9:12 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಮಾರ್ಚ್ 10-15: ಅಳಪೆ ಶ್ರೀ ಮುಂಡಿತ್ತಾಯ ದೈವಸ್ಥಾನ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ, ನೇಮೋತ್ಸವವು

05/03/2024, 14:28

ಮಂಗಳೂರು(reporterkarnataka.com): ಅಳಪೆ ಕಣ್ಣೂರಿನಲ್ಲಿರುವ ಪುರಾಣ ಪ್ರಸಿದ್ಧ ಪುಣ್ಯಕ್ಷೇತ್ರ ಶ್ರೀ ಮುಂಡಿತ್ತಾಯ ದೈವಸ್ಥಾನದ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮತ್ತು ನೇಮೋತ್ಸವವು ಮಾರ್ಚ್ 10ರಿಂದ 15ರವರೆಗೆ ವಿಜೃಂಭಣೆಯಿಂದ ಜರುಗಲಿದೆ.

ಮುಂಡಿತ್ತಾಯ ದೈವಸ್ಥಾನದ ಆವರಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ದೈವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಮಾಹಿತಿ ನೀಡಿದರು.
ದೈವಸ್ಥಾನಕ್ಕೆ 850 ವರ್ಷಗಳ ಇತಿಹಾಸವಿದ್ದು, ಭಕ್ತರ ಸಹಕಾರದೊಂದಿಗೆ ಭಂಡಾರ ಮನೆ, ದೈವದ ಗುಡಿಯು ನಿರ್ಮಾಣಗೊಂಡಿದೆ. ಮಾ.13ರಂದು ಶ್ರೀ ಮುಂಡಿತ್ತಾಯ, ಮಹಿಷಂದಾಯ, ಸರಳ ಧೂಮಾವತಿ ಬಂಟ, ಕಾಂತೇರಿ ಧೂಮಾವತಿ ಬಂಟ, ಅಣ್ಣಪ್ಪ ಪಂಜುರ್ಲಿ, ಜಾನುನಾಯಕ, ಪಿಲಿಚಂಡಿ, ಕಲ್ಲುರ್ಟಿ ಕಲ್ಕುಡ ದೈವಗಳ ನೇಮೋತ್ಸವವು ಅಘೋರ ತಾಂತ್ರಿಕ್ ದೇರೆಬೈಲ್ ಬ್ರಹ್ಮಶ್ರೀ ವಿಠಲದಾಸ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿರುವುದು ಎಂದು ಅವರು ತಿಳಿಸಿದರು.
ಮಾ.10ರಂದು ಮಧ್ಯಾಹ್ನ 3 ಗಂಟೆಗೆ ಹಸಿರು ಹೊರೆಕಾಣಿಕೆ ಮೆರವಣಿಗೆ, ಉಗ್ರಾಣ ಮುಹೂರ್ತ ನಡೆಯಲಿದೆ. ಮಾ.11ರ ರಾತ್ರಿ 7 ಗಂಟೆಯಿಂದ ಜಗದೀಶ್ ಆಚಾರ್ಯ ಪುತ್ತೂರು ಇವರಿಂದ ಸಂಗೀತ ಗಾನ ಸಂಭ್ರಮ, 12ರಂದು ರಾತ್ರಿ 8 ಗಂಟೆಯಿಂದ ವಿಠಲ ನಾಯಕ್ ಮತ್ತು ಬಳಗದಿಂದ ಗೀತಾ ಸಾಹಿತ್ಯ ಸಂಭ್ರಮ ನಡೆಯಲಿದೆ.
ಮಾ.15ರಂದು ಸಂಜೆ 6 ಗಂಟೆಯಿಂದ ಕಟೀಲು ಮೇಳದಿಂದ ತ್ರಿಜನ್ಮ ಮೋಕ್ಷ ಯಕ್ಷಗಾನ ಪ್ರದರ್ಶನ ನಡೆಯಲಿದೆ.
ಮಾ.16ರಿಂದ ವಾರ್ಷಿಕ ದೊಂಪದ ಬಲಿ ಜಾತ್ರೆ, ಮಾ.20ರಿಂದ 28ರವರೆಗೆ ವಾರ್ಷಿಕ ನೇಮೋತ್ಸವ ಜರುಗಲಿದೆ. ಪ್ರತಿನಿತ್ಯ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಲಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸತೀಶ್ ರೈ ಬಡಿಲ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಪೆರ್ಲ ರಾಮಕೃಷ್ಣ ನಾಯಕ್, ರಘುರಾಮ್ ಶೆಟ್ಟಿ, ಕಣ್ಣೂರು ಕಾರ್ಪೋರೇಟರ್ ಚಂದ್ರಾವತಿ ವಿಶ್ವನಾಥ್, ಅಳಕೆ ಕಾರ್ಪೋರೇಟರ್ ರೂಪಶ್ರೀ ಪೂಜಾರಿ, ಕೋಟ್ಯಾನ್, ನಿಖಿತ್ ಕೊಟ್ಟಾರಿ
ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು