11:50 AM Tuesday3 - February 2026
ಬ್ರೇಕಿಂಗ್ ನ್ಯೂಸ್
ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್… ಕೇಂದ್ರ ಬಜೆಟ್ | 2047ರ ವಿಕಸಿತ ಭಾರತಕ್ಕೆ ಸುಧಾರಣಾ ಎಕ್ಸ್‌ಪ್ರೆಸ್ ಎಂದ ಪ್ರಧಾನಿ… ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ

ಇತ್ತೀಚಿನ ಸುದ್ದಿ

Maravoor | ಸೇತುವೆ ಮೇಲೆತ್ತುವ ಕಾರ್ಯ ಬಹುತೇಕ ಪೂರ್ಣ : ಜುಲೈ 30 ರಿಂದ ಮರವೂರು ಸೇತುವೆ ಓಪನ್ ?

27/07/2021, 15:06

ಮಂಗಳೂರು (ReporterKarnataka.com)

ಮಂಗಳೂರಿನ ಪ್ರಮುಖ ಸಂಪರ್ಕ ಕೊಂಡಿಯಾದ ಮರವೂರು ಸೇತುವೆ ಕುಸಿದ್ದು ಬಿದ್ದಿದ್ದು ಸಂಚಾರಕ್ಕೆ ಬಹಳಷ್ಟು ತೊಂದರೆ ಉಂಟಾಗಿತ್ತು. ಈಗ ಸೇತುವೆಯನ್ನು ಮತ್ತೆ ಎತ್ತರಿಸುವ ಕೆಲಸ ಮಾಡಲಾಗಿದ್ದು, ದುರಸ್ತಿ ಕಾಮಗಾರಿ ಪೂರ್ಣಗೊಂಡಿದೆ.

ಮಂಗಳೂರಿನಿಂದ ಬಜ್ಜೆ ಏರ್ಪೋರ್ಟ್ ಮತ್ತು ಕಟೀಲು ಕಡೆಗೆ ಸಂಪರ್ಕಿಸುವ ರಾಜ್ಯ ಹೆದ್ದಾರಿ ತಿಂಗಳ ಹಿಂದೆ ಕುಸಿದಿತ್ತು. ಇನ್ನೊಂದು ಹೊಸ ಸೇತುವೆ ನಿರ್ಮಾಣ ಸಂದರ್ಭದಲ್ಲಿ ನದಿಗೆ ಮಣ್ಣು ಹಾಕಿದ್ದರಿಂದ ಒಂದು ಭಾಗದಲ್ಲಿ ಮಾತ್ರ ನೀರು ರಭಸವಾಗಿ ಹರಿದ ಪರಿಣಾಮ ಅಲ್ಲಿನ ಹಳೆ ಸೇತುವೆಯ ಪಿಲ್ಲರ್ ಕುಸಿದು ನಿಂತಿತ್ತು. ಹೀಗಾಗಿ ಸೇತುವೆ ಎರಡು ಪಿಲ್ಲರ್ ಗಳ ನಡುವೆ ಒಂದೂವರೆ ಅಡಿಯಷ್ಟು ಸ್ಲಾಬ್ ಕುಸಿದಿತ್ತು.

ಇದೀಗ ಸೇತುವೆಯನ್ನು ಪರ್ಯಾಯ ವ್ಯವಸ್ಥೆಯ ಮೂಲಕ ಎತ್ತರಿಸಲಾಗಿದ್ದು, ತಾತ್ಕಾಲಿಕವಾಗಿ ವಾಹನ ಸಂಚಾರಕ್ಕೆ ಅನುವಾಗುವಂತೆ ಮಾಡಲಾಗಿದೆ. ಕಾಮಗಾರಿ ಪೂರ್ಣಗೊಂಡಿದ್ದು, ಜುಲೈ 30ರಿಂದ ಲಘು ವಾಹನಗಳ ಸಂಚಾರಕ್ಕೆ ಮುಕ್ತ ಮಾಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು