3:33 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

Maravoor | ಸೇತುವೆ ಮೇಲೆತ್ತುವ ಕಾರ್ಯ ಬಹುತೇಕ ಪೂರ್ಣ : ಜುಲೈ 30 ರಿಂದ ಮರವೂರು ಸೇತುವೆ ಓಪನ್ ?

27/07/2021, 15:06

ಮಂಗಳೂರು (ReporterKarnataka.com)

ಮಂಗಳೂರಿನ ಪ್ರಮುಖ ಸಂಪರ್ಕ ಕೊಂಡಿಯಾದ ಮರವೂರು ಸೇತುವೆ ಕುಸಿದ್ದು ಬಿದ್ದಿದ್ದು ಸಂಚಾರಕ್ಕೆ ಬಹಳಷ್ಟು ತೊಂದರೆ ಉಂಟಾಗಿತ್ತು. ಈಗ ಸೇತುವೆಯನ್ನು ಮತ್ತೆ ಎತ್ತರಿಸುವ ಕೆಲಸ ಮಾಡಲಾಗಿದ್ದು, ದುರಸ್ತಿ ಕಾಮಗಾರಿ ಪೂರ್ಣಗೊಂಡಿದೆ.

ಮಂಗಳೂರಿನಿಂದ ಬಜ್ಜೆ ಏರ್ಪೋರ್ಟ್ ಮತ್ತು ಕಟೀಲು ಕಡೆಗೆ ಸಂಪರ್ಕಿಸುವ ರಾಜ್ಯ ಹೆದ್ದಾರಿ ತಿಂಗಳ ಹಿಂದೆ ಕುಸಿದಿತ್ತು. ಇನ್ನೊಂದು ಹೊಸ ಸೇತುವೆ ನಿರ್ಮಾಣ ಸಂದರ್ಭದಲ್ಲಿ ನದಿಗೆ ಮಣ್ಣು ಹಾಕಿದ್ದರಿಂದ ಒಂದು ಭಾಗದಲ್ಲಿ ಮಾತ್ರ ನೀರು ರಭಸವಾಗಿ ಹರಿದ ಪರಿಣಾಮ ಅಲ್ಲಿನ ಹಳೆ ಸೇತುವೆಯ ಪಿಲ್ಲರ್ ಕುಸಿದು ನಿಂತಿತ್ತು. ಹೀಗಾಗಿ ಸೇತುವೆ ಎರಡು ಪಿಲ್ಲರ್ ಗಳ ನಡುವೆ ಒಂದೂವರೆ ಅಡಿಯಷ್ಟು ಸ್ಲಾಬ್ ಕುಸಿದಿತ್ತು.

ಇದೀಗ ಸೇತುವೆಯನ್ನು ಪರ್ಯಾಯ ವ್ಯವಸ್ಥೆಯ ಮೂಲಕ ಎತ್ತರಿಸಲಾಗಿದ್ದು, ತಾತ್ಕಾಲಿಕವಾಗಿ ವಾಹನ ಸಂಚಾರಕ್ಕೆ ಅನುವಾಗುವಂತೆ ಮಾಡಲಾಗಿದೆ. ಕಾಮಗಾರಿ ಪೂರ್ಣಗೊಂಡಿದ್ದು, ಜುಲೈ 30ರಿಂದ ಲಘು ವಾಹನಗಳ ಸಂಚಾರಕ್ಕೆ ಮುಕ್ತ ಮಾಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು