7:24 AM Tuesday1 - July 2025
ಬ್ರೇಕಿಂಗ್ ನ್ಯೂಸ್
ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,… ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕೊಂಡೇ ಅಧಿಕಾರಕ್ಕೆ ಬರಬೇಕು, ಸ್ವಂತ ಶಕ್ತಿಯಿಂದ… Karnataka CM | ಸರಕಾರ 5 ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ: ಮೈಸೂರಿನಲ್ಲಿ ಸಿಎಂ… ಮಾಂಸಕ್ಕಾಗಿ ಜಿಂಕೆ ಕೊಲ್ಲುತ್ತಿದ್ದ ಪಾಪಿಯ ಬಂಧನ: 10 ಜಿಂಕೆ,1 ಕಾಡು ಹಂದಿ ಮಾಂಸ,… Shivamogga | ಯುವತಿಗೆ ಲೈಂಗಿಕ ಕಿರುಕುಳ: ಮೆಗ್ಗಾನ್ ಆಸ್ಪತ್ರೆ ವೈದ್ಯ ಡಾ.ಅಶ್ವಿನ್ ಹೆಬ್ಬಾರ್… Chikkamagaluru | 3 ದಿನಗಳು ಕಳೆದರೂ ನಾಪತ್ತೆಯಾದ ಫಾರೆಸ್ಟ್ ಗಾರ್ಡ್ ಪತ್ತೆ ಇಲ್ಲ:… ಸಿದ್ದರಾಮಯ್ಯರಿಗೆ ಅಂಬೇಡ್ಕರ್ ಸಂವಿಧಾನ ಬೇಕಾ, ಇಂದಿರಾ ಗಾಂಧಿ ಸಂವಿಧಾನ ಬೇಕಾ: ಬಸವರಾಜ ಬೊಮ್ಮಾಯಿ… Mandya | ಕಾವೇರಿ ಜಲಾಯನ ಪ್ರದೇಶದಲ್ಲಿ ವ್ಯಾಪಕ ಮಳೆ: ಹ ಕೆಆರ್ ಎಸ್… ವಿಜೃಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು: ಸೆ. 22ರಂದು ದಸರಾಕ್ಕೆ ಚಾಲನೆ:…

ಇತ್ತೀಚಿನ ಸುದ್ದಿ

ಮಂಜೇಶ್ವರ ಅನಂತೇಶ್ವರ ದೇವಸ್ಥಾನ 221ನೇ ವರ್ಷದ ಪುನರ್ ಪ್ರತಿಷ್ಠಾ ವರ್ಧಂತಿ: ಬೆಳ್ಳಿ ಪಲ್ಲಕಿ ಹಗಲೋತ್ಸವ

17/03/2025, 21:24

ಕಾಸರಗೋಡು(reporterkarnataka.com): ಮಂಜೇಶ್ವರ ಶ್ರೀಮದ್ ಅನಂತೇಶ್ವರ ದೇವಸ್ಥಾನ 221ನೇ ವರ್ಷದ ಪುನರ್ ಪ್ರತಿಷ್ಠಾ ವರ್ಧಂತಿ ಹಾಗೂ ಬೆಳ್ಳಿ ಲಾಲ್ಕಿಯ 150 ನೇ ವರ್ಷದ ಸಂಭ್ರಮೋತ್ಸವ ಐತಿಹಾಸಿಕವಾಗಿ ಅಪೂರ್ವ ವಿಜೃಂಭಣೆಯಿಂದ ಅವಿಸ್ಮರಣೀಯವಾಗಿ ದೇವಳದ ಸ್ವಯಂ ಸೇವಕರಿಂದ ನೆರವೇರಿತು.


ಬೆಳಿಗ್ಗೆ ಬೆಳ್ಳಿ ಪಲ್ಲಕಿ ಹಗಲೋತ್ಸವ ,ಮಧ್ಯಾಹ್ನ ಸಮಾಜ ಬಾಂಧವರಿಂದ ಶ್ರೀ ನರಸಿಂಹ ಸ್ತುತಿ ಪಠಣ ದೊಂದಿಗೆ ಪ್ರದಕ್ಷಿಣಾ ಸೇವೆ ,ಸಮೃದ್ಧವಾದ ನಿರೀಕ್ಷಣಾ ವಸ್ತುಗಳು ಶ್ರೀ ದೇವರಿಗೆ ವಾದ್ಯ ಘೋಷ್ಠಿಯೊಂದಿಗೆ ಸಮರ್ಪಣೆ ಮಾಡಲಾಯಿತು. ರಾತ್ರಿ 150ನೇ ವರ್ಷದ ಬೆಳ್ಳಿ ಲಾಲಕಿಗೆ ಅಪೂರ್ವ ಅಲಂಕಾರದೊಂದಿಗೆ ಉತ್ಸವ ಹಾಗೂ ಪೂಜಾ ಸೇವೆ, ಉತ್ಸವದಲ್ಲಿ ಅದ್ದೂರಿ ವಾದ್ಯಘೋಷ್ಠಿ ,ಕಣ್ಮನ ಸಂತೈಸುವ ವಿಶೇಷ ದೀಪಾರಾಧನೆ ನೆರವೇರಿತು. ಈ ಸಂದರ್ಭದಲ್ಲಿ ದೇವಳದ ಆಡಳಿತ ಮಂಡಳಿ, ಅರ್ಚಕರು ಹಾಗೂ ಹತ್ತು ಸಮಸ್ತರು ಉಪಸ್ಥಿತರಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು