10:28 PM Tuesday24 - March 2026
ಬ್ರೇಕಿಂಗ್ ನ್ಯೂಸ್
ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ

ಇತ್ತೀಚಿನ ಸುದ್ದಿ

ಮರಾಟಿಗರ ನ್ಯಾಯಯುತ ಬೇಡಿಕೆ ಈಡೇರಿಸಲು ಸರ್ಕಾರ ಬದ್ಧ: ಮೂಡುಬಿದಿರೆಯಲ್ಲಿ ಸಮಾವೇಶ ಉದ್ಘಾಟಿಸಿ ಸಚಿವ ಎಚ್.ಸಿ.ಮಹಾದೇವಪ್ಪ

10/11/2024, 18:24

ಮಂಗಳೂರು(reporterkarnataka.com): ಕರಾವಳಿಯ ಮರಾಟಿ ಸಮುದಾಯದ ನ್ಯಾಯಯುತ ಬೇಡಿಕೆಗಳನ್ನು ಸಂವಿಧಾನ ಮತ್ತು ಕಾನೂನಿನ ಚೌಕಟ್ಟಿನಲ್ಲಿ ಪರಿಶೀಲಿಸಿ, ಮುಖ್ಯಮಂತ್ರಿ ಯವರ ಗಮನಕ್ಕೆ ತಂದು ಈಡೇರಿಸಲು ಪ್ರಯತ್ನಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹಾದೇವಪ್ಪ ಹೇಳಿದರು.
ಮೂಡುಬಿದಿರೆ ವಿದ್ಯಾಗಿರಿ ಆಳ್ವಾಸ್ ಕಾಲೇಜು ಸಭಾಂಗಣದಲ್ಲಿ ಭಾನುವಾರ ನಡೆದ ‘ಗದ್ದಿಗೆ’ ಕರಾವಳಿ ಮರಾಟಿ ಸಮಾವೇಶ 2024 ಉದ್ಘಾಟಿಸಿ ಅವರು ಮಾತನಾಡಿದರು.
ಸಂವಿಧಾನದ ಆಶಯವನ್ನು ಈಡೇರಿಸುವಲ್ಲಿ ಚುನಾಯಿತ ಪ್ರತಿನಿಧಿಗಳು ರಾಜಕೀಯ ಬಿಟ್ಟು ಕೆಲಸ ಮಾಡಬೇಕು. ಶಿಕ್ಷಣದ ಮೂಲಕ ಆರ್ಥಿಕ ಸದೃಢತೆ ಸಾಧ್ಯ. ರಾಜಕೀಯ ಉದ್ದೇಶ ಇಲ್ಲದೆ ಆರ್ಥಿಕವಾಗಿ ಹಿಂದುಳಿದವರಿಗೆ ಸರ್ಕಾರದ ಗ್ಯಾರಂಟಿ ಯೋಜನೆ ವರದಾನವಾಗಿದೆ ಎಂದರು.
ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿ, ಸಮಾವೇಶ ಹೊಸ ಇತಿಹಾಸ ಸೃಷ್ಟಿ ಮಾಡಿದೆ. ಸಮುದಾಯದ ನ್ಯಾಯಯುತ ಬೇಡಿಕೆ ಈಡೇರಿಸಲು ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸಲಾಗುವುದು ಎಂದರು.
‘ಗದ್ದಿಗೆ’ ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ, ಮಹಾರಾಷ್ಟ್ರದಿಂದ ವಲಸೆ ಬಂದಿರುವ ಮರಾಟಿಗರು ಕರ್ನಾಟಕದಲ್ಲಿ ಶೇ.6.9 ರಷ್ಟಿದ್ದಾರೆ. ಸ್ವಾಭಿಮಾನಿ, ಶ್ರಮ ಜೀವಿಗಳಾಗಿರುವ ಮರಾಟಿಗರು ಗದ್ದಿಗೆ ಸಮಾವೇಶದ ಮೂಲಕ ಸಮಾಜದಲ್ಲಿ ಕ್ರಿಯಾಶೀಲರಾಗಲು ಪ್ರೇರಣೆಯಾಗಲಿ ಎಂದರು.
ಜಮ್ಮು ಮತ್ತು ಕಾಶ್ಮೀರದ ಪ್ರಧಾನ ಕಾರ್ಯದರ್ಶಿ, ಸಮಾವೇಶದ ಅಧ್ಯಕ್ಷ ಎಚ್.ರಾಜೇಶ್ ಪ್ರಸಾದ್ ಅಧ್ಯತೆ ವಹಿಸಿದ್ದರು. ದೇಶ ಸ್ವಾತಂತ್ರ್ಯ ಪಡೆದು ಏಳು ದಶಕವಾದರೂ ಮರಾಟಿ ಸಮಾಜ ಹಿಂದುಳಿದಿದೆ. ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕಾಗಿದೆ. ಈ ಮೂಲಕ ಉನ್ನತ ಸ್ಥಾನಕ್ಕೆ ಹೋಗಲು ಸಾಧ್ಯ ಎಂದರು.
ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ಉದ್ಯಮಿ ಶಶಿಧರ ಶೆಟ್ಟಿ ಬರೋಡ ಮುಖ್ಯ ಅತಿಥಿಗಳಾಗಿದ್ದರು.
ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಅಮೈ ಮಹಾಲಿಂಗ ನಾಯ್ಕ ಅವರನ್ನು ಸನ್ಮಾನಿಸಲಾಯಿತು.
ಕೇಂದ್ರ ಸರ್ಕಾರದ ನಿವೃತ್ತ ಕೃಷಿ ನಿರ್ದೇಶಕ ಡಾ.ಬಿ.ಜಿ.ನಾಯ್ಕ, ಕರ್ನಾಟಕ ಮರಾಟಿ ಸಂಘದ ಅಧ್ಯಕ್ಷೆ ಶೋಭಾವತಿ ಎಂ.ಟಿ., ದಕ್ಷಿಣ ಜಿಲ್ಲಾ ಮರಾಟಿ ಸಮಾಜ ಸೇವಾ ಸಂಘದ ಅಧ್ಯಕ್ಷ ಎನ್.ವಿಶ್ವನಾಥ ನಾಯ್ಕ, ಜಿಲ್ಲಾ ಮರಾಟಿ ಸಂರಕ್ಷಣಾ ಸಮಿತಿ ಅಧ್ಯಕ್ಷ ಅಶೋಕ್ ನಾಯ್ಕ ಕೆದಿಲ, ಸಮ್ಮೇಳನದ ಸಂಚಾಲಕ ಡಾ.ಬಾಲಕೃಷ್ಣ ಸಿ.ಎಚ್., ಕೂಡ್ಲಿ ಮರಾಟಿ ಸಮಾಜದ ಅಧ್ಯಕ್ಷ ರಾಮಚಂದ್ರ ನಾಯ್ಕ್, ಕೆ. ಚಂದ್ರಶೇಖರ ನಾಯ್ಕ್, ಎಸ್‌. ಎಸ್. ಪರಮೇಶ್ವರ, ಸಮ್ಮೇಳನದ ಸಹಸಂಚಾಲಕ ಪ್ರಕಾಶ್ ನಾಯ್ಕ ಮೊದಲಾದವರು ಉಪಸ್ಥಿತರಿದ್ದರು.
ಸಮ್ಮೇಳನದ ಕಾರ್ಯಾಧ್ಯಕ್ಷ ರಾಮಚಂದ್ರ ಕೆಂಬಾರೆ ಅವರು ಮನವಿ ವಾಚಿಸಿದರು.
ಸಮಾವೇಶದ ಗೌರವಾಧ್ಯಕ್ಷ ಡಾ.ಕೆ.ಸುಂದರ ನಾಯ್ಕ್ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಶಂಕರ ನಾಯ್ಕ ವಂದಿಸಿದರು.
ಬಳಿಕ ಶಿಕ್ಷಣ ಮತ್ತು ಯುವಜನತೆ ವಿಷಯದಲ್ಲಿ ಡಾ.ಎಂ.ಮೋಹನ ಆಳ್ವ, ಮರಾಟಿಗರ ಆಚಾರ, ವಿಚಾರ ಮತ್ತು ಸಂಸ್ಕಾರ ವಿಷಯದಲ್ಲಿ ವಕೀಲ ಎನ್.ಎಸ್. ಮಂಜುನಾಥ್, ಮರಾಟಿ ಭಾಷೆ ಉಳಿಸುವುದು ಮತ್ತು ಬೆಳೆಸುವುದು ವಿಷಯದಲ್ಲಿ ದೈಹಿಕ ಶಿಕ್ಷಕಿ ರತಿ ಪ್ರಭಾಕರ ನಾಯ್ಕ, ಮರಾಟಿಗರ ಸಮಸ್ಯೆ ಮತ್ತು ಸವಾಲುಗಳು ವಿಷಯದಲ್ಲಿ ವಕೀಲ ಪ್ರವೀಣ್ ಕುಮಾರ್ ವಿಚಾರ ಮಂಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು