9:32 AM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಮಣ್ಣು ತೆಗೆಯುವ ಜೆಸಿಬಿಯಿಂದ ಚರಂಡಿ ತುಂಬಿದ ನೀರು ಎತ್ತುವುದು!!: ಮಂಗಳೂರು ಸ್ಮಾರ್ಟ್ ಸಿಟಿಗೆ ಈ ಬಾರಿ ಪ್ರಶಸ್ತಿ ಗ್ಯಾರಂಟಿ! 

13/07/2021, 22:07

ಮಂಗಳೂರು(reporterkarnatakanews): ಮಂಗಳೂರು ಸ್ಮಾರ್ಟ್ ಸಿಟಿ ತಂತ್ರಜ್ಞಾನದಲ್ಲಿ ಎಷ್ಟೊಂದು ಮುಂದುವರಿದಿದೆ ಎನ್ನುವುದಕ್ಕೆ ಇದೊಂದು ತಾಜಾ ನಿದರ್ಶನ. ಮಣ್ಣು ಅಗೆಯುವುದು ಜೆಸಿಬಿಯಿಂದ ಇಲ್ಲಿನ ಎಂಜಿನಿಯರ್ ಹಾಗೂ ಗುತ್ತಿಗೆದಾರರು ಹೊಂಡ, ಚರಂಡಿಯಲ್ಲಿ ನಿಂತ ಮಳೆ ನೀರನ್ನು ತೆಗೆಯುತ್ತಾರೆ!


ನಗರದ ಸ್ಟೇಟ್ ಬ್ಯಾಂಕ್ ಬಳಿಯ ರಸ್ತೆಗೆ ಒಳಚರಂಡಿ ನಿರ್ಮಿಸುವ ಕಾರ್ಯ ತಿಂಗಳುಗಟ್ಟಲೆಯಿಂದ ನನೆಗುದಿಗೆ ಬಿದ್ದಿತ್ತು. ಇದೀಗ ಕಳೆದ ಮೂರು ದಿನಗಳಿಂದ ನಗರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಸ್ಮಾರ್ಟ್ ಸಿಟಿಯಡಿ ಅಗೆದು ಹಾಕಿದ ಹೊಂಡಗಳಲ್ಲಿ ಕೆಸರು ನೀರು ತುಂಬಿದೆ. ಕಳೆದ ಕೆಲವು ದಿನಗಳಿಂದ ಚರಂಡಿ ತುಂಬಿದ ನೀರನ್ನು ಜೆಸಿಬಿ ಮೂಲಕ ಖಾಲಿ ಮಾಡುವ ಕೆಲಸ ನಡೆಯುತ್ತಿದೆ. ಆದರೆ ಜೆಸಿಬಿ ಮೂಲಕ ಎತ್ತಿ ಅಲ್ಲೇ ಬದಿಗೆ ಸುರಿಯುವ ನೀರು ಮತ್ತೆ ಅದೇ ಚರಂಡಿ ಸೇರುತ್ತಿದೆ. ಆಧುನಿಕ ತಂತ್ರಜ್ಞಾನ ಬಳಕೆಗೆ ಈ ಬಾರಿ ಮಂಗಳೂರು ಸ್ಮಾರ್ಟ್ ಸಿಟಿಗೆ ಪ್ರಶಸ್ತಿ ಗ್ಯಾರಂಟಿ ಎಂದು ಸಾರ್ವಜನಿಕರು ಆಡಿಕೊಳ್ಳುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು