10:08 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ…

ಇತ್ತೀಚಿನ ಸುದ್ದಿ

ಮಣ್ಣು ತೆಗೆಯುವ ಜೆಸಿಬಿಯಿಂದ ಚರಂಡಿ ತುಂಬಿದ ನೀರು ಎತ್ತುವುದು!!: ಮಂಗಳೂರು ಸ್ಮಾರ್ಟ್ ಸಿಟಿಗೆ ಈ ಬಾರಿ ಪ್ರಶಸ್ತಿ ಗ್ಯಾರಂಟಿ! 

13/07/2021, 22:07

ಮಂಗಳೂರು(reporterkarnatakanews): ಮಂಗಳೂರು ಸ್ಮಾರ್ಟ್ ಸಿಟಿ ತಂತ್ರಜ್ಞಾನದಲ್ಲಿ ಎಷ್ಟೊಂದು ಮುಂದುವರಿದಿದೆ ಎನ್ನುವುದಕ್ಕೆ ಇದೊಂದು ತಾಜಾ ನಿದರ್ಶನ. ಮಣ್ಣು ಅಗೆಯುವುದು ಜೆಸಿಬಿಯಿಂದ ಇಲ್ಲಿನ ಎಂಜಿನಿಯರ್ ಹಾಗೂ ಗುತ್ತಿಗೆದಾರರು ಹೊಂಡ, ಚರಂಡಿಯಲ್ಲಿ ನಿಂತ ಮಳೆ ನೀರನ್ನು ತೆಗೆಯುತ್ತಾರೆ!


ನಗರದ ಸ್ಟೇಟ್ ಬ್ಯಾಂಕ್ ಬಳಿಯ ರಸ್ತೆಗೆ ಒಳಚರಂಡಿ ನಿರ್ಮಿಸುವ ಕಾರ್ಯ ತಿಂಗಳುಗಟ್ಟಲೆಯಿಂದ ನನೆಗುದಿಗೆ ಬಿದ್ದಿತ್ತು. ಇದೀಗ ಕಳೆದ ಮೂರು ದಿನಗಳಿಂದ ನಗರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಸ್ಮಾರ್ಟ್ ಸಿಟಿಯಡಿ ಅಗೆದು ಹಾಕಿದ ಹೊಂಡಗಳಲ್ಲಿ ಕೆಸರು ನೀರು ತುಂಬಿದೆ. ಕಳೆದ ಕೆಲವು ದಿನಗಳಿಂದ ಚರಂಡಿ ತುಂಬಿದ ನೀರನ್ನು ಜೆಸಿಬಿ ಮೂಲಕ ಖಾಲಿ ಮಾಡುವ ಕೆಲಸ ನಡೆಯುತ್ತಿದೆ. ಆದರೆ ಜೆಸಿಬಿ ಮೂಲಕ ಎತ್ತಿ ಅಲ್ಲೇ ಬದಿಗೆ ಸುರಿಯುವ ನೀರು ಮತ್ತೆ ಅದೇ ಚರಂಡಿ ಸೇರುತ್ತಿದೆ. ಆಧುನಿಕ ತಂತ್ರಜ್ಞಾನ ಬಳಕೆಗೆ ಈ ಬಾರಿ ಮಂಗಳೂರು ಸ್ಮಾರ್ಟ್ ಸಿಟಿಗೆ ಪ್ರಶಸ್ತಿ ಗ್ಯಾರಂಟಿ ಎಂದು ಸಾರ್ವಜನಿಕರು ಆಡಿಕೊಳ್ಳುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು