12:12 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಮರಳು ಸಮಸ್ಯೆ ನಿಮ್ಮ ಡಬಲ್ ಎಂಜಿನ್ ಸರಕಾರದ್ದು: ಶಾಸಕ ವೇದವ್ಯಾಸ ಕಾಮತ್ ಗೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿರುಗೇಟು

06/11/2023, 15:48

ಮಂಗಳೂರು(reporterkarnataka.com):ಮರಳಿನ ಸಮಸ್ಯೆ ಕುರಿತು ಶಾಸಕ ಡಿ. ವೇದವ್ಯಾಸ ಕಾಮತ್ ಅವರ ಹೇಳಿಕೆಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಖಾರವಾಗಿ ತಿರುಗೇಟು ನೀಡಿದ್ದಾರೆ.
ಈ ಕುರಿತು ಎಕ್ಸ್(ಟ್ವಿಟರ್)ನಲ್ಲಿ ಟ್ವೀಟ್ ಮಾಡಿದ ಸಚಿವರು, ಮಾನ್ಯ ಶಾಸಕರಾದ ವೇದವ್ಯಾಸ್ ಕಾಮತ್ ಅವರೇ, ದಕ್ಷಿಣ ಕನ್ನಡ ಜಿಲ್ಲೆಯ ಮರಳಿನ ಸಮಸ್ಯೆ ಕಾಂಗ್ರೆಸ್ ಸರ್ಕಾರ ಸೃಷ್ಟಿ ಮಾಡಿರುವುದಲ್ಲ.
ಕಳೆದ 4 ವರ್ಷಗಳಿಂದ ನಿಮ್ಮದೇ ʻಡಬಲ್ ಇಂಜಿನ್ʼ ಸರ್ಕಾರವಿತ್ತು. ಶಾಸಕರು, ಸಚಿವರು, ಸಂಸದರು ಬಿಜೆಪಿಯವರೇ ಆಗಿದ್ದರು. ನಿಮ್ಮ ಅವಧಿಯಲ್ಲೇ ನಿಮಗೆ ಮರಳು ಗಣಿಗಾರಿಕೆ ಸಮಸ್ಯೆ ಬಗೆಹರಿಸಲು ಸಾಧ್ಯವಾಗಿಲ್ಲ ಎಂದು ಹೇಳಿದ್ದಾರೆ.
ಜನರ ಮುಂದೆ ನೂರು ಬಾರಿ ಸುಳ್ಳು ಹೇಳಿ, ಅದೇ ಸತ್ಯ ಎಂಬಂತೆ ಬಿಂಬಿಸುವ ಚಾಳಿ ನಿಮ್ಮದು. ಅಧಿಕಾರ ಸಿಕ್ಕಾಗ ದೋಚಿದ್ದು ಬಿಟ್ಟರೆ ದೂರದೃಷ್ಠಿಯ ಒಂದೂ ಕೆಲಸ ಮಾಡಿಲ್ಲ. ಈಗ ದಿಢೀರನೇ ಗಾಢ ನಿದ್ದೆಯಿಂದ ಎಚ್ಚೆತ್ತು, ಕಾಂಗ್ರೆಸ್ ದೂರುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ದಿನೇಶ್ ಗುಂಡೂರಾವ್ ಟ್ವಿಟ್ ಮಾಡಿದ್ದಾರೆ.
ನಿಮ್ಮದೇ ಸರ್ಕಾರದ ಅವಧಿಯಲ್ಲಿ ರಾಜ್ಯದ ತಾಲೂಕು ಆಸ್ಪತ್ರೆಗಳು ನಿರ್ಲಕ್ಷ್ಯಕ್ಕೆ ಒಳಗಾಗಿತ್ತು. ಡಯಾಲಿಸಿಸ್ ಕೇಂದ್ರಗಳ ನಿರ್ವಹಣೆಯಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿತ್ತು. ಆದರೆ ರಾಜ್ಯದಲ್ಲಿ ನಮ್ಮ ಸರ್ಕಾರ ಅಧಿಕರಾಕ್ಕೇರಿದ ಬಳಿಕ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಿಗೆ ಹೊಸ ಡಯಾಲಿಸಿಸ್ ಯಂತ್ರಗಳ ಪೂರೈಕೆ ಮತ್ತು ನಿರ್ವಹಣೆಗಾಗಿ ಹೊಸ ಟೆಂಡರ್ ಕರೆಯಲಾಗಿದೆ.
ನಿಮ್ಮ ರಾಜಕೀಯ ಸೇಡಿನ ಆರೋಪದ ಹೊರತಾಗಿಯೂ ದಕ್ಷಿಣ ಕನ್ನಡ ಜಿಲ್ಲೆಯ ಮರಳಿನ ಸಮಸ್ಯೆಯನ್ನು ಪರಿಹರಿಸಲು ನಮ್ಮ ಕಾಂಗ್ರೆಸ್ ಸರ್ಕಾರ ಪ್ರಾಮಾಣಿಕ ಪ್ರಯತ್ನ ನಡೆಸಲಿದೆ ಎಂದು ಸಚಿವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು