5:04 AM Saturday23 - August 2025
ಬ್ರೇಕಿಂಗ್ ನ್ಯೂಸ್
Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಟ್ಟು ಗುಳ್ಳ ನಂಟು ಉಡುಪಿ ಮಠಕ್ಕೂ ಉಂಟು: ವಾದಿರಾಜ ತೀರ್ಥರು ಬದನೆಗೆ ಹೆಸರಿಟ್ಟರಂತೆ!

ಇತ್ತೀಚಿನ ಸುದ್ದಿ

ಮಾನ್ವಿಗಾಗಿ ಸ್ಟೆಮ್ ಸೆಲ್ ಅಭಿಯಾನ: ಸ್ವಯಂ ಪ್ರೇರಿತರಾಗಿ ಸಲೈವ ನೀಡಿದ ಕರಾವಳಿಗರು!! 

18/04/2022, 21:28

ಮಂಗಳೂರು(reporterkarnataka.com) ಕಾರ್ಕಳದ ಆರು ವರ್ಷದ ಮಗು ಮಾನ್ವಿ ಕಾಮತ್ ಅಪರೂಪದ ಅನುವಶೀಯ ಅಸ್ವಸ್ಥತೆಯಿಂದ ಬಳಲುತ್ತಿದ್ದು, ಅವಳನ್ನು ಬದುಕಿಸಲು ಆರೋಗ್ಯವಂತ ವ್ಯಕ್ತಿಯ ದೇಹದೊಳಗಿನ ಕಾಂಡ ಕೋಶ {ಸ್ಟೆಮ್ ಸೆಲ್}ಅಗತ್ಯವಿದ್ದು, ಅದಕ್ಕಾಗಿ ಮಂಗಳೂರಿನ ಎರಡು ಕಡೆ ಭಾನುವಾರ ಸ್ಟೆಮ್ ಸೆಲ್ ಅಭಿಯಾನ ಕೈಗೊಳ್ಳಲಾಯಿತು. ಬೆಳಿಗ್ಗೆ ಮಂಗಳೂರಿನ ಭಾರತ್ ಮಾಲ್ ಮತ್ತು ಸಂಜೆ ಕದ್ರಿ ಪಾರ್ಕಿನಲ್ಲಿ ಯೂತ್ ಆಫ್ ಜಿಎಸ್ ಬಿ ಕಾರ್ಯಕರ್ತರು ಡಿಕೆಎಂಎಸ್ ಬಿಎಂಎಸ್ ಟಿ ಸಹಯೋಗದಲ್ಲಿ ಅಭಿಯಾನ ನಡೆಸಿದರು. ನಮ್ಮ ಬಾಯೊಳಗಿನ ಸಲೈವಾ ತೆಗೆದುಕೊಂಡು ಅದನ್ನು ಜರ್ಮನಿಗೆ ಕಳುಹಿಸಿ ಅಲ್ಲಿ ಪರೀಕ್ಷೆಗೆ ಒಳಪಡಿಸಿ ಅದು ಮಗುವಿನ ದೇಹಕ್ಕೆ ಹೊಂದಾಣಿಕೆಯಾದರೆ ಮುಂದಿನ ವೈದ್ಯಕೀಯ ಪ್ರಕ್ರಿಯೆಗಳನ್ನು ಮಾಡಿ ಮಾನ್ವಿಯನ್ನು ಉಳಿಸಬಹುದು ಎಂದು ಕಾರ್ಯಕರ್ತರು ಜನರಿಗೆ ಮನವರಿಕೆ ಮಾಡಿದರು.


ಹಲವಾರು ಜನ ಸ್ವಯಂಪ್ರೇರಿತರಾಗಿ ಮುಂದೆ ಬಂದು ಸಲೈವ ನೀಡಿ ಮಾದರಿ ಕಾರ್ಯದಲ್ಲಿ ಸಹಕರಿಸಿದರು. ಅಭಿಯಾನದಲ್ಲಿ ಸೇವಾಂಜಲಿ ಚಾರಿಟೇಬಲ್ ಟ್ರಸ್ಟಿನ ಮಂಗಲ್ಪಾಡಿ ನರೇಶ್ ಶೆಣೈ, ಹನುಮಂತ ಕಾಮತ್, ಡಿಕೆಎಂಎಸ್ ಸರಕಾರೇತರ ಸಂಸ್ಥೆಯ ಅಖಿಲಾ, ಮಹಾಮಿತ್ರ, ಯೂತ್ ಆಪ್ ಜಿಎಸ್ ಬಿಯ ಕಿರಣ್ ಶೆಣೈ, ನಾಗೇಂದ್ರ ಶೆಣೈ, ಸಂತೋಷ್ ಶೆಣೈ ಸಹಿತ ಹಲವಾರು ಸ್ವಯಂಸೇವಕರು ಭಾಗವಹಿಸಿದರು. ಮಂಗಳೂರಿನ ಟ್ರಾಫಿಕ್ ಎಸಿಪಿ ನಾಗರಾಜ್, ಮಂಗಳೂರಿನ ವಕೀಲರ ಪರಿಷತ್ತಿನ ರಾಘವೇಂದ್ರ ಸಹಿತ ಹಲವಾರು ಗಣ್ಯರು ಆಗಮಿಸಿ ಅಭಿಯಾನದಲ್ಲಿ ಭಾಗವಹಿಸಿದರು. ಈ ಅಭಿಯಾನ ಮುಂದಿನ ತಿಂಗಳು ಮಂಗಳೂರಿನ ಹಲವಾರು ಕಡೆ ನಡೆಯಲಿದ್ದು, ನಾಗರಿಕರು ಮಗುವಿನ ಜೀವ ಉಳಿಸಲು ಸಹಕರಿಸಬೇಕು ಎಂದು ಆಯೋಜಕರು ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು