6:59 AM Tuesday1 - July 2025
ಬ್ರೇಕಿಂಗ್ ನ್ಯೂಸ್
ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,… ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕೊಂಡೇ ಅಧಿಕಾರಕ್ಕೆ ಬರಬೇಕು, ಸ್ವಂತ ಶಕ್ತಿಯಿಂದ… Karnataka CM | ಸರಕಾರ 5 ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ: ಮೈಸೂರಿನಲ್ಲಿ ಸಿಎಂ… ಮಾಂಸಕ್ಕಾಗಿ ಜಿಂಕೆ ಕೊಲ್ಲುತ್ತಿದ್ದ ಪಾಪಿಯ ಬಂಧನ: 10 ಜಿಂಕೆ,1 ಕಾಡು ಹಂದಿ ಮಾಂಸ,… Shivamogga | ಯುವತಿಗೆ ಲೈಂಗಿಕ ಕಿರುಕುಳ: ಮೆಗ್ಗಾನ್ ಆಸ್ಪತ್ರೆ ವೈದ್ಯ ಡಾ.ಅಶ್ವಿನ್ ಹೆಬ್ಬಾರ್… Chikkamagaluru | 3 ದಿನಗಳು ಕಳೆದರೂ ನಾಪತ್ತೆಯಾದ ಫಾರೆಸ್ಟ್ ಗಾರ್ಡ್ ಪತ್ತೆ ಇಲ್ಲ:… ಸಿದ್ದರಾಮಯ್ಯರಿಗೆ ಅಂಬೇಡ್ಕರ್ ಸಂವಿಧಾನ ಬೇಕಾ, ಇಂದಿರಾ ಗಾಂಧಿ ಸಂವಿಧಾನ ಬೇಕಾ: ಬಸವರಾಜ ಬೊಮ್ಮಾಯಿ… Mandya | ಕಾವೇರಿ ಜಲಾಯನ ಪ್ರದೇಶದಲ್ಲಿ ವ್ಯಾಪಕ ಮಳೆ: ಹ ಕೆಆರ್ ಎಸ್… ವಿಜೃಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು: ಸೆ. 22ರಂದು ದಸರಾಕ್ಕೆ ಚಾಲನೆ:…

ಇತ್ತೀಚಿನ ಸುದ್ದಿ

ಮಣ್ಣಗುಡ್ಡೆ ದಕ ಜಿಪಂ ಹಿರಿಯ ಪ್ರಾಥಮಿಕ ಶಾಲೆ: ವಿವೇಕ ಶಾಲಾ ಯೋಜನೆಯಡಿ 3 ನೂತನ ತರಗತಿ ಕೊಠಡಿಗಳ ಉದ್ಘಾಟನೆ

04/02/2025, 00:01

ಮಂಗಳೂರು(reporterkarnataka.com): ನಗರದ ಮಣ್ಣಗುಡ್ಡೆಯ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯ ವಿವೇಕ ಶಾಲಾ ಯೋಜನೆಯಡಿ ಶಾಸಕರ ಅನುದಾನದಲ್ಲಿ ನಿರ್ಮಾಣಗೊಂಡ ಮೂರು ನೂತನ ತರಗತಿ ಕೊಠಡಿಗಳನ್ನು ಶಾಸಕ ವೇದವ್ಯಾಸ ಕಾಮತ್ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ಇದು 2022-23 ನೇ ಸಾಲಿನ ರಾಜ್ಯ ವಲಯ ಮುಂದುವರಿದ ಯೋಜನೆಯ ಸರ್ಕಾರಿ ಪ್ರಾಥಮಿಕ- ಪ್ರೌಢ ಶಾಲೆಗಳಿಗೆ ಕೊಠಡಿಗಳ ನಿರ್ಮಾಣ ಕಾಮಗಾರಿಯ ಕ್ರಿಯಾ ಯೋಜನೆಯಾಗಿದ್ದು, ಸರ್ಕಾರಿ ಶಾಲೆಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಇದೀಗ ಅವೆಲ್ಲವೂ ಹಂತ ಹಂತವಾಗಿ ಅನುಷ್ಠಾನಕ್ಕೆ ಬರುತ್ತಿದ್ದು ಸರ್ಕಾರಿ ಶಾಲೆಗಳು ಇನ್ನಷ್ಟು ಅಭಿವೃದ್ಧಿ ಆಗಬೇಕು ಎಂದು ಹೇಳಿದರು.
ಪಾಲಿಕೆ ಸದಸ್ಯೆ ಸಂಧ್ಯಾ ಮೋಹನ್ ಆಚಾರ್ಯ, ಡಾ.ಕಿಶೋರ್ ಕುಮಾರ್, ಜೇಮ್ಸ್ ಕುಟಿನ್ಹಾ, ವೇದಾವತಿ ರಾವ್, ಮಹಮ್ಮದ್ ಸಿಕಂದರ್, ಕೃಷ್ಣ ಹೆಗ್ಡೆ, ಸುರೇಶ್ಚಂದ್ರ ಶೆಟ್ಟಿ, ಮುಕೇಶ್, ಆಶ್ರಯ ಭಂಡಾರಿ, ಉಮೇಶ್ ಗಟ್ಟಿ, ಮೇಘ ಗೋಕುಲ್, ಆಶಾ ನಾಗರಾಜ್, ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕರು, ಸಿಬ್ಬಂದಿಗಳು, ಹಳೆ ವಿದ್ಯಾರ್ಥಿ ಸಂಘದವರ ಸಹಿತ ಅನೇಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು