7:20 PM Wednesday5 - November 2025
ಬ್ರೇಕಿಂಗ್ ನ್ಯೂಸ್
ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:…

ಇತ್ತೀಚಿನ ಸುದ್ದಿ

ಮರಳಿ: ರೈತರ ಹಣದಿಂದ ರಸ್ತೆ ದುರಸ್ತಿ ಕಾರ್ಯ; ತಿರುಗಿ ನೋಡದ ಅಧಿಕಾರಿಗಳು, ಕೆಲಸಕ್ಕೆ ಬಾರದ ಜನಪ್ರತಿನಿಧಿಗಳು

21/07/2021, 07:55

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣ ಸಮೀಪದ ಹೂನೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಮರಳಿ ಗ್ರಾಮದ ರೈತರ ಹೊಲಗಳಿಗೆ ಹೋಗುವ ರಸ್ತೆ ಸಂಪೂರ್ಣ ಹದಗೆಟ್ಟು ಕೆಸರು ಗದ್ದೆಯಂತಾಗಿ ರೈತರು ಹೊಲಗಳಿಗೆ ಹೋಗಲು ಹರಸಹಾಸ ಪಡುವಂತಾಗಿದೆ.


ಗ್ರಾಮದ ರೈತರು ಜನಪ್ರತಿನಿಧಿಗಳಿಗೆ ಮತ್ತು ಹೂನೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಈ ರಸ್ತೆ ದುರಸ್ತಿ ಮಾಡುವಂತೆ ಅನೇಕ ಬಾರಿ ಮನವಿ ಮಾಡಿದರೂ ಏನೂ ಪ್ರಯೋಜವಾಗಿಲ್ಲ. ಈ ಹಿನ್ನೆಲೆಯಲ್ಲಿ ಮರಳಿ ಗ್ರಾಮದ ರೈತರು ಪ್ರತಿ ಮನೆ ಮನೆಗೆ  ಹೋಗಿ ಹಣ ಸೇರಿಸಿಕೊಂಡು  ರಸ್ತೆ ದುರಸ್ತಿ ಮಾಡಿಕೊಂಡಿದ್ದಾರೆ. 

ಇದೆ ಸಂದರ್ಭದಲ್ಲಿ ಮರಳಿ ಗ್ರಾಮದ ರೈತರಾದ ಕರಿಯಪ್ಪಗೌಡ, ಹನುಮಂತ, ಶರಣ ಬಸವ, ಬಸವರಾಜ, ಮುತ್ತಣ್ಣ, ಬಸವರಾಜ, ಬಸನಗೌಡ ಮಾಲಿ ಪಾಟೀಲ್, ಸಿದ್ದಪ್ಪ ಅಮರೇಶ, ದೊಡ್ಡಬಸಪ್ಪ ಹಾಗೂ ಗ್ರಾಮಸ್ಥರು  ಸೇರಿದಂತೆ ಇನ್ನಿತರ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು