3:46 AM Friday9 - May 2025
ಬ್ರೇಕಿಂಗ್ ನ್ಯೂಸ್
Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಮರ ಬಿದ್ದು ಯುವಕ ಸಾವು: ಶವಾಗಾರದಿಂದಲೇ ಅರಣ್ಯ ಇಲಾಖೆ ಬೇಜವಾಬ್ದಾರಿ ಕುರಿತು ಅಧಿಕಾರಿಗಳಿಗೆ ಮಾಜಿ ಸಚಿವ ಆರಗ ಜ್ಞಾನೇಂದ್ರ ತರಾಟೆ

27/07/2024, 21:19

ರಶ್ಮಿ ಶ್ರೀಕಾಂತ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಬೈಕ್ ನಲ್ಲಿ ತೆರಳುತ್ತಿದ್ದ ಯುವಕನ ಮೇಲೆ ಆಕೇಶಿಯಾ ಮರ ಬಿದ್ದು ಸಾವನ್ನಪ್ಪಿದ ಪ್ರಕರಣ ಕುರಿತು ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಅರಣ್ಯ ಇಲಾಖೆ ಅಧಿಕಾರಿಗಳ ಬೇಜವಾಬ್ದಾರಿ ಕುರಿತು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.


ತೀರ್ಥಹಳ್ಳಿಯ ಹಾದಿಗಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಂಚದಕಟ್ಟೆ ಸಮೀಪ ಮೀನ್ಮನೆಕೊಪ್ಪ ಸಚಿನ್ (26) ಎಂಬ ಯುವಕನ ಬೈಕ್ ನಲ್ಲಿ ತೆರಳುವಾಗ ರಸ್ತೆ ಬದಿ ಭಾಗಿ ನಿಂತ ಆಕೇಶಿಯ ಮರ ತಲೆಯಮೇಲೆ ಬಿದ್ದು ಸಾವನ್ನಪ್ಪಿದ್ದರು. ಈ ರಸ್ತೆ ಅಕ್ಕ ಪಕ್ಕದಲ್ಲಿ ಬೆಳೆದು ನಿಂತಿರುವ ಅಕೇಶಿಯಾ ಮರಗಳ ಬಗ್ಗೆ ಹತ್ತಾರು ಭಾರಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ವಿವಿಧ ಸಭೆಗಳಲ್ಲಿ ಹೇಳಿದ್ದರೂ ಕೂಡಾ ರಸ್ತೆ ಬದಿ ವಾಲಿ ನಿಂತ ಆಕೇಶಿಯಾ ಮರಗಳನ್ನು ತೆರವು ಗೊಳಿಸದೇ ಜೀವ ಹಾನಿಗೆ ಕಾರಣವಾದ ಅರಣ್ಯ ಇಲಾಖೆ ಅಧಿಕಾರಿಗಳ ಕ್ರಮವನ್ನು ಖಂಡಿಸಿ ಶಾಸಕರು ಪಟ್ಟಣದ ಜೆಸಿ ಆಸ್ಪತ್ರೆ ಶವಗಾರದಲ್ಲಿ ಮರಣ ಹೊಂದಿದ ಯುವಕನ ಅಂತಿಮ ದರ್ಶನ ಪಡೆದು ಸ್ಥಳದಿಂದಲೇ ಸಂಬಂಧ ಪಟ್ಟ ಅಧಿಕಾರಿಗಳಿಗೆ ದೂರವಾಣಿ ಮೂಲಕ ಮಾತನಾಡಿ ತರಾಟೆಗೆ ತೆಗೆದುಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು