3:41 AM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಮಣ್ಣು ತೆಗೆಯುವ ಜೆಸಿಬಿಯಿಂದ ಚರಂಡಿ ತುಂಬಿದ ನೀರು ಎತ್ತುವುದು!!: ಮಂಗಳೂರು ಸ್ಮಾರ್ಟ್ ಸಿಟಿಗೆ ಈ ಬಾರಿ ಪ್ರಶಸ್ತಿ ಗ್ಯಾರಂಟಿ! 

13/07/2021, 22:07

ಮಂಗಳೂರು(reporterkarnatakanews): ಮಂಗಳೂರು ಸ್ಮಾರ್ಟ್ ಸಿಟಿ ತಂತ್ರಜ್ಞಾನದಲ್ಲಿ ಎಷ್ಟೊಂದು ಮುಂದುವರಿದಿದೆ ಎನ್ನುವುದಕ್ಕೆ ಇದೊಂದು ತಾಜಾ ನಿದರ್ಶನ. ಮಣ್ಣು ಅಗೆಯುವುದು ಜೆಸಿಬಿಯಿಂದ ಇಲ್ಲಿನ ಎಂಜಿನಿಯರ್ ಹಾಗೂ ಗುತ್ತಿಗೆದಾರರು ಹೊಂಡ, ಚರಂಡಿಯಲ್ಲಿ ನಿಂತ ಮಳೆ ನೀರನ್ನು ತೆಗೆಯುತ್ತಾರೆ!


ನಗರದ ಸ್ಟೇಟ್ ಬ್ಯಾಂಕ್ ಬಳಿಯ ರಸ್ತೆಗೆ ಒಳಚರಂಡಿ ನಿರ್ಮಿಸುವ ಕಾರ್ಯ ತಿಂಗಳುಗಟ್ಟಲೆಯಿಂದ ನನೆಗುದಿಗೆ ಬಿದ್ದಿತ್ತು. ಇದೀಗ ಕಳೆದ ಮೂರು ದಿನಗಳಿಂದ ನಗರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಸ್ಮಾರ್ಟ್ ಸಿಟಿಯಡಿ ಅಗೆದು ಹಾಕಿದ ಹೊಂಡಗಳಲ್ಲಿ ಕೆಸರು ನೀರು ತುಂಬಿದೆ. ಕಳೆದ ಕೆಲವು ದಿನಗಳಿಂದ ಚರಂಡಿ ತುಂಬಿದ ನೀರನ್ನು ಜೆಸಿಬಿ ಮೂಲಕ ಖಾಲಿ ಮಾಡುವ ಕೆಲಸ ನಡೆಯುತ್ತಿದೆ. ಆದರೆ ಜೆಸಿಬಿ ಮೂಲಕ ಎತ್ತಿ ಅಲ್ಲೇ ಬದಿಗೆ ಸುರಿಯುವ ನೀರು ಮತ್ತೆ ಅದೇ ಚರಂಡಿ ಸೇರುತ್ತಿದೆ. ಆಧುನಿಕ ತಂತ್ರಜ್ಞಾನ ಬಳಕೆಗೆ ಈ ಬಾರಿ ಮಂಗಳೂರು ಸ್ಮಾರ್ಟ್ ಸಿಟಿಗೆ ಪ್ರಶಸ್ತಿ ಗ್ಯಾರಂಟಿ ಎಂದು ಸಾರ್ವಜನಿಕರು ಆಡಿಕೊಳ್ಳುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು