8:57 PM Sunday15 - February 2026
ಬ್ರೇಕಿಂಗ್ ನ್ಯೂಸ್
ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ!

ಇತ್ತೀಚಿನ ಸುದ್ದಿ

ಮಾರ್ಚ್ ಅಂತ್ಯದೊಳಗೆ 16 ಲಕ್ಷ ಮನೆಗಳ ಹಸ್ತಾಂತರ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸಚಿವ ವಿ.ಸೋಮಣ್ಣ

28/08/2022, 17:48

ಕುಕ್ಕೆಸುಬ್ರಹ್ಮಣ್ಯ(reporterkarnataka.com):  ಹಿಂದಿನ ಸರ್ಕಾರದ ಅವಧಿಯಲ್ಲಿ ಬಾಕಿ ಉಳಿದ 10 ಲಕ್ಷ ಮನೆಗಳೂ ಸೇರಿದಂತೆ ಒಟ್ಟು 16 ಲಕ್ಷ ಮನೆಗಳನ್ನು ಮಾರ್ಚ್‌ 9ರೊಳಗೆ ಫಲಾನುಭವಿಗಳಿಗೆ ನೀಡುವ ವ್ಯವಸ್ಥೆ ಮಾಡಲಾಗುವುದು ಎಂದು ವಸತಿ ಮತ್ತು ಮೂಲ ಸೌಕರ್ಯ ಸಚಿವ ವಿ.ಸೋಮಣ್ಣ ಹೇಳಿದರು.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಅವರು ಸುದ್ದಿಗಾರರ ಜತೆ ಮಾತನಾಡಿದರು. 

ಬೊಮ್ಮಾಯಿ ಮುಖ್ಯಮಂತ್ರಿಯಾದ ಬಳಿಕ ವಸತಿ ಯೋಜನೆಯಡಿ 5 ಲಕ್ಷ ಮನೆಗಳನ್ನು ಗ್ರಾಮೀಣ ಪ್ರದೇಶಕ್ಕೆ, 1 ಲಕ್ಷ ಮನೆಗಳನ್ನು ನಗರ ಪ್ರದೇಶಕ್ಕೆ ನೀಡಿದ್ದಾರೆ. 2.34 ಲಕ್ಷ ಮನೆಗಳ ನಿರ್ಮಾಣ ಕಾರ್ಯ ಗ್ರಾಮೀಣ ಭಾಗದಲ್ಲಿ ಆರಂಭವಾಗಿದೆ ಎಂದು ಸೋಮಣ್ಣ ಹೇಳಿದರು.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸುಮಾರು 750 ಗ್ರಾಮ ಪಂಚಾಯಿತಿಗಳನ್ನು ಆಯ್ಕೆ ಮಾಡಿ, ವಸತಿ ಯೋಜನೆಯಡಿ ಲಕ್ಷಾಂತರ ಮನೆಗಳನ್ನು ನೀಡಲಾಗಿದೆ. ಈಗಾಗಲೇ ಕೆಲಸ ಆರಂಭವಾಗಿದೆ ಎಂದರು.

ವಸತಿ ಯೋಜನೆಯಲ್ಲಿ ಭ್ರಷ್ಟಾಚಾರ ತಡೆಯುವ ಸಲುವಾಗಿ ಇಲಾಖೆಗೆ ಪ್ರತ್ಯೇಕ ಆ್ಯಪ್ ಮಾಡಲಾಗಿದೆ. ಈ ಮೂಲಕ ಪಾರದರ್ಶಕ ವ್ಯವಸ್ಥೆಗೆ ಯೋಜನೆ ಸಿದ್ಧಪಡಿಸಲಾಗಿದೆ. ನೆರೆ ಇತ್ಯಾದಿಗಳಿಂದ ಮನೆ ಹಾನಿಯಾದವರಿಗೆ ಪರಿಹಾರ ವಿತರಿಸಲು ಎ, ಬಿ, ಸಿ ಎಂಬ ವಿಂಗಡಣೆ ಇತ್ತು. ಅದನ್ನು ತೆಗೆದು ಹಾಕಿ ಸರಳೀಕರಣಗೊಳಿಸಲಾಗಿದೆ. ಪರಿಹಾರ ನೀಡಲು ಜಿಲ್ಲಾಧಿಕಾರಿಗೆ ಅಧಿಕಾರ ನೀಡಲಾಗಿದೆ ಎಂದರು.

ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ, ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ವನಜಾ ವಿ.ಭಟ್, ಶೋಭಾ ಗಿರಿಧರ್, ಎಇಒ ಪುಷ್ಪಲತಾ ರಾವ್, ಶಿಷ್ಟಾಚಾರ ಅಧಿಕಾರಿ ಜಯರಾಮ ರಾವ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು