1:11 AM Sunday18 - January 2026
ಬ್ರೇಕಿಂಗ್ ನ್ಯೂಸ್
ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ…

ಇತ್ತೀಚಿನ ಸುದ್ದಿ

ಮಣ್ಣು ತೆಗೆಯುವ ಜೆಸಿಬಿಯಿಂದ ಚರಂಡಿ ತುಂಬಿದ ನೀರು ಎತ್ತುವುದು!!: ಮಂಗಳೂರು ಸ್ಮಾರ್ಟ್ ಸಿಟಿಗೆ ಈ ಬಾರಿ ಪ್ರಶಸ್ತಿ ಗ್ಯಾರಂಟಿ! 

13/07/2021, 22:07

ಮಂಗಳೂರು(reporterkarnatakanews): ಮಂಗಳೂರು ಸ್ಮಾರ್ಟ್ ಸಿಟಿ ತಂತ್ರಜ್ಞಾನದಲ್ಲಿ ಎಷ್ಟೊಂದು ಮುಂದುವರಿದಿದೆ ಎನ್ನುವುದಕ್ಕೆ ಇದೊಂದು ತಾಜಾ ನಿದರ್ಶನ. ಮಣ್ಣು ಅಗೆಯುವುದು ಜೆಸಿಬಿಯಿಂದ ಇಲ್ಲಿನ ಎಂಜಿನಿಯರ್ ಹಾಗೂ ಗುತ್ತಿಗೆದಾರರು ಹೊಂಡ, ಚರಂಡಿಯಲ್ಲಿ ನಿಂತ ಮಳೆ ನೀರನ್ನು ತೆಗೆಯುತ್ತಾರೆ!


ನಗರದ ಸ್ಟೇಟ್ ಬ್ಯಾಂಕ್ ಬಳಿಯ ರಸ್ತೆಗೆ ಒಳಚರಂಡಿ ನಿರ್ಮಿಸುವ ಕಾರ್ಯ ತಿಂಗಳುಗಟ್ಟಲೆಯಿಂದ ನನೆಗುದಿಗೆ ಬಿದ್ದಿತ್ತು. ಇದೀಗ ಕಳೆದ ಮೂರು ದಿನಗಳಿಂದ ನಗರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಸ್ಮಾರ್ಟ್ ಸಿಟಿಯಡಿ ಅಗೆದು ಹಾಕಿದ ಹೊಂಡಗಳಲ್ಲಿ ಕೆಸರು ನೀರು ತುಂಬಿದೆ. ಕಳೆದ ಕೆಲವು ದಿನಗಳಿಂದ ಚರಂಡಿ ತುಂಬಿದ ನೀರನ್ನು ಜೆಸಿಬಿ ಮೂಲಕ ಖಾಲಿ ಮಾಡುವ ಕೆಲಸ ನಡೆಯುತ್ತಿದೆ. ಆದರೆ ಜೆಸಿಬಿ ಮೂಲಕ ಎತ್ತಿ ಅಲ್ಲೇ ಬದಿಗೆ ಸುರಿಯುವ ನೀರು ಮತ್ತೆ ಅದೇ ಚರಂಡಿ ಸೇರುತ್ತಿದೆ. ಆಧುನಿಕ ತಂತ್ರಜ್ಞಾನ ಬಳಕೆಗೆ ಈ ಬಾರಿ ಮಂಗಳೂರು ಸ್ಮಾರ್ಟ್ ಸಿಟಿಗೆ ಪ್ರಶಸ್ತಿ ಗ್ಯಾರಂಟಿ ಎಂದು ಸಾರ್ವಜನಿಕರು ಆಡಿಕೊಳ್ಳುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು