2:54 AM Tuesday21 - April 2026
ಬ್ರೇಕಿಂಗ್ ನ್ಯೂಸ್
ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ…

ಇತ್ತೀಚಿನ ಸುದ್ದಿ

ಮರವೂರು ಸೇತುವೆ ಕುಸಿತ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಯಲಿ: ಮಿಥುನ್ ರೈ ಆಗ್ರಹ

16/06/2021, 09:39

ಮಂಗಳೂರು(reporterkarnataka news): ಮರವೂರು ಸೇತುವೆ ಕುಸಿಯಲು ಕಾರಣದ ಬಗ್ಗೆ ನಿಷ್ಪಕ್ಷಪಾತವಾದ ತನಿಖೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ನಡೆಯಬೇಕೆಂದು ಯುವ ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ಮಿಥುನ್ ರೈ  ಒತ್ತಾಯಿಸಿದರು.

ಡ್ರೆಜ್ಜಿಂಗ್ ನೆಪದಲ್ಲಿ ಇಲ್ಲಿ ಪ್ರತಿನಿತ್ಯ ಮರಳುಗಾರಿಕೆ ನಡೆಯುತ್ತಿರುವುದರಿಂದ ಮರವೂರು ಸೇತುವೆ ದುರಂತ ಸಂಭವಿಸಿದೆ. ಹೊಸ ಸೇತುವೆ ಕಾಮಗಾರಿ ಸಮರೋಪಾದಿಯಲ್ಲಿ ಮುಗಿಸಬೇಕು ಎಂದು ಪತ್ರಿಕಾಗೋಷ್ಠಿಯಲ್ಲಿ ಅವರು ಆಗ್ರಹಿಸಿದರು.

ರೈಲ್ವೇ ಮಾರ್ಗ ಹಾಗೂ ಸೇತುವೆ ನಡುವೆ ಜೆಸಿಬಿಗಳನ್ನು ಉಪಯೋಗಿಸಿ ಕೆಲಸ ನಡೆಯುತ್ತಿದ್ದ ಸಂದರ್ಭ ಸ್ಥಳೀಯರು ವಿಚಾರಿಸಿದಾಗ ಹೂಳೆತ್ತುವ ಕೆಲಸ ಎಂದು ಗಣಿಗಾರಿಕೆ ಅಧಿಕಾರಿಗಳು ತಿಳಿಸಿದ್ದರು. ಆದರೆ ಹೂಳೆತ್ತುವ ಮಣ್ಣನ್ನು ಅಲ್ಲೇ ಸಮೀಪದ ಹೊಂಡಕ್ಕೆ ಹಾಕುವಂತೆ ಸ್ಥಳೀಯರು ಮನವಿ ಮಾಡಿದ್ದೆವು. ಆದರೆ ಅಲ್ಲಿ ಹೂಳೆತ್ತಿದ್ದ ಮಣ್ಣು ಹಾಕಲಾಗಿಲ್ಲ. ಬದಲಾಗಿ ಸುಮಾರು 700 ಲೋಡ್‌ನಷ್ಟು ಮರುಳು ಶೇಖರಣೆಯಾಗಿದೆ ಎಂದು ಸ್ಥಳೀಯರಾದ ಬಾಬು ಶೆಟ್ಟಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ವಿನಯರಾಜ್, ಶಾಲೆಟ್ ಪಿಂಟೋ, ಅನಿಲ್ ಕುಮಾರ್, ಮೆರಿಲ್ ರೇಗೋ, ಸವದ್ ಸುಳ್ಯ, ಸಿರಾಜ್, ಹನೀಫ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು