12:53 PM Tuesday11 - August 2026
ಬ್ರೇಕಿಂಗ್ ನ್ಯೂಸ್
ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ…

ಇತ್ತೀಚಿನ ಸುದ್ದಿ

ಮರಳು ಸಮಸ್ಯೆ ನಿಮ್ಮ ಡಬಲ್ ಎಂಜಿನ್ ಸರಕಾರದ್ದು: ಶಾಸಕ ವೇದವ್ಯಾಸ ಕಾಮತ್ ಗೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿರುಗೇಟು

06/11/2023, 15:48

ಮಂಗಳೂರು(reporterkarnataka.com):ಮರಳಿನ ಸಮಸ್ಯೆ ಕುರಿತು ಶಾಸಕ ಡಿ. ವೇದವ್ಯಾಸ ಕಾಮತ್ ಅವರ ಹೇಳಿಕೆಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಖಾರವಾಗಿ ತಿರುಗೇಟು ನೀಡಿದ್ದಾರೆ.
ಈ ಕುರಿತು ಎಕ್ಸ್(ಟ್ವಿಟರ್)ನಲ್ಲಿ ಟ್ವೀಟ್ ಮಾಡಿದ ಸಚಿವರು, ಮಾನ್ಯ ಶಾಸಕರಾದ ವೇದವ್ಯಾಸ್ ಕಾಮತ್ ಅವರೇ, ದಕ್ಷಿಣ ಕನ್ನಡ ಜಿಲ್ಲೆಯ ಮರಳಿನ ಸಮಸ್ಯೆ ಕಾಂಗ್ರೆಸ್ ಸರ್ಕಾರ ಸೃಷ್ಟಿ ಮಾಡಿರುವುದಲ್ಲ.
ಕಳೆದ 4 ವರ್ಷಗಳಿಂದ ನಿಮ್ಮದೇ ʻಡಬಲ್ ಇಂಜಿನ್ʼ ಸರ್ಕಾರವಿತ್ತು. ಶಾಸಕರು, ಸಚಿವರು, ಸಂಸದರು ಬಿಜೆಪಿಯವರೇ ಆಗಿದ್ದರು. ನಿಮ್ಮ ಅವಧಿಯಲ್ಲೇ ನಿಮಗೆ ಮರಳು ಗಣಿಗಾರಿಕೆ ಸಮಸ್ಯೆ ಬಗೆಹರಿಸಲು ಸಾಧ್ಯವಾಗಿಲ್ಲ ಎಂದು ಹೇಳಿದ್ದಾರೆ.
ಜನರ ಮುಂದೆ ನೂರು ಬಾರಿ ಸುಳ್ಳು ಹೇಳಿ, ಅದೇ ಸತ್ಯ ಎಂಬಂತೆ ಬಿಂಬಿಸುವ ಚಾಳಿ ನಿಮ್ಮದು. ಅಧಿಕಾರ ಸಿಕ್ಕಾಗ ದೋಚಿದ್ದು ಬಿಟ್ಟರೆ ದೂರದೃಷ್ಠಿಯ ಒಂದೂ ಕೆಲಸ ಮಾಡಿಲ್ಲ. ಈಗ ದಿಢೀರನೇ ಗಾಢ ನಿದ್ದೆಯಿಂದ ಎಚ್ಚೆತ್ತು, ಕಾಂಗ್ರೆಸ್ ದೂರುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ದಿನೇಶ್ ಗುಂಡೂರಾವ್ ಟ್ವಿಟ್ ಮಾಡಿದ್ದಾರೆ.
ನಿಮ್ಮದೇ ಸರ್ಕಾರದ ಅವಧಿಯಲ್ಲಿ ರಾಜ್ಯದ ತಾಲೂಕು ಆಸ್ಪತ್ರೆಗಳು ನಿರ್ಲಕ್ಷ್ಯಕ್ಕೆ ಒಳಗಾಗಿತ್ತು. ಡಯಾಲಿಸಿಸ್ ಕೇಂದ್ರಗಳ ನಿರ್ವಹಣೆಯಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿತ್ತು. ಆದರೆ ರಾಜ್ಯದಲ್ಲಿ ನಮ್ಮ ಸರ್ಕಾರ ಅಧಿಕರಾಕ್ಕೇರಿದ ಬಳಿಕ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಿಗೆ ಹೊಸ ಡಯಾಲಿಸಿಸ್ ಯಂತ್ರಗಳ ಪೂರೈಕೆ ಮತ್ತು ನಿರ್ವಹಣೆಗಾಗಿ ಹೊಸ ಟೆಂಡರ್ ಕರೆಯಲಾಗಿದೆ.
ನಿಮ್ಮ ರಾಜಕೀಯ ಸೇಡಿನ ಆರೋಪದ ಹೊರತಾಗಿಯೂ ದಕ್ಷಿಣ ಕನ್ನಡ ಜಿಲ್ಲೆಯ ಮರಳಿನ ಸಮಸ್ಯೆಯನ್ನು ಪರಿಹರಿಸಲು ನಮ್ಮ ಕಾಂಗ್ರೆಸ್ ಸರ್ಕಾರ ಪ್ರಾಮಾಣಿಕ ಪ್ರಯತ್ನ ನಡೆಸಲಿದೆ ಎಂದು ಸಚಿವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು