10:46 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಮಾನ್ವಿಗಾಗಿ ಸ್ಟೆಮ್ ಸೆಲ್ ಅಭಿಯಾನ: ಸ್ವಯಂ ಪ್ರೇರಿತರಾಗಿ ಸಲೈವ ನೀಡಿದ ಕರಾವಳಿಗರು!! 

18/04/2022, 21:28

ಮಂಗಳೂರು(reporterkarnataka.com) ಕಾರ್ಕಳದ ಆರು ವರ್ಷದ ಮಗು ಮಾನ್ವಿ ಕಾಮತ್ ಅಪರೂಪದ ಅನುವಶೀಯ ಅಸ್ವಸ್ಥತೆಯಿಂದ ಬಳಲುತ್ತಿದ್ದು, ಅವಳನ್ನು ಬದುಕಿಸಲು ಆರೋಗ್ಯವಂತ ವ್ಯಕ್ತಿಯ ದೇಹದೊಳಗಿನ ಕಾಂಡ ಕೋಶ {ಸ್ಟೆಮ್ ಸೆಲ್}ಅಗತ್ಯವಿದ್ದು, ಅದಕ್ಕಾಗಿ ಮಂಗಳೂರಿನ ಎರಡು ಕಡೆ ಭಾನುವಾರ ಸ್ಟೆಮ್ ಸೆಲ್ ಅಭಿಯಾನ ಕೈಗೊಳ್ಳಲಾಯಿತು. ಬೆಳಿಗ್ಗೆ ಮಂಗಳೂರಿನ ಭಾರತ್ ಮಾಲ್ ಮತ್ತು ಸಂಜೆ ಕದ್ರಿ ಪಾರ್ಕಿನಲ್ಲಿ ಯೂತ್ ಆಫ್ ಜಿಎಸ್ ಬಿ ಕಾರ್ಯಕರ್ತರು ಡಿಕೆಎಂಎಸ್ ಬಿಎಂಎಸ್ ಟಿ ಸಹಯೋಗದಲ್ಲಿ ಅಭಿಯಾನ ನಡೆಸಿದರು. ನಮ್ಮ ಬಾಯೊಳಗಿನ ಸಲೈವಾ ತೆಗೆದುಕೊಂಡು ಅದನ್ನು ಜರ್ಮನಿಗೆ ಕಳುಹಿಸಿ ಅಲ್ಲಿ ಪರೀಕ್ಷೆಗೆ ಒಳಪಡಿಸಿ ಅದು ಮಗುವಿನ ದೇಹಕ್ಕೆ ಹೊಂದಾಣಿಕೆಯಾದರೆ ಮುಂದಿನ ವೈದ್ಯಕೀಯ ಪ್ರಕ್ರಿಯೆಗಳನ್ನು ಮಾಡಿ ಮಾನ್ವಿಯನ್ನು ಉಳಿಸಬಹುದು ಎಂದು ಕಾರ್ಯಕರ್ತರು ಜನರಿಗೆ ಮನವರಿಕೆ ಮಾಡಿದರು.


ಹಲವಾರು ಜನ ಸ್ವಯಂಪ್ರೇರಿತರಾಗಿ ಮುಂದೆ ಬಂದು ಸಲೈವ ನೀಡಿ ಮಾದರಿ ಕಾರ್ಯದಲ್ಲಿ ಸಹಕರಿಸಿದರು. ಅಭಿಯಾನದಲ್ಲಿ ಸೇವಾಂಜಲಿ ಚಾರಿಟೇಬಲ್ ಟ್ರಸ್ಟಿನ ಮಂಗಲ್ಪಾಡಿ ನರೇಶ್ ಶೆಣೈ, ಹನುಮಂತ ಕಾಮತ್, ಡಿಕೆಎಂಎಸ್ ಸರಕಾರೇತರ ಸಂಸ್ಥೆಯ ಅಖಿಲಾ, ಮಹಾಮಿತ್ರ, ಯೂತ್ ಆಪ್ ಜಿಎಸ್ ಬಿಯ ಕಿರಣ್ ಶೆಣೈ, ನಾಗೇಂದ್ರ ಶೆಣೈ, ಸಂತೋಷ್ ಶೆಣೈ ಸಹಿತ ಹಲವಾರು ಸ್ವಯಂಸೇವಕರು ಭಾಗವಹಿಸಿದರು. ಮಂಗಳೂರಿನ ಟ್ರಾಫಿಕ್ ಎಸಿಪಿ ನಾಗರಾಜ್, ಮಂಗಳೂರಿನ ವಕೀಲರ ಪರಿಷತ್ತಿನ ರಾಘವೇಂದ್ರ ಸಹಿತ ಹಲವಾರು ಗಣ್ಯರು ಆಗಮಿಸಿ ಅಭಿಯಾನದಲ್ಲಿ ಭಾಗವಹಿಸಿದರು. ಈ ಅಭಿಯಾನ ಮುಂದಿನ ತಿಂಗಳು ಮಂಗಳೂರಿನ ಹಲವಾರು ಕಡೆ ನಡೆಯಲಿದ್ದು, ನಾಗರಿಕರು ಮಗುವಿನ ಜೀವ ಉಳಿಸಲು ಸಹಕರಿಸಬೇಕು ಎಂದು ಆಯೋಜಕರು ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು