4:54 AM Tuesday31 - March 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4…

ಇತ್ತೀಚಿನ ಸುದ್ದಿ

ಮಾ.21ರಂದು ಸಾರಿಗೆ ನೌಕರರ ಮುಷ್ಕರ; 23 ಸಾವಿರ ಕೆಎಸ್ಸಾರ್ಟಿಸಿ ಬಸ್ ರಸ್ತೆಗೆ ಇಳಿಯೊಲ್ಲ; ಅನಂತ ಸುಬ್ಬರಾವ್

17/03/2023, 14:11

ಬೆಂಗಳೂರು(reporterkarnataka.com): ವೇತನ ಪರಿಷ್ಕರಣೆ ಸೇರಿದಂತೆ ಸಾರಿಗೆ ನೌಕರರ ಎಲ್ಲ ಬೇಡಿಕೆಗಳನ್ನು ಈಡೇರಿಸದಿದ್ದರೆ ಮಾ. 21ರಂದು ಕರೆ ನೀಡಿರುವ ಸಾರಿಗೆ ಮುಷ್ಕರದಿಂದ ಹಿಂದೇ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಸಾರಿಗೆ ನೌಕರರ ಸಂಘದ ಅಧ್ಯಕ್ಷ ಎಚ್.ವಿ. ಅನಂತ ಸುಬ್ಬರಾವ್ ಹೇಳಿದ್ದಾರೆ.
ಮಾ.21ಕ್ಕೆ ಮುಷ್ಕರ ಆರಂಭಗೊಳ್ಳುತ್ತದೆ. ಮುಖ್ಯಮಂತ್ರಿ ಅವರು ನೇರವಾಗಿ ನಮ್ಮ ಜೊತೆ ಸಭೆ ಮಾಡದೇ ಮೂಲವೇತನ ಶೇ.15ರಚ್ಡು ಹೆಚ್ಚಳ ಘೋಷಣೆ ಮಾಡಿದ್ದಾರೆ. ಸಿಎಂ ನಮ್ಮೊಂದಿಗೆ ಚರ್ಚೆಗೆ ಬರಬೇಕು. ಕೇವಲ ಒಂದು ಬೇಡಿಕೆ ಈಡೇರಿಸುವ ಆದೇಶ ಬಂದರೆ ನಮ್ಮ ಹೋರಾಟ ನಿಲ್ಲದು. ಈ ಹೋರಾಟಕ್ಕೆ ನಾಲ್ಕು ನಿಗಮಗಳ ನೌಕರರು ಬೆಂಬಲ ವ್ಯಕ್ತಪಡಿಸಿದ್ದು, ಮಾ.21ರಿಂದ 23 ಸಾವಿರ ಕೆಎಸ್ಸಾರ್ಟಿಸಿ ಬಸ್‍ಗಳು ರಸ್ತೆಗೆ ಇಳಿಯಲ್ಲ ಎಂದರು.
ಸರಕಾರ ಏಕಪಕ್ಷೀಯವಾಗಿ ಮೂಲ ವೇತನದ ಶೇ15ರಷ್ಟು ಹೆಚ್ಚಳವನ್ನು ಘೋಷಿಸಿರುವುದು ಮಾಧ್ಯಮಗಳಿಂದ ತಿಳಿದು ಬಂದಿದೆ. ಅಧಿಕೃತ ಆದೇಶವೇ ಬಂದಿಲ್ಲ. ಇನ್ನೂ ನೌಕರರ ಭತ್ಯೆ, ವಜಾಗೊಂಡವರ ಮರು ನೇಮಕ ಸೇರಿದಂತೆ ಹಲವು ಬೇಡಿಕೆಗಳು ಹಾಗೆಯೆ ಉಳಿದಿವೆ. ಈ ಹಿನ್ನೆಲೆಯಲ್ಲಿ ಎಲ್ಲ ಬೇಡಿಕೆಗಳು ಈಡೇರಿಸುವವರೆಗೆ ಸಾರಿಗೆ ನೌಕರರ ಸಂಘವು ಮಾ 21 ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲಿದೆ. ಜನರಿಗೆ ತೊಂದರೆ ಮಾಡುವ ಉದ್ದೇಶವಿಲ್ಲ ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು