11:41 PM Tuesday19 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ

ಇತ್ತೀಚಿನ ಸುದ್ದಿ

ಮರ ಬಿದ್ದು ಯುವಕ ಸಾವು: ಶವಾಗಾರದಿಂದಲೇ ಅರಣ್ಯ ಇಲಾಖೆ ಬೇಜವಾಬ್ದಾರಿ ಕುರಿತು ಅಧಿಕಾರಿಗಳಿಗೆ ಮಾಜಿ ಸಚಿವ ಆರಗ ಜ್ಞಾನೇಂದ್ರ ತರಾಟೆ

27/07/2024, 21:19

ರಶ್ಮಿ ಶ್ರೀಕಾಂತ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಬೈಕ್ ನಲ್ಲಿ ತೆರಳುತ್ತಿದ್ದ ಯುವಕನ ಮೇಲೆ ಆಕೇಶಿಯಾ ಮರ ಬಿದ್ದು ಸಾವನ್ನಪ್ಪಿದ ಪ್ರಕರಣ ಕುರಿತು ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಅರಣ್ಯ ಇಲಾಖೆ ಅಧಿಕಾರಿಗಳ ಬೇಜವಾಬ್ದಾರಿ ಕುರಿತು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.


ತೀರ್ಥಹಳ್ಳಿಯ ಹಾದಿಗಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಂಚದಕಟ್ಟೆ ಸಮೀಪ ಮೀನ್ಮನೆಕೊಪ್ಪ ಸಚಿನ್ (26) ಎಂಬ ಯುವಕನ ಬೈಕ್ ನಲ್ಲಿ ತೆರಳುವಾಗ ರಸ್ತೆ ಬದಿ ಭಾಗಿ ನಿಂತ ಆಕೇಶಿಯ ಮರ ತಲೆಯಮೇಲೆ ಬಿದ್ದು ಸಾವನ್ನಪ್ಪಿದ್ದರು. ಈ ರಸ್ತೆ ಅಕ್ಕ ಪಕ್ಕದಲ್ಲಿ ಬೆಳೆದು ನಿಂತಿರುವ ಅಕೇಶಿಯಾ ಮರಗಳ ಬಗ್ಗೆ ಹತ್ತಾರು ಭಾರಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ವಿವಿಧ ಸಭೆಗಳಲ್ಲಿ ಹೇಳಿದ್ದರೂ ಕೂಡಾ ರಸ್ತೆ ಬದಿ ವಾಲಿ ನಿಂತ ಆಕೇಶಿಯಾ ಮರಗಳನ್ನು ತೆರವು ಗೊಳಿಸದೇ ಜೀವ ಹಾನಿಗೆ ಕಾರಣವಾದ ಅರಣ್ಯ ಇಲಾಖೆ ಅಧಿಕಾರಿಗಳ ಕ್ರಮವನ್ನು ಖಂಡಿಸಿ ಶಾಸಕರು ಪಟ್ಟಣದ ಜೆಸಿ ಆಸ್ಪತ್ರೆ ಶವಗಾರದಲ್ಲಿ ಮರಣ ಹೊಂದಿದ ಯುವಕನ ಅಂತಿಮ ದರ್ಶನ ಪಡೆದು ಸ್ಥಳದಿಂದಲೇ ಸಂಬಂಧ ಪಟ್ಟ ಅಧಿಕಾರಿಗಳಿಗೆ ದೂರವಾಣಿ ಮೂಲಕ ಮಾತನಾಡಿ ತರಾಟೆಗೆ ತೆಗೆದುಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು