11:09 AM Saturday23 - August 2025
ಬ್ರೇಕಿಂಗ್ ನ್ಯೂಸ್
ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಟ್ಟು ಗುಳ್ಳ ನಂಟು ಉಡುಪಿ ಮಠಕ್ಕೂ ಉಂಟು: ವಾದಿರಾಜ ತೀರ್ಥರು ಬದನೆಗೆ ಹೆಸರಿಟ್ಟರಂತೆ! Kodagu | ಸೋಮವಾರಪೇಟೆ: ಯುವಕನ ಆತ್ಮಹತ್ಯೆ; 3 ದಿನಗಳ ಹುಡುಕಾಟದ ಬಳಿಕ ಮೃತದೇಹ… ರಾಜ್ಯದ ಮೊದಲ ‘ವಿದೇಶ ಅಧ್ಯಯನ ಎಕ್ಸ್‌ಪೋ’ ಯಶಸ್ವಿ: 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು…

ಇತ್ತೀಚಿನ ಸುದ್ದಿ

Maravoor | ಸೇತುವೆ ಮೇಲೆತ್ತುವ ಕಾರ್ಯ ಬಹುತೇಕ ಪೂರ್ಣ : ಜುಲೈ 30 ರಿಂದ ಮರವೂರು ಸೇತುವೆ ಓಪನ್ ?

27/07/2021, 15:06

ಮಂಗಳೂರು (ReporterKarnataka.com)

ಮಂಗಳೂರಿನ ಪ್ರಮುಖ ಸಂಪರ್ಕ ಕೊಂಡಿಯಾದ ಮರವೂರು ಸೇತುವೆ ಕುಸಿದ್ದು ಬಿದ್ದಿದ್ದು ಸಂಚಾರಕ್ಕೆ ಬಹಳಷ್ಟು ತೊಂದರೆ ಉಂಟಾಗಿತ್ತು. ಈಗ ಸೇತುವೆಯನ್ನು ಮತ್ತೆ ಎತ್ತರಿಸುವ ಕೆಲಸ ಮಾಡಲಾಗಿದ್ದು, ದುರಸ್ತಿ ಕಾಮಗಾರಿ ಪೂರ್ಣಗೊಂಡಿದೆ.

ಮಂಗಳೂರಿನಿಂದ ಬಜ್ಜೆ ಏರ್ಪೋರ್ಟ್ ಮತ್ತು ಕಟೀಲು ಕಡೆಗೆ ಸಂಪರ್ಕಿಸುವ ರಾಜ್ಯ ಹೆದ್ದಾರಿ ತಿಂಗಳ ಹಿಂದೆ ಕುಸಿದಿತ್ತು. ಇನ್ನೊಂದು ಹೊಸ ಸೇತುವೆ ನಿರ್ಮಾಣ ಸಂದರ್ಭದಲ್ಲಿ ನದಿಗೆ ಮಣ್ಣು ಹಾಕಿದ್ದರಿಂದ ಒಂದು ಭಾಗದಲ್ಲಿ ಮಾತ್ರ ನೀರು ರಭಸವಾಗಿ ಹರಿದ ಪರಿಣಾಮ ಅಲ್ಲಿನ ಹಳೆ ಸೇತುವೆಯ ಪಿಲ್ಲರ್ ಕುಸಿದು ನಿಂತಿತ್ತು. ಹೀಗಾಗಿ ಸೇತುವೆ ಎರಡು ಪಿಲ್ಲರ್ ಗಳ ನಡುವೆ ಒಂದೂವರೆ ಅಡಿಯಷ್ಟು ಸ್ಲಾಬ್ ಕುಸಿದಿತ್ತು.

ಇದೀಗ ಸೇತುವೆಯನ್ನು ಪರ್ಯಾಯ ವ್ಯವಸ್ಥೆಯ ಮೂಲಕ ಎತ್ತರಿಸಲಾಗಿದ್ದು, ತಾತ್ಕಾಲಿಕವಾಗಿ ವಾಹನ ಸಂಚಾರಕ್ಕೆ ಅನುವಾಗುವಂತೆ ಮಾಡಲಾಗಿದೆ. ಕಾಮಗಾರಿ ಪೂರ್ಣಗೊಂಡಿದ್ದು, ಜುಲೈ 30ರಿಂದ ಲಘು ವಾಹನಗಳ ಸಂಚಾರಕ್ಕೆ ಮುಕ್ತ ಮಾಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು