7:57 AM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಮರವಂತೆ ವರಾಹಸ್ವಾಮಿ ದೇವಸ್ಥಾನ: ಭಕ್ತರ ವೇಷದಲ್ಲಿ ಬಂದ ದಂಪತಿಯಿಂದ ಕಾಣಿಕೆ ಡಬ್ಬಿ ಕಳವು ಯತ್ನ; ಸೆರೆ

11/08/2022, 23:35

ಕುಂದಾಪುರ(reporterkarnataka.com):ಮರವಂತೆ ಮಹಾರಾಜ ವರಾಹಸ್ವಾಮಿ ದೇವಸ್ಥಾನಕ್ಕೆ ಭಕ್ತರ ವೇಷದಲ್ಲಿ ಬಂದು ಹಾಡಹಗಲೇ ಕಾಣಿಕೆ ಡಬ್ಬಿ ಕಳವು ಮಾಡಲು ಯತ್ನಿಸಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ. 

ಕಂಬದಕೋಣೆ ನಿವಾಸಿ ಕರುಣಾಕರ ದೇವಾಡಿಗ ಹಾಗೂ ಆತನ ಅಪ್ರಾಪ್ತ ಪತ್ನಿ‌ ಬಂಧಿತ ದಂಪತಿ. ದೇವಸ್ಥಾನದಲ್ಲಿ ಭಕ್ತರ ಸಂಖ್ಯೆ ವಿರಳವಾಗಿದ್ದು, ಪೂಜಾ ಕೆಲಸ ಮುಗಿಸಿ ಅರ್ಚರು ಗರ್ಭಗುಡಿಗೆ ಬಾಗಿಲು ಹಾಗಿ ಮನೆಗೆ ಹೋಗಿದ್ದು, ಈ ಸಂದರ್ಭದಲ್ಲಿ ದಂಪತಿ ದೇಗುಲಕ್ಕೆ ಭಕ್ತರಂತೆ ಬಂದಿದ್ದರು. ಹೊರಗಡೆ ಇದ್ದ ದೇವರಿಗೆ ಕೈಮುಗಿದು ದೇವಸ್ಥಾನ ಪ್ರವೇಶಿಸಿ ಕಾಣಿಕೆ ಡಬ್ಬಿ ಒಡೆಯುವ ಪ್ರಯತ್ನ ಮಾಡಿ ವಿಫಲರಾದರು. ನಂತರ ಗರ್ಭಗುಡಿ ಪ್ರವೇಶಿಸಿ, ಬರಿಗೈಯಲ್ಲಿ ಮರಳಿದ್ದು, ಕಳ್ಳರ ಸಂಪೂರ್ಣ ಚಲನವಲನ ದೇವಸ್ಥಾನದ ಸಿಸಿ ಟಿವಿಯಲ್ಲಿ ದಾಖಲಾಗಿದೆ.

ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸತೀಶ್ ಎಂ.ನಾಯಕ್ ಗಂಗೊಳ್ಳಿ ಠಾಣೆಗೆ ದೂರು ನೀಡಿದ್ದು, ಸಿಸಿಟಿವಿ ದೃಶ್ಯಾವಳಿ ಆಧರಿಸಿ ಪೊಲೀಸರು ದಂಪತಿಯನ್ನು ಬಂಧಿಸಿದ್ದಾರೆ. ಕರುಣಾಕರ ದೇವಾಡಿಗ ಭದ್ರಾವತಿಯ ಅಪ್ರಾಪ್ತೆಯನ್ನು ಮದುವೆಯಾಗಿ, ಕಂಬದಕೋಣಿಯಲ್ಲಿ ವಾಸವಾಗಿದ್ದ ಎನ್ನಲಾಗಿದೆ. ಅಪ್ರಾಪ್ತೆಯನ್ನು ಮದುವೆಯಾದ ಬಗ್ಗೆಯೂ ಪ್ರಕರಣ ದಾಖಲಾಗಿದೆ.

ಗಂಗೊಳ್ಳಿ ಪೊಲೀಸರು ಆರೋಪಿಗಳಿಬ್ಬರನ್ನೂ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಪತಿ ಕರುಣಾಕರ ದೇವಾಡಿಗನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಅಪ್ರಾಪ್ತ ಪತ್ನಿಯನ್ನು ರಿಮ್ಯಾಂಡ್ ಹೋಂ ಗೆ ಸೇರಿಸಲಾಗಿದೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು