9:05 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಮಾರ್ಚ್ 25: ಮಂಗಳೂರಿನ ಕೊರ್ಡೆಲ್ ಹೋಲಿ ಕ್ರಾಸ್ ಚರ್ಚ್ ನೇತೃತ್ವದಲ್ಲಿ ‘ಶಿಲುಬೆಯ ಹಾದಿ’

12/03/2024, 16:12

ಮಂಗಳೂರು(reporterkarnataka.com): ನಗರದ ಕೊರ್ಡೆಲ್ ಹೋಲಿ ಕ್ರಾಸ್ ಚರ್ಚು ನೇತೃತ್ವದಲ್ಲಿ ಮಾರ್ಚ್ 25ರಂದು ಸಂಜೆ 4.30 ಗಂಟೆಗೆ “ಶಿಲುಬೆಯ ಹಾದಿ” (ಕುರ್ಸಾಚಿ ವಾಟ್) ನ್ನು ಸಿಟಿ ವಲಯದ 12 ಚರ್ಚುಗಳ ಸಹಯೋಗದಿಂದ ನಡೆಸಲಾಗುತ್ತದೆ.

ಕೊರ್ಡೆಲ್, ವಾಮಂಜೂರ್, ಪಾಲ್ದಾನೆ, ಬೊಂದೇಲ್, ದೇರೆಬೈಲು, ನೀರುಮಾರ್ಗ, ಕೆಲರೈ, ಬಜ್ಜೊಡಿ, ಕಪಿತಾನಿಯೋ, ಬಜಾಲ್, ಪೆರ್ಮಾಯಿ, ಶಕ್ತಿನಗರ ಚರ್ಚುಗಳು ಭಾಗವಹಿಸಲಿದ್ದು, ಏಸುಕ್ರಿಸ್ತರು ಶಿಲುಬೆಯ 14 ಹಾದಿಗಳನ್ನು ಈ ಚರ್ಚುಗಳ ಕಲಾವಿದರ ನಟನೆಯ ಮೂಲಕ ಚರ್ಚಿನ ಆವರಣದ ಒಳಗೆ ನಡೆಸಲಾಗುವುದು. ಶಿಲುಬೆಯ ಹಾದಿಯ 14 ನಿಲ್ದಾಣಗಳನ್ನು (ಸ್ಟೇಶನ್) ನ್ನು ವಲಯದ 12 ಚರ್ಚುಗಳ ಹಾಗೂ ಧರ್ಮಗುರುಗಳ ಮತ್ತು ಧರ್ಮಭಗಿನಿಯರ ಪ್ರತಿನಿಧಿಗಳು ನಡೆಸಿಕೊಡುತ್ತಾರೆ. ಸಂಜೆ 4.30ಕ್ಕೆ ಬಲಿಪೂಜೆ, ನಂತರ ಶಿಲುಬೆಯ ಹಾದಿ, 12ನೇ ನಿಲ್ದಾಣದಲ್ಲಿ ಪ್ರವಚನವನ್ನು ನಡೆಸಿಲಾಗುವುದು.
ಈ ಬಗ್ಗೆ ಪೂರ್ವಭಾವಿ ಸಭೆಯಲ್ಲಿ ಚರ್ಚಿನ ಪ್ರಧಾನ ಧರ್ಮಗುರುಗಳಾದ ವಂ| ಪಾ| ಕ್ಲಿಫರ್ಡ್ ಫೆರ್ನಾಂಡಿಸ್ ಅವರು
ಸ್ಕ್ರಿಪ್ಟ್ ಬಿಡುಗಡೆ ಮಾಡಿದರು. ಸಹಾಯಕ ಧರ್ಮಗುರುಗಳಾದ ವಂ| ಪಾ| ಪಾವುಲ್ ಡಿ’ಸೋಜ, ಧರ್ಮಪ್ರಾಂತ್ಯದ ಪಿ.ಆರ್.ಓ. ರೋಯ್ ಕ್ಯಾಸ್ಟಲಿನೋ, ಚರ್ಚಿನ ಉಪಾಧ್ಯಕ್ಷ ರೂತ್ ಕ್ಯಾಸ್ಟಲಿನೋ, ಕಾರ್ಯದರ್ಶಿ ಅನಿಲ್ ಡೆಸಾ, ಸರ್ವ ಆಯೋಗದ ಸಂಚಾಲಕ ಡೊಲ್ಫಿ ಡಿ’ಸೋಜ, 12 ಚರ್ಚುಗಳ ಉಪಾಧ್ಯಕ್ಷರು ಉಪಸ್ಥಿತರಿದ್ದರು. ಕಲಾವಿದರಿಗೆ ನಿರ್ದೇಶಕರಾಗಿ ಡೆನ್ನಿಸ್ ಮೊಂತೆರೋ ಹಾಗೂ ಸ್ಟಾö್ಯನಿ ಅಲ್ವಾರೀಸ್, ಏಸು ಕ್ರಿಸ್ತರ ಪಾತ್ರ ವನ್ನು ವಿಕಾಸ್ ಕುಲಾಕುಲ್, ಮದರ್ ಮೇರಿಯ ಪಾತ್ರವನ್ನು ಆ್ಯಶೆಲ್ ಡಿ’ಸಿಲ್ವಾ, ಪಿಲಾತನ ಪಾತ್ರವನ್ನು ಆಲ್ವಿನ್ ಪಾಯಸ್ ಮುಂತಾದವರು ನಿರ್ವಹಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು