11:08 PM Friday18 - April 2025
ಬ್ರೇಕಿಂಗ್ ನ್ಯೂಸ್
Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ…

ಇತ್ತೀಚಿನ ಸುದ್ದಿ

ಮಾನ್ವಿಗಾಗಿ ಸ್ಟೆಮ್ ಸೆಲ್ ಅಭಿಯಾನ: ಸ್ವಯಂ ಪ್ರೇರಿತರಾಗಿ ಸಲೈವ ನೀಡಿದ ಕರಾವಳಿಗರು!! 

18/04/2022, 21:28

ಮಂಗಳೂರು(reporterkarnataka.com) ಕಾರ್ಕಳದ ಆರು ವರ್ಷದ ಮಗು ಮಾನ್ವಿ ಕಾಮತ್ ಅಪರೂಪದ ಅನುವಶೀಯ ಅಸ್ವಸ್ಥತೆಯಿಂದ ಬಳಲುತ್ತಿದ್ದು, ಅವಳನ್ನು ಬದುಕಿಸಲು ಆರೋಗ್ಯವಂತ ವ್ಯಕ್ತಿಯ ದೇಹದೊಳಗಿನ ಕಾಂಡ ಕೋಶ {ಸ್ಟೆಮ್ ಸೆಲ್}ಅಗತ್ಯವಿದ್ದು, ಅದಕ್ಕಾಗಿ ಮಂಗಳೂರಿನ ಎರಡು ಕಡೆ ಭಾನುವಾರ ಸ್ಟೆಮ್ ಸೆಲ್ ಅಭಿಯಾನ ಕೈಗೊಳ್ಳಲಾಯಿತು. ಬೆಳಿಗ್ಗೆ ಮಂಗಳೂರಿನ ಭಾರತ್ ಮಾಲ್ ಮತ್ತು ಸಂಜೆ ಕದ್ರಿ ಪಾರ್ಕಿನಲ್ಲಿ ಯೂತ್ ಆಫ್ ಜಿಎಸ್ ಬಿ ಕಾರ್ಯಕರ್ತರು ಡಿಕೆಎಂಎಸ್ ಬಿಎಂಎಸ್ ಟಿ ಸಹಯೋಗದಲ್ಲಿ ಅಭಿಯಾನ ನಡೆಸಿದರು. ನಮ್ಮ ಬಾಯೊಳಗಿನ ಸಲೈವಾ ತೆಗೆದುಕೊಂಡು ಅದನ್ನು ಜರ್ಮನಿಗೆ ಕಳುಹಿಸಿ ಅಲ್ಲಿ ಪರೀಕ್ಷೆಗೆ ಒಳಪಡಿಸಿ ಅದು ಮಗುವಿನ ದೇಹಕ್ಕೆ ಹೊಂದಾಣಿಕೆಯಾದರೆ ಮುಂದಿನ ವೈದ್ಯಕೀಯ ಪ್ರಕ್ರಿಯೆಗಳನ್ನು ಮಾಡಿ ಮಾನ್ವಿಯನ್ನು ಉಳಿಸಬಹುದು ಎಂದು ಕಾರ್ಯಕರ್ತರು ಜನರಿಗೆ ಮನವರಿಕೆ ಮಾಡಿದರು.


ಹಲವಾರು ಜನ ಸ್ವಯಂಪ್ರೇರಿತರಾಗಿ ಮುಂದೆ ಬಂದು ಸಲೈವ ನೀಡಿ ಮಾದರಿ ಕಾರ್ಯದಲ್ಲಿ ಸಹಕರಿಸಿದರು. ಅಭಿಯಾನದಲ್ಲಿ ಸೇವಾಂಜಲಿ ಚಾರಿಟೇಬಲ್ ಟ್ರಸ್ಟಿನ ಮಂಗಲ್ಪಾಡಿ ನರೇಶ್ ಶೆಣೈ, ಹನುಮಂತ ಕಾಮತ್, ಡಿಕೆಎಂಎಸ್ ಸರಕಾರೇತರ ಸಂಸ್ಥೆಯ ಅಖಿಲಾ, ಮಹಾಮಿತ್ರ, ಯೂತ್ ಆಪ್ ಜಿಎಸ್ ಬಿಯ ಕಿರಣ್ ಶೆಣೈ, ನಾಗೇಂದ್ರ ಶೆಣೈ, ಸಂತೋಷ್ ಶೆಣೈ ಸಹಿತ ಹಲವಾರು ಸ್ವಯಂಸೇವಕರು ಭಾಗವಹಿಸಿದರು. ಮಂಗಳೂರಿನ ಟ್ರಾಫಿಕ್ ಎಸಿಪಿ ನಾಗರಾಜ್, ಮಂಗಳೂರಿನ ವಕೀಲರ ಪರಿಷತ್ತಿನ ರಾಘವೇಂದ್ರ ಸಹಿತ ಹಲವಾರು ಗಣ್ಯರು ಆಗಮಿಸಿ ಅಭಿಯಾನದಲ್ಲಿ ಭಾಗವಹಿಸಿದರು. ಈ ಅಭಿಯಾನ ಮುಂದಿನ ತಿಂಗಳು ಮಂಗಳೂರಿನ ಹಲವಾರು ಕಡೆ ನಡೆಯಲಿದ್ದು, ನಾಗರಿಕರು ಮಗುವಿನ ಜೀವ ಉಳಿಸಲು ಸಹಕರಿಸಬೇಕು ಎಂದು ಆಯೋಜಕರು ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು