಂದ ಪರಾರಿಯಾಗಿದ್ದ.

ಬಾಲಕಿಯ ಪೋಷಕರು ನೀಡಿದ ದೂರಿನಂತೆ ಮಂಜೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಘಟನೆಯನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಿರುವುದಾಗಿ ಶಿಕ್ಷಣ ಸಚಿವ ವಿ. ಶಿವನ್ ಕುಟ್ಟಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು