7:28 AM Wednesday16 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಮರ ಬಿದ್ದು ಯುವಕ ಸಾವು: ಶವಾಗಾರದಿಂದಲೇ ಅರಣ್ಯ ಇಲಾಖೆ ಬೇಜವಾಬ್ದಾರಿ ಕುರಿತು ಅಧಿಕಾರಿಗಳಿಗೆ ಮಾಜಿ ಸಚಿವ ಆರಗ ಜ್ಞಾನೇಂದ್ರ ತರಾಟೆ

27/07/2024, 21:19

ರಶ್ಮಿ ಶ್ರೀಕಾಂತ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಬೈಕ್ ನಲ್ಲಿ ತೆರಳುತ್ತಿದ್ದ ಯುವಕನ ಮೇಲೆ ಆಕೇಶಿಯಾ ಮರ ಬಿದ್ದು ಸಾವನ್ನಪ್ಪಿದ ಪ್ರಕರಣ ಕುರಿತು ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಅರಣ್ಯ ಇಲಾಖೆ ಅಧಿಕಾರಿಗಳ ಬೇಜವಾಬ್ದಾರಿ ಕುರಿತು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.


ತೀರ್ಥಹಳ್ಳಿಯ ಹಾದಿಗಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಂಚದಕಟ್ಟೆ ಸಮೀಪ ಮೀನ್ಮನೆಕೊಪ್ಪ ಸಚಿನ್ (26) ಎಂಬ ಯುವಕನ ಬೈಕ್ ನಲ್ಲಿ ತೆರಳುವಾಗ ರಸ್ತೆ ಬದಿ ಭಾಗಿ ನಿಂತ ಆಕೇಶಿಯ ಮರ ತಲೆಯಮೇಲೆ ಬಿದ್ದು ಸಾವನ್ನಪ್ಪಿದ್ದರು. ಈ ರಸ್ತೆ ಅಕ್ಕ ಪಕ್ಕದಲ್ಲಿ ಬೆಳೆದು ನಿಂತಿರುವ ಅಕೇಶಿಯಾ ಮರಗಳ ಬಗ್ಗೆ ಹತ್ತಾರು ಭಾರಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ವಿವಿಧ ಸಭೆಗಳಲ್ಲಿ ಹೇಳಿದ್ದರೂ ಕೂಡಾ ರಸ್ತೆ ಬದಿ ವಾಲಿ ನಿಂತ ಆಕೇಶಿಯಾ ಮರಗಳನ್ನು ತೆರವು ಗೊಳಿಸದೇ ಜೀವ ಹಾನಿಗೆ ಕಾರಣವಾದ ಅರಣ್ಯ ಇಲಾಖೆ ಅಧಿಕಾರಿಗಳ ಕ್ರಮವನ್ನು ಖಂಡಿಸಿ ಶಾಸಕರು ಪಟ್ಟಣದ ಜೆಸಿ ಆಸ್ಪತ್ರೆ ಶವಗಾರದಲ್ಲಿ ಮರಣ ಹೊಂದಿದ ಯುವಕನ ಅಂತಿಮ ದರ್ಶನ ಪಡೆದು ಸ್ಥಳದಿಂದಲೇ ಸಂಬಂಧ ಪಟ್ಟ ಅಧಿಕಾರಿಗಳಿಗೆ ದೂರವಾಣಿ ಮೂಲಕ ಮಾತನಾಡಿ ತರಾಟೆಗೆ ತೆಗೆದುಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು