2:24 AM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಮಾರ್ಚ್ 3: ಎಂಸಿಸಿ ಬ್ಯಾಂಕಿನ‌ ಬ್ರಹ್ಮಾವರ ಶಾಖೆ ಉದ್ಘಾಟನೆ; 17ನೇ ಹೊಸ ಶಾಖೆ

02/03/2024, 13:58

ಉಡುಪಿ(reporterkarnataka.com): ಎಂಸಿಸಿ ಬ್ಯಾಂಕಿನ‌ ಬ್ರಹ್ಮಾವರ ಶಾಖೆ ಉದ್ಘಾಟನಾ ಸಮಾರಂಭ ವಾರಂಬಳ್ಳಿಯ ಶೇಷಗೋಪಿ ಪ್ಯಾರಡೈಸಿನ ನೆಲ ಮಹಡಿಯಲ್ಲಿ ಮಾರ್ಚ್ 3ರಂದು ಬೆಳಗ್ಗೆ 11.15ಕ್ಕೆ ನಡೆಯಲಿದೆ.
ಉಡುಪಿ ಶಾಸಕ ಯಶಪಾಲ್ ಸುವರ್ಣ ಉದ್ಘಾಟನೆ ನೆರವೇರಿಸುವರು. ಬ್ಯಾಂಕಿನ‌ ಅಧ್ಯಕ್ಷ, ಸಹಕಾರ ರತ್ನ ಅನಿಲ್ ಲೋಬೊ ಅಧ್ಯಕ್ಷತೆ ವಹಿಸುವರು. ಬ್ರಹ್ಮಾವರ ಹೋಲಿ ಫ್ಯಾಮಿಲಿ ಚರ್ಚ್ ಧರ್ಮಗುರು ರೆ.ಫಾ. ಜಾನ್ ಫೆರ್ನಾಂಡಿಸ್ ಆಶೀರ್ವಚನ ನೀಡುವರು. ವಿಕಾರ್ ಜನರಲ್ ರೆ.ಫಾ. ಎಂ.ಸಿ. ಮಥಾಯಿ ಭದ್ರತಾ ಕೊಠಡಿ ಉದ್ಘಾಟಿಸುವರು. ಗೌರವ ಅತಿಥಿಗಳಾಗಿ ಉಡುಪಿ ಧರ್ಮ ಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ರೆ.ಫಾ. ಡೆನ್ನಿಸ್ ಡೇಸಾ, ಉಡುಪಿ ಕೆಥೋಲಿಕ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ರೆ. ಫಾ. ವಿನ್ಸೆಂಟ್ ಕ್ರಾಸ್ತಾ, ಉಡುಪಿ ಜಿಲ್ಲೆ ಹೆಚ್ಚುವರಿ ಪೊಲೀಸ್ ಸುಪರಿಟೆಂಡೆಂಟ್ ಪಿ.ಎ. ಹೆಗ್ಡೆ, ಉಡುಪಿ ಜಿಲ್ಲೆ ಸಹಕಾರಿ ಸಂಘಗಳ ಉಪ ನಿಬಂಧಕ ಎಚ್.ಎನ್. ರಮೇಶ್, ವಾರಂಬಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ನಿತ್ಯಾನಂದ ಬಿ.ಆರ್. ಹಾಗೂ ಉಡುಪಿ ವಕ್ಫ್ ಬೋರ್ಡ್ ನಿಕಟಪೂರ್ವ ಜನಾಬ್ ಕೆ.ಪಿ.‌ ಇಬ್ರಾಹಿಂ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು