10:40 AM Wednesday23 - April 2025
ಬ್ರೇಕಿಂಗ್ ನ್ಯೂಸ್
ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ…

ಇತ್ತೀಚಿನ ಸುದ್ದಿ

ಮಾರ್ಚ್ 4: ರಾಜ್ಯಾದ್ಯಂತ ಅನುದಾನಿತ ಶಾಲಾ-ಕಾಲೇಜುಗಳು ಬಂದ್; ಏನಿವರ ಬೇಡಿಕೆ?

28/02/2022, 18:27

ಬೆಂಗಳೂರು:(reporterkarnataka.com): ರಾಜ್ಯದಾದ್ಯಂತ ಇರುವ ಅನುದಾನಿತ ಶಾಲಾ-ಕಾಲೇಜುಗಳ ನೌಕರರಿಗೂ ಪಿಂಚಣಿ ಸೌಲಭ್ಯವನ್ನು 
ಒದಗಿಸುವಂತೆ ಒತ್ತಾಯಿಸಿ ಮಾರ್ಚ್ 4ರಂದು ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುವುದು.
ಅನುದಾನಿತ ಶಾಲಾ-ಕಾಲೇಜುಗಳ ನೌಕರರ ಸಂಘದ ರಾಜ್ಯಾಧ್ಯಕ್ಷ ಡಿ.ಸಿ ಗೋಪಿನಾಥ್ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ.
2006ರ ನಂತರ ನೇಮಕವಾದ ನೌಕರರಿಗೆ ನೂತನ ಪಿಂಚಣಿ ಯೋಜನೆ ಜಾರಿಗೊಳಿಸಲಾಗಿದೆ.
ಆದರೆ 2006ಕ್ಕೂ ಮೊದಲು ಹಳೆ ಪಿಂಚಣಿ ವ್ಯವಸ್ಥೆಯೇ ಜಾರಿಯಲ್ಲಿತ್ತು. ನೂತನ ಪಿಂಚಣಿ ಯೋಜನೆ ರದ್ದುಪಡಿಸುವಂತೆ ಕೋರಿದರೂ ಸರ್ಕಾರ ಇದುವರೆಗೆ ಕ್ರಮ ಕೈಗೊಂಡಿಲ್ಲ ಎಂದರು.
ಅನುದಾನಿತ ಶಾಲಾ-ಕಾಲೇಜುಗಳಲ್ಲಿ ಕೆಲಸ ಮಾಡುತ್ತಿರುವಂತ ನೌಕರರಿಗೆ ಪಿಂಚಣಿ ಯೋಜನೆ ಸೌಲಭ್ಯವಿಲ್ಲ. ಜ್ಯೋತಿ ಸಂಜೀವಿನಿ ಯೋಜನೆಯನ್ನು ಜಾರಿಗೆ ತರಬೇಕು. ಅಲ್ಲದೇ ಸರ್ಕಾರಿ ಶಾಲಾ ಮಕ್ಕಳಿಗೆ ನೀಡುತ್ತಿರುವಂತ ಸೌಲಭ್ಯವನ್ನು ಅನುದಾನಿತ ಶಾಲೆಗಳಿಗೂ ನೀಡುವಂತೆ ಒತ್ತಾಯಿಸಿ ಮಾರ್ಚ್ 4ರಂದು ರಾಜ್ಯಾಧ್ಯಂತ ಶಾಲಾ-ಕಾಲೇಜು ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು