10:40 AM Friday9 - May 2025
ಬ್ರೇಕಿಂಗ್ ನ್ಯೂಸ್
Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ… Chikkamagaluru | ಮಲೆನಾಡಿನಲ್ಲಿ ಮಿತಿಮೀರಿದ ಕಾಡುಪ್ರಾಣಿಗಳ ಉಪಟಳ: ಮೂಡಿಗೆರೆ ಸಮೀಪ ಹಸುವನ್ನು ಕೊಂದ… ಮಾಜಿ ಮುಖ್ಯಮಂತ್ರಿ, ದಿವಂಗತ ಕೆ.ಸಿ.ರೆಡ್ಡಿ ಅವರ ಜನ್ಮದಿನ: ಭಾವಚಿತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲಾರ್ಪಣೆ ಮಾವಿನ ರಾಜಧಾನಿ ಶ್ರೀನಿವಾಸಪುರ ಮತ್ತೆ ಸಜ್ಜು: ಮೇ 15ರಿಂದ ಮಾರಾಟ ಭರ್ಜರಿ ಆರಂಭ Chikkamagaluru | ಕಾಶ್ಮೀರದಲ್ಲಿ ಉಗ್ರರ ದಾಳಿ: ಕೊಟ್ಟಿಗೆಹಾರ ಬಂದ್; ಅಂಗಡಿ-ಮುಂಗಟ್ಟು ಸ್ತಬ್ದ Murder | ನಾರಾಯಣಪುರ: ಗೌಡಪ್ಪ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್; ಅಪ್ರಾಪ್ತ ವಯಸ್ಸಿನ…

ಇತ್ತೀಚಿನ ಸುದ್ದಿ

ಮಣ್ಣಗುಡ್ಡೆ ದಕ ಜಿಪಂ ಹಿರಿಯ ಪ್ರಾಥಮಿಕ ಶಾಲೆ: ವಿವೇಕ ಶಾಲಾ ಯೋಜನೆಯಡಿ 3 ನೂತನ ತರಗತಿ ಕೊಠಡಿಗಳ ಉದ್ಘಾಟನೆ

04/02/2025, 00:01

ಮಂಗಳೂರು(reporterkarnataka.com): ನಗರದ ಮಣ್ಣಗುಡ್ಡೆಯ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯ ವಿವೇಕ ಶಾಲಾ ಯೋಜನೆಯಡಿ ಶಾಸಕರ ಅನುದಾನದಲ್ಲಿ ನಿರ್ಮಾಣಗೊಂಡ ಮೂರು ನೂತನ ತರಗತಿ ಕೊಠಡಿಗಳನ್ನು ಶಾಸಕ ವೇದವ್ಯಾಸ ಕಾಮತ್ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ಇದು 2022-23 ನೇ ಸಾಲಿನ ರಾಜ್ಯ ವಲಯ ಮುಂದುವರಿದ ಯೋಜನೆಯ ಸರ್ಕಾರಿ ಪ್ರಾಥಮಿಕ- ಪ್ರೌಢ ಶಾಲೆಗಳಿಗೆ ಕೊಠಡಿಗಳ ನಿರ್ಮಾಣ ಕಾಮಗಾರಿಯ ಕ್ರಿಯಾ ಯೋಜನೆಯಾಗಿದ್ದು, ಸರ್ಕಾರಿ ಶಾಲೆಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಇದೀಗ ಅವೆಲ್ಲವೂ ಹಂತ ಹಂತವಾಗಿ ಅನುಷ್ಠಾನಕ್ಕೆ ಬರುತ್ತಿದ್ದು ಸರ್ಕಾರಿ ಶಾಲೆಗಳು ಇನ್ನಷ್ಟು ಅಭಿವೃದ್ಧಿ ಆಗಬೇಕು ಎಂದು ಹೇಳಿದರು.
ಪಾಲಿಕೆ ಸದಸ್ಯೆ ಸಂಧ್ಯಾ ಮೋಹನ್ ಆಚಾರ್ಯ, ಡಾ.ಕಿಶೋರ್ ಕುಮಾರ್, ಜೇಮ್ಸ್ ಕುಟಿನ್ಹಾ, ವೇದಾವತಿ ರಾವ್, ಮಹಮ್ಮದ್ ಸಿಕಂದರ್, ಕೃಷ್ಣ ಹೆಗ್ಡೆ, ಸುರೇಶ್ಚಂದ್ರ ಶೆಟ್ಟಿ, ಮುಕೇಶ್, ಆಶ್ರಯ ಭಂಡಾರಿ, ಉಮೇಶ್ ಗಟ್ಟಿ, ಮೇಘ ಗೋಕುಲ್, ಆಶಾ ನಾಗರಾಜ್, ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕರು, ಸಿಬ್ಬಂದಿಗಳು, ಹಳೆ ವಿದ್ಯಾರ್ಥಿ ಸಂಘದವರ ಸಹಿತ ಅನೇಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು