2:34 AM Thursday5 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

ಮಣ್ಣು ತೆಗೆಯುವ ಜೆಸಿಬಿಯಿಂದ ಚರಂಡಿ ತುಂಬಿದ ನೀರು ಎತ್ತುವುದು!!: ಮಂಗಳೂರು ಸ್ಮಾರ್ಟ್ ಸಿಟಿಗೆ ಈ ಬಾರಿ ಪ್ರಶಸ್ತಿ ಗ್ಯಾರಂಟಿ! 

13/07/2021, 22:07

ಮಂಗಳೂರು(reporterkarnatakanews): ಮಂಗಳೂರು ಸ್ಮಾರ್ಟ್ ಸಿಟಿ ತಂತ್ರಜ್ಞಾನದಲ್ಲಿ ಎಷ್ಟೊಂದು ಮುಂದುವರಿದಿದೆ ಎನ್ನುವುದಕ್ಕೆ ಇದೊಂದು ತಾಜಾ ನಿದರ್ಶನ. ಮಣ್ಣು ಅಗೆಯುವುದು ಜೆಸಿಬಿಯಿಂದ ಇಲ್ಲಿನ ಎಂಜಿನಿಯರ್ ಹಾಗೂ ಗುತ್ತಿಗೆದಾರರು ಹೊಂಡ, ಚರಂಡಿಯಲ್ಲಿ ನಿಂತ ಮಳೆ ನೀರನ್ನು ತೆಗೆಯುತ್ತಾರೆ!


ನಗರದ ಸ್ಟೇಟ್ ಬ್ಯಾಂಕ್ ಬಳಿಯ ರಸ್ತೆಗೆ ಒಳಚರಂಡಿ ನಿರ್ಮಿಸುವ ಕಾರ್ಯ ತಿಂಗಳುಗಟ್ಟಲೆಯಿಂದ ನನೆಗುದಿಗೆ ಬಿದ್ದಿತ್ತು. ಇದೀಗ ಕಳೆದ ಮೂರು ದಿನಗಳಿಂದ ನಗರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಸ್ಮಾರ್ಟ್ ಸಿಟಿಯಡಿ ಅಗೆದು ಹಾಕಿದ ಹೊಂಡಗಳಲ್ಲಿ ಕೆಸರು ನೀರು ತುಂಬಿದೆ. ಕಳೆದ ಕೆಲವು ದಿನಗಳಿಂದ ಚರಂಡಿ ತುಂಬಿದ ನೀರನ್ನು ಜೆಸಿಬಿ ಮೂಲಕ ಖಾಲಿ ಮಾಡುವ ಕೆಲಸ ನಡೆಯುತ್ತಿದೆ. ಆದರೆ ಜೆಸಿಬಿ ಮೂಲಕ ಎತ್ತಿ ಅಲ್ಲೇ ಬದಿಗೆ ಸುರಿಯುವ ನೀರು ಮತ್ತೆ ಅದೇ ಚರಂಡಿ ಸೇರುತ್ತಿದೆ. ಆಧುನಿಕ ತಂತ್ರಜ್ಞಾನ ಬಳಕೆಗೆ ಈ ಬಾರಿ ಮಂಗಳೂರು ಸ್ಮಾರ್ಟ್ ಸಿಟಿಗೆ ಪ್ರಶಸ್ತಿ ಗ್ಯಾರಂಟಿ ಎಂದು ಸಾರ್ವಜನಿಕರು ಆಡಿಕೊಳ್ಳುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು