4:31 PM Sunday12 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ಮಾರ್ಚ್ 25: ಮಂಗಳೂರಿನ ಕೊರ್ಡೆಲ್ ಹೋಲಿ ಕ್ರಾಸ್ ಚರ್ಚ್ ನೇತೃತ್ವದಲ್ಲಿ ‘ಶಿಲುಬೆಯ ಹಾದಿ’

12/03/2024, 16:12

ಮಂಗಳೂರು(reporterkarnataka.com): ನಗರದ ಕೊರ್ಡೆಲ್ ಹೋಲಿ ಕ್ರಾಸ್ ಚರ್ಚು ನೇತೃತ್ವದಲ್ಲಿ ಮಾರ್ಚ್ 25ರಂದು ಸಂಜೆ 4.30 ಗಂಟೆಗೆ “ಶಿಲುಬೆಯ ಹಾದಿ” (ಕುರ್ಸಾಚಿ ವಾಟ್) ನ್ನು ಸಿಟಿ ವಲಯದ 12 ಚರ್ಚುಗಳ ಸಹಯೋಗದಿಂದ ನಡೆಸಲಾಗುತ್ತದೆ.

ಕೊರ್ಡೆಲ್, ವಾಮಂಜೂರ್, ಪಾಲ್ದಾನೆ, ಬೊಂದೇಲ್, ದೇರೆಬೈಲು, ನೀರುಮಾರ್ಗ, ಕೆಲರೈ, ಬಜ್ಜೊಡಿ, ಕಪಿತಾನಿಯೋ, ಬಜಾಲ್, ಪೆರ್ಮಾಯಿ, ಶಕ್ತಿನಗರ ಚರ್ಚುಗಳು ಭಾಗವಹಿಸಲಿದ್ದು, ಏಸುಕ್ರಿಸ್ತರು ಶಿಲುಬೆಯ 14 ಹಾದಿಗಳನ್ನು ಈ ಚರ್ಚುಗಳ ಕಲಾವಿದರ ನಟನೆಯ ಮೂಲಕ ಚರ್ಚಿನ ಆವರಣದ ಒಳಗೆ ನಡೆಸಲಾಗುವುದು. ಶಿಲುಬೆಯ ಹಾದಿಯ 14 ನಿಲ್ದಾಣಗಳನ್ನು (ಸ್ಟೇಶನ್) ನ್ನು ವಲಯದ 12 ಚರ್ಚುಗಳ ಹಾಗೂ ಧರ್ಮಗುರುಗಳ ಮತ್ತು ಧರ್ಮಭಗಿನಿಯರ ಪ್ರತಿನಿಧಿಗಳು ನಡೆಸಿಕೊಡುತ್ತಾರೆ. ಸಂಜೆ 4.30ಕ್ಕೆ ಬಲಿಪೂಜೆ, ನಂತರ ಶಿಲುಬೆಯ ಹಾದಿ, 12ನೇ ನಿಲ್ದಾಣದಲ್ಲಿ ಪ್ರವಚನವನ್ನು ನಡೆಸಿಲಾಗುವುದು.
ಈ ಬಗ್ಗೆ ಪೂರ್ವಭಾವಿ ಸಭೆಯಲ್ಲಿ ಚರ್ಚಿನ ಪ್ರಧಾನ ಧರ್ಮಗುರುಗಳಾದ ವಂ| ಪಾ| ಕ್ಲಿಫರ್ಡ್ ಫೆರ್ನಾಂಡಿಸ್ ಅವರು
ಸ್ಕ್ರಿಪ್ಟ್ ಬಿಡುಗಡೆ ಮಾಡಿದರು. ಸಹಾಯಕ ಧರ್ಮಗುರುಗಳಾದ ವಂ| ಪಾ| ಪಾವುಲ್ ಡಿ’ಸೋಜ, ಧರ್ಮಪ್ರಾಂತ್ಯದ ಪಿ.ಆರ್.ಓ. ರೋಯ್ ಕ್ಯಾಸ್ಟಲಿನೋ, ಚರ್ಚಿನ ಉಪಾಧ್ಯಕ್ಷ ರೂತ್ ಕ್ಯಾಸ್ಟಲಿನೋ, ಕಾರ್ಯದರ್ಶಿ ಅನಿಲ್ ಡೆಸಾ, ಸರ್ವ ಆಯೋಗದ ಸಂಚಾಲಕ ಡೊಲ್ಫಿ ಡಿ’ಸೋಜ, 12 ಚರ್ಚುಗಳ ಉಪಾಧ್ಯಕ್ಷರು ಉಪಸ್ಥಿತರಿದ್ದರು. ಕಲಾವಿದರಿಗೆ ನಿರ್ದೇಶಕರಾಗಿ ಡೆನ್ನಿಸ್ ಮೊಂತೆರೋ ಹಾಗೂ ಸ್ಟಾö್ಯನಿ ಅಲ್ವಾರೀಸ್, ಏಸು ಕ್ರಿಸ್ತರ ಪಾತ್ರ ವನ್ನು ವಿಕಾಸ್ ಕುಲಾಕುಲ್, ಮದರ್ ಮೇರಿಯ ಪಾತ್ರವನ್ನು ಆ್ಯಶೆಲ್ ಡಿ’ಸಿಲ್ವಾ, ಪಿಲಾತನ ಪಾತ್ರವನ್ನು ಆಲ್ವಿನ್ ಪಾಯಸ್ ಮುಂತಾದವರು ನಿರ್ವಹಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು