4:32 AM Tuesday21 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

ಮಣ್ಣು ತೆಗೆಯುವ ಜೆಸಿಬಿಯಿಂದ ಚರಂಡಿ ತುಂಬಿದ ನೀರು ಎತ್ತುವುದು!!: ಮಂಗಳೂರು ಸ್ಮಾರ್ಟ್ ಸಿಟಿಗೆ ಈ ಬಾರಿ ಪ್ರಶಸ್ತಿ ಗ್ಯಾರಂಟಿ! 

13/07/2021, 22:07

ಮಂಗಳೂರು(reporterkarnatakanews): ಮಂಗಳೂರು ಸ್ಮಾರ್ಟ್ ಸಿಟಿ ತಂತ್ರಜ್ಞಾನದಲ್ಲಿ ಎಷ್ಟೊಂದು ಮುಂದುವರಿದಿದೆ ಎನ್ನುವುದಕ್ಕೆ ಇದೊಂದು ತಾಜಾ ನಿದರ್ಶನ. ಮಣ್ಣು ಅಗೆಯುವುದು ಜೆಸಿಬಿಯಿಂದ ಇಲ್ಲಿನ ಎಂಜಿನಿಯರ್ ಹಾಗೂ ಗುತ್ತಿಗೆದಾರರು ಹೊಂಡ, ಚರಂಡಿಯಲ್ಲಿ ನಿಂತ ಮಳೆ ನೀರನ್ನು ತೆಗೆಯುತ್ತಾರೆ!


ನಗರದ ಸ್ಟೇಟ್ ಬ್ಯಾಂಕ್ ಬಳಿಯ ರಸ್ತೆಗೆ ಒಳಚರಂಡಿ ನಿರ್ಮಿಸುವ ಕಾರ್ಯ ತಿಂಗಳುಗಟ್ಟಲೆಯಿಂದ ನನೆಗುದಿಗೆ ಬಿದ್ದಿತ್ತು. ಇದೀಗ ಕಳೆದ ಮೂರು ದಿನಗಳಿಂದ ನಗರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಸ್ಮಾರ್ಟ್ ಸಿಟಿಯಡಿ ಅಗೆದು ಹಾಕಿದ ಹೊಂಡಗಳಲ್ಲಿ ಕೆಸರು ನೀರು ತುಂಬಿದೆ. ಕಳೆದ ಕೆಲವು ದಿನಗಳಿಂದ ಚರಂಡಿ ತುಂಬಿದ ನೀರನ್ನು ಜೆಸಿಬಿ ಮೂಲಕ ಖಾಲಿ ಮಾಡುವ ಕೆಲಸ ನಡೆಯುತ್ತಿದೆ. ಆದರೆ ಜೆಸಿಬಿ ಮೂಲಕ ಎತ್ತಿ ಅಲ್ಲೇ ಬದಿಗೆ ಸುರಿಯುವ ನೀರು ಮತ್ತೆ ಅದೇ ಚರಂಡಿ ಸೇರುತ್ತಿದೆ. ಆಧುನಿಕ ತಂತ್ರಜ್ಞಾನ ಬಳಕೆಗೆ ಈ ಬಾರಿ ಮಂಗಳೂರು ಸ್ಮಾರ್ಟ್ ಸಿಟಿಗೆ ಪ್ರಶಸ್ತಿ ಗ್ಯಾರಂಟಿ ಎಂದು ಸಾರ್ವಜನಿಕರು ಆಡಿಕೊಳ್ಳುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು