8:47 AM Tuesday25 - November 2025
ಬ್ರೇಕಿಂಗ್ ನ್ಯೂಸ್
Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್… ಬಾಲಿವುಡ್‌ನ ದಿಗ್ಗಜ ನಟ ಧರ್ಮೇಂದ್ರ ನಿಧನ: ಭಾರತೀಯ ಚಿತ್ರರಂಗದ ‘ಹೀ-ಮ್ಯಾನ್’ಗೆ ವಿದಾಯ ನಾನೇ 5 ವರ್ಷ ಸಿಎಂ ಎಂದು ಎದೆಬಡಿದುಕೊಳ್ಳುವ ಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು: ಬಸವರಾಜ… ಗೋಣಿಕೊಪ್ಪಲು ಸಮೀಪದ ಕೈಕೇರಿ ಬಳಿ ಹಿಟ್ ಅಂಡ್ ರನ್ ಕೇಸ್: ಅಪರಿಚಿತ ವ್ಯಕ್ತಿ… ಐಸಿಡಿಎಸ್ ಸುವರ್ಣ ಮಹೋತ್ಸವ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ… ಹದಗೆಟ್ಟ ರಸ್ತೆಯಲ್ಲಿ ಅವಘಡಗಳ ಸರಮಾಲೆ: ಮಾಕುಟ್ಟಾ ರಸ್ತೆ ಮದ್ಯ ಲಾರಿ ಮಗುಚ್ಚಿ ಸುಗಮ… Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ…

ಇತ್ತೀಚಿನ ಸುದ್ದಿ

ಮಾರ್ಚ್ 3: ಎಂಸಿಸಿ ಬ್ಯಾಂಕಿನ‌ ಬ್ರಹ್ಮಾವರ ಶಾಖೆ ಉದ್ಘಾಟನೆ; 17ನೇ ಹೊಸ ಶಾಖೆ

02/03/2024, 13:58

ಉಡುಪಿ(reporterkarnataka.com): ಎಂಸಿಸಿ ಬ್ಯಾಂಕಿನ‌ ಬ್ರಹ್ಮಾವರ ಶಾಖೆ ಉದ್ಘಾಟನಾ ಸಮಾರಂಭ ವಾರಂಬಳ್ಳಿಯ ಶೇಷಗೋಪಿ ಪ್ಯಾರಡೈಸಿನ ನೆಲ ಮಹಡಿಯಲ್ಲಿ ಮಾರ್ಚ್ 3ರಂದು ಬೆಳಗ್ಗೆ 11.15ಕ್ಕೆ ನಡೆಯಲಿದೆ.
ಉಡುಪಿ ಶಾಸಕ ಯಶಪಾಲ್ ಸುವರ್ಣ ಉದ್ಘಾಟನೆ ನೆರವೇರಿಸುವರು. ಬ್ಯಾಂಕಿನ‌ ಅಧ್ಯಕ್ಷ, ಸಹಕಾರ ರತ್ನ ಅನಿಲ್ ಲೋಬೊ ಅಧ್ಯಕ್ಷತೆ ವಹಿಸುವರು. ಬ್ರಹ್ಮಾವರ ಹೋಲಿ ಫ್ಯಾಮಿಲಿ ಚರ್ಚ್ ಧರ್ಮಗುರು ರೆ.ಫಾ. ಜಾನ್ ಫೆರ್ನಾಂಡಿಸ್ ಆಶೀರ್ವಚನ ನೀಡುವರು. ವಿಕಾರ್ ಜನರಲ್ ರೆ.ಫಾ. ಎಂ.ಸಿ. ಮಥಾಯಿ ಭದ್ರತಾ ಕೊಠಡಿ ಉದ್ಘಾಟಿಸುವರು. ಗೌರವ ಅತಿಥಿಗಳಾಗಿ ಉಡುಪಿ ಧರ್ಮ ಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ರೆ.ಫಾ. ಡೆನ್ನಿಸ್ ಡೇಸಾ, ಉಡುಪಿ ಕೆಥೋಲಿಕ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ರೆ. ಫಾ. ವಿನ್ಸೆಂಟ್ ಕ್ರಾಸ್ತಾ, ಉಡುಪಿ ಜಿಲ್ಲೆ ಹೆಚ್ಚುವರಿ ಪೊಲೀಸ್ ಸುಪರಿಟೆಂಡೆಂಟ್ ಪಿ.ಎ. ಹೆಗ್ಡೆ, ಉಡುಪಿ ಜಿಲ್ಲೆ ಸಹಕಾರಿ ಸಂಘಗಳ ಉಪ ನಿಬಂಧಕ ಎಚ್.ಎನ್. ರಮೇಶ್, ವಾರಂಬಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ನಿತ್ಯಾನಂದ ಬಿ.ಆರ್. ಹಾಗೂ ಉಡುಪಿ ವಕ್ಫ್ ಬೋರ್ಡ್ ನಿಕಟಪೂರ್ವ ಜನಾಬ್ ಕೆ.ಪಿ.‌ ಇಬ್ರಾಹಿಂ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು